Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮಿರ್ಚಿ ಮಂಡಕ್ಕಿ ಸವಿದು ಖುಷಿಪಟ್ಟ ವಿಜಯೇಂದ್ರ

Public TV
Last updated: February 20, 2021 10:52 pm
Public TV
Share
2 Min Read
vijayendra 1
SHARE

ಕೊಪ್ಪಳ: ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸ್ಸಾಗುತ್ತಿದ್ದಾಗ ಕೊಪ್ಪಳದಲ್ಲಿ ರಸ್ತೆ ಬದಿ ಮಿರ್ಚಿ ಮಂಡಕ್ಕಿ ಸವಿದು ಖುಷಿಪಟ್ಟಿದ್ದಾರೆ.

vijayendra 2

ಕೊಪ್ಪಳ ತಾಲೂಕಿನ ಬುದಗುಂಪಾ ಬಳಿ ರಸ್ತೆ ಬದಿ ಹೊಟೇಲ್ ಒಂದರಲ್ಲಿ ಕುಳಿತು ವಿಜಯೇಂದ್ರ ಮಿರ್ಚಿ ಮಂಡಕ್ಕಿ ರುಚಿ ಸವಿದರು. ಈ ಸಂದರ್ಭದಲ್ಲಿ ಕುರಿ ಉಣ್ಣೆ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ, ಹಾಗೂ ಕರ್ನಾಟಕ ವಿದ್ಯುತ್ ನಿಗಮದ ಅಧ್ಯಕ್ಷ ತಮ್ಮೇಶ್ ಗೌಡ ಜೊತೆಗಿದ್ದರು.

ಈ ಮೊದಲು ಕೊಪ್ಪಳದ ಗಂಗಾವತಿ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಮಾತನಾಡಿದ ವಿಜಯೇಂದ್ರ, ಶ್ರೀರಾಮನಿಗೆ ಜನ್ಮನೀಡಿದ ಪುಣ್ಯಭೂಮಿ ಅಯೋಧ್ಯೆಯಾದ್ರೆ, ಹನುಮನಿಗೆ ಜನ್ಮನೀಡಿದ ಅಂಜನಾದ್ರಿಯು ದಕ್ಷಿಣ ಭಾರತದ ಅಯೋಧ್ಯೆ ಎಂದು ಹೇಳಿದರು.

vijayendra 4 1

ನೂರಾರು ವರ್ಷಗಳ ಕಾಲ ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಅನೇಕ ಹೋರಾಟಗಳು ನಡೆದವು. ಆ ಹೋರಾಟಗಳು ಯಾವವು ಯಶಸ್ವಿಯಾಗಿರಲಿಲ್ಲ. ಆದರೆ ಇಡೀ ಜಗತ್ತೆ ಮೆಚ್ಚಿದ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ನೂರಾರು ವರ್ಷಗಳ ಕನಸು ಈಡೇರುತ್ತಿದೆ. ಸ್ವಾಭಿಮಾನ ಭಾರತದ ಕನಸು ಕಂಡ ಮೋದಿಯವರು ಒಂದು ಕಡೆಯಾದ್ರೆ, ನಾಡಿನ ಹಾಗೂ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕಂಡಿರುವ ಕನಸು ಮತ್ತೊಂದೆಡೆ. ಆ ನಿಟ್ಟಿನಲ್ಲಿ ಇಬ್ಬರಿಗೂ ಏನೇ ತೊಂದರೆಗಳು ಬಂದರೂ ಅವುಗಳನ್ನು ಎದುರಿಸುವ ಶಕ್ತಿಯನ್ನು ಆ ಹನುಮಂತ ನೀಡಲಿ ಎಂದು ಪ್ರಾರ್ಥಿಸಿಕೊಂಡಿದ್ದೇನೆ ಎಂದರು.

vijay

ಇತ್ತಿಚೀನ ದಿನಗಳಲ್ಲಿ ಅಯೋಧ್ಯೆ ರಾಮಮಂದಿರ ಬಗ್ಗೆ ಮಾತನಾಡುವವರ ಸಂಖ್ಯೆ ಹೆಚ್ಚಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಲಿ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದರಿಂದಲೇ ಇಂದು ಅಲ್ಲಿ ಭವ್ಯಮಂದಿರ ನಿರ್ಮಾಣವಾಗುತ್ತಿದೆ. ಜೊತೆಗೆ ಯಾವುದೇ ಒತ್ತಾಯವಿಲ್ಲದೇ ಜನರಿಂದ ದೇಣಿಗೆಯನ್ನು ಸಂಗ್ರಹಿಸಲಾಗುತ್ತಿದೆ. ಆದರೇ ವಿರೋಧ ಪಕ್ಷದವರು ಬಾಯಿಗೆ ಬಂದಹಾಗೇ ಮಾತನಾಡುತ್ತಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತ ಹೇಳಿಕೆಗಳು ಹಾಗೂ ನಡವಳಿಕೆಗಳಿಂದಲೇ ಇಂದು ದೇಶದಲ್ಲಿ ಕಾಂಗ್ರೆಸ್ ಪಕ್ಷವು ಅಡ್ರೆಸ್ ಇಲ್ಲದಂತಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಪಕ್ಷವು ಇಲ್ಲದಂತ ಸನ್ನಿವೇಶ ನಿರ್ಮಾಣವಾಗಲಿದೆ. ಮುಂದಿನ ಬಸವ ಕಲ್ಯಾಣ, ಮಸ್ಕಿ, ಬೆಳಗಾವಿ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಜೊತೆಗೆ ರಾಜ್ಯದಲ್ಲಿ ನುಡಿದಂತೆ ನಡೆಯುವ ಎದೆಗಾರಿಕೆ ಇರುವುದು ಬಿ.ಎಸ್.ಯಡಿಯೂರಪ್ಪನವರಿಗೆ ಮಾತ್ರ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಇದೇ ವೇಳೆ ಬಿಎಸ್‍ವೈ ಅವರ ಉತ್ತರಾಧಿಕಾರಿ ವಿಜಯೇಂದ್ರ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮದು ಪ್ರಾದೇಶಿಕ ಪಕ್ಷವಲ್ಲ, ಇದು ರಾಷ್ಟ್ರೀಯ ಪಕ್ಷ. ಪಕ್ಷಕ್ಕೆ ದುಡಿಯುವವರನ್ನು ಹಾಗೂ ಜನರ ಮನಸ್ಸನ್ನು ಯಾರು ಗೆಲ್ಲುತ್ತಾರೆ. ಯಾರಿಗೆ ಆ ಶಕ್ತಿ ಇದೆ ಎನ್ನುವುದನ್ನು ನೋಡಿ ನಮ್ಮ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ತೀರ್ಮಾನ ಮಾಡುತ್ತಾರೆ. ಮೀಸಲಾತಿ ವಿಚಾರವಾಗಿ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಸಂವಿಧಾನದ ಅಡಿಯಲ್ಲಿ ಕಾನೂನಾತ್ಮಕವಾಗಿ ಏನೂ ಅವಕಾಶಗಳು ಇದೆ ಆ ಬಗ್ಗೆ ತಜ್ಞರೊಂದಿಗೆ ಸಮಾಲೋಚನೆ ಮಾಡಿ ಪರಿಹಾರ ಒದಗಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದಿದ್ದಾರೆ ಎಂದು ಉತ್ತರಿಸಿದರು.

viuaendra

ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ನಾಡನ್ನು ಕಟ್ಟುವಲ್ಲಿ, ಪಕ್ಷವನ್ನು ಬೆಳೆಸುವಲ್ಲಿ ಬಿ.ವೈ.ವಿಜಯೇಂದ್ರ ಅವರು ಶ್ರಮಿಸುತ್ತಿದ್ದಾರೆ. ಏನೇ ಟೀಕೆ ಟಿಪ್ಪಣಿಗಳು ಬಂದರೂ ಅವರು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ರಾಮ ಎಂದ ಕ್ಷಣ ಹನುಮ ನೆನಪಾಗುತ್ತಾನೆ. ಅಯೋಧ್ಯೆಯಲ್ಲಿ ರಾಮನ ಮಂದಿರ ಹೇಗೆ ಅಭಿವದ್ಧಿ ಯಾಗುತ್ತದೆಯೋ ಹಾಗೇ ಅಂಜನಾದ್ರಿಯಲ್ಲಿ ಹನುಮನ ಮಂದಿರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅಭಿಪ್ರಾಯಪಟ್ಟರು.

TAGGED:anjanadriB.Y vijayendrabjpcongressjdsKopalaPublic TVಅಂಜನಾದ್ರಿಕಾಂಗ್ರೆಸ್ಕೊಪ್ಪಳಜೆಡಿಎಸ್ಪಬ್ಲಿಕ್ ಟಿವಿಬಿ.ವೈ.ವಿಜಯೇಂದ್ರಬಿಜೆಪಿ
Share This Article
Facebook Whatsapp Whatsapp Telegram

Cinema Updates

TAAPSEE PANNU 2
ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ತಾಪ್ಸಿ ಪನ್ನು- ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
2 hours ago
prashanth neel
ಜ್ಯೂ.ಎನ್‌ಟಿಆರ್ ಹುಟ್ಟುಹಬ್ಬದಂದು ಪ್ರಶಾಂತ್ ನೀಲ್ ಜೊತೆಗಿನ ಚಿತ್ರದಿಂದ ಅಪ್‌ಡೇಟ್ ಸಿಗಲ್ಲ, ಯಾಕೆ?
3 hours ago
sreeleela 1
ಬಾಲಿವುಡ್ ಚಿತ್ರಕ್ಕಾಗಿ ಸಂಭಾವನೆ ಇಳಿಸಿಕೊಂಡ್ರಾ ‘ಕಿಸ್ಸಿಕ್’ ಬೆಡಗಿ?
4 hours ago
shamanth gowda 1 1
ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ಶಮಂತ್ ಗೌಡ
5 hours ago

You Might Also Like

R Ashok 5
Chikkamagaluru

ಕಾಂಗ್ರೆಸ್ ಬಿದ್ದು ಹೋಗುವ ನುಗ್ಗೆ ಮರ: ಆರ್.ಅಶೋಕ್ ಲೇವಡಿ

Public TV
By Public TV
15 minutes ago
Lashkar terrorist
Latest

2006ರಲ್ಲಿ RSS ಕಚೇರಿ ಮೇಲಿನ ದಾಳಿಯ ಪ್ರಮುಖ ಸಂಚುಕೋರ, ಲಷ್ಕರ್ ಉಗ್ರ ಪಾಕ್‌ನಲ್ಲಿ ಹತ್ಯೆ

Public TV
By Public TV
20 minutes ago
Zameers comment on Kumaraswamy wrong says Priyank Kharge
Bengaluru City

ಆಪರೇಷನ್ ಸಿಂಧೂರ ಬಗ್ಗೆ ಸರಿಯಾದ ಮಾಹಿತಿ ಕೊಟ್ಟಿಲ್ಲ – ಸಂಸತ್ ಅಧಿವೇಶನ ಕರೆಯಲು ಪ್ರಿಯಾಂಕ್ ಖರ್ಗೆ ಒತ್ತಾಯ

Public TV
By Public TV
43 minutes ago
Nusraat Faria 1
Crime

ಮುಜೀಬ್ ಬಯೋಪಿಕ್‌ನಲ್ಲಿ ಶೇಖ್ ಹಸೀನಾ ಪಾತ್ರದಲ್ಲಿ ನಟಿಸಿದ್ದ ಬಾಂಗ್ಲಾ ನಟಿ ಅರೆಸ್ಟ್

Public TV
By Public TV
1 hour ago
Mangaluru FIR
Crime

ಸುಹಾಸ್ ಹತ್ಯೆ | ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟರ್ ವಿರುದ್ಧ FIR

Public TV
By Public TV
2 hours ago
ali khan mahmudabad a political science professor at ashoka university was arrested in delhi 183045231 16x9 0
Crime

ಆಪರೇಷನ್‌ ಸಿಂಧೂರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ – ಅಶೋಕ ವಿಶ್ವವಿದ್ಯಾಲಯದ ಪ್ರೊಫೆಸರ್ ಅರೆಸ್ಟ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?