ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ: ನಾರಾಯಣಸ್ವಾಮಿ

Public TV
1 Min Read
klr siddaramaiah

ಕೋಲಾರ: ಮುಂದಿನ ವಿದಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ವರ್ಧಿಸುತ್ತಾರೆ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರದ ಹಿತದೃಷ್ಟಿಯಿಂದ ಅವರನ್ನು ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದೇವೆ, ಕೋಲಾರ ಜಿಲ್ಲೆಗೆ ಕೆ.ಸಿ.ವ್ಯಾಲಿ ನೀರಾವರಿ ಯೋಜನೆ ಕೊಟ್ಟವರು ಸಿದ್ದರಾಮಯ್ಯ. ಹೀಗಾಗಿ ಅವರನ್ನು ಕೋಲಾರಕ್ಕೆ ಬರುವಂತೆ ಒತ್ತಾಯ ಮಾಡಿದ್ದೇವೆ. ಕೋಲಾರ ಜಿಲ್ಲೆಗೆ ಸಿದ್ದರಾಮಯ್ಯ ಬರುವುದರಿಂದ ಪಕ್ಷದ ಸಂಘಟನೆ ಆಗಲಿದ್ದು, ನಾನು ಸೇರಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಎಂಎಲ್‍ಸಿ ನಜೀರ್ ಅಹ್ಮದ್, ಮಾಲೂರು ಶಾಸಕ ನಂಜೇಗೌಡ ಎಲ್ಲರೂ ಒತ್ತಾಯ ಮಾಡಿದ್ದೇವೆ ಎಂದರು.

siddaramaiah 4 medium

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಬಳಿ ಆತ್ಮೀಯವಾಗಿರುವುದರಿಂದ ನನಗೆ ಇರುವ ಮಾಹಿತಿ ಪ್ರಕಾರ ಮುಂದಿನ ವಿಧಾನಸಭಾ ಚುನಾವಣೆಗೆ ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರೆ. ಕೆ.ಎಚ್.ಮುನಿಯಪ್ಪ, ಎಂಎಲ್‍ಸಿ ಗೋವಿಂದರಾಜು ಅವರನ್ನು ಕೋಲಾರಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿರುವ ಬಗ್ಗೆ ಕೇಳಿದಾಗ ಇದರಲ್ಲಿ ಯಾವುದೇ ಹುರುಳಿಲ್ಲ, ಸದ್ಯದಲ್ಲೇ ಸಿದ್ದರಾಮಯ್ಯ ಕೋಲಾರಕ್ಕೆ ಬರುವ ಸುದ್ದಿ ಹೊರ ಬೀಳಲಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *