ಕಾರವಾರ: ರಾಜ್ಯದಲ್ಲಿ ಮೀನುಗಾರರಿಗೆ ಕೊರೊನಾ ಪರಿಹಾರ ಘೋಷಣೆ ವಿಚಾರದಲ್ಲಿ ಇನ್ನೂ ಸರಿಯಾದ ರೂಪುರೇಷೆ ಸಿದ್ದವಾಗಿಲ್ಲ ಎಂದು ಮೀನುಗಾರಿಕೆ ಸಚಿವ ಎಸ್ ಅಂಗಾರ ಹೇಳಿದ್ದಾರೆ. ಇದನ್ನು ಓದಿ: ತುಮಕೂರು, ಎರಡು ಪ್ರತ್ಯೇಕ ಅಪಘಾತ – ನಾಲ್ವರ ಸಾವು
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಮತ್ತು ಬೈತಖೋಲ್ ಬಂದರು ಪ್ರದೇಶಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಮೀನುಗಾರರಿಗೆ ಸೂಕ್ತ ಪರಿಹಾರ ಘೋಷಿಸಿರಲಿಲ್ಲ. ಈ ಬಾರಿ ಮುಖ್ಯಮಂತ್ರಿಗಳು ಗಮನ ನೀಡಿದ್ದಾರೆ. ಮೀನುಗಾರರ ಉಳಿತಾಯ ಪರಿಹಾರ ಯೋಜನೆ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಬರುವ ಶುಕ್ರವಾರ ಮೀನುಗಾರಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಫೈನಲ್ ಮಾಡುತ್ತೇವೆ. ಡಿಸೇಲ್, ಸೀಮೆಎಣ್ಣೆ ಸಬ್ಸಿಡಿ ಬಾಕಿ ಇರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಹೆಚ್ಚುವರಿ ಹಣ ಬಿಡುಗಡೆಗೆ ಒತ್ತಾಯಿಸಿದ್ದೇವೆ ಎಂದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವೆಲ್ಲರೂ ಒಂದು ವಿಚಾರದಲ್ಲಿ ಬೆಳೆದು ಬಂದವರು. ನಮಗೆ ನಾಯಕತ್ವದ ಪ್ರಶ್ನೆ ಬರೋದಿಲ್ಲ. ನಾವು ಯಾವ ನಾಯಕತ್ವದಲ್ಲಿ ಇರಲು ಸಿದ್ದರಿದ್ದೇವೆ. ಹಾಗಂತ ಯಡಿಯೂರಪ್ಪ ಅವರನ್ನ ಬದಲಾಯಿಸಲು ಬಯಸುವುದಿಲ್ಲ ಎಂದು ಅಂಗಾರ ಹೇಳಿದರು. ಇದನ್ನು ಓದಿ: ನಮ್ಮಲ್ಲಿ ಯಾವುದೇ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿಲ್ಲ: ಕೇಂದ್ರ ಸಚಿವ ಜೋಶಿ