ಮುಂದುವರಿದ ಕೊರೊನಾ ಆರ್ಭಟ 40,990 ಪಾಸಿಟಿವ್ – 271 ಬಲಿ

Public TV
1 Min Read
corona a 1

– ಬೆಂಗಳೂರಿನಲ್ಲಿ 19,353 ಕೇಸ್ – 162 ಸಾವು

ಬೆಂಗಳೂರು: ಇಂದು ಕೂಡ ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ ಒಟ್ಟು 40,990 ಮಂದಿಗೆ ಕೊರೊನಾ ಬಂದಿದ್ದು, ರಾಜ್ಯಾದ್ಯಂತ ಒಟ್ಟು 271 ಜನ ಕೊರೊನಾಗೆ ಬಲಿಯಾಗಿದ್ದಾರೆ.

53830bad e818 4153 82ff 623370999738

ಬೆಂಗಳೂರಿನಲ್ಲಿ ನಿನ್ನೆಗಿಂತ ಕಡಿಮೆ ಕೇಸ್ ಬಂದಿದ್ದು, 19,353 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಗರದ 21 ವರ್ಷದ ಯುವಕ ಸೇರಿ ಒಟ್ಟು 162 ಜನ ಬಲಿಯಾಗಿದ್ದಾರೆ. ಬೆಂಗಳೂರಿನ ಬಳಿಕ ಮೈಸೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಕಂಡಿದ್ದು, ಇಂದು 3,529 ಪ್ರಕರಣ ದಾಖಲಾಗಿದೆ.

d40a0aa2 8b12 4735 b38c 52ac1848e3ef

ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,05,068ಕ್ಕೆ ಏರಿಕೆ ಕಂಡಿದೆ. ಇಂದು ರಾಜ್ಯದಲ್ಲಿ ಒಟ್ಟು 98,402 ಮಂದಿಗೆ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15,64,131ಕ್ಕೆ ಏರಿಕೆ ಕಂಡಿದೆ. ಈ ಪೈಕಿ 11,43,250 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ddae4b0c 36a1 4e67 b141 7dc7af893fe9

ಒಟ್ಟು ಇಲ್ಲಿಯವರೆಗೆ 15,794 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಂದು 13,279 ಆಂಟಿಜನ್ ಟೆಸ್ಟ್, 1,64,703 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 1,77,982 ಕೊರೊನಾ ಪರೀಕ್ಷೆ ಮಾಡಲಾಗಿದೆ.

feb3c9be 7e70 4e88 a33d 4ea499f489df

ತುಮಕೂರು 2,308, ಕಲಬುರಗಿ 1,407, ಮಂಡ್ಯ 1,235, ಬಳ್ಳಾರಿ 1,163, ಕೊಪ್ಪಳ 1019 ದಕ್ಷಿಣ ಕನ್ನಡ 933, ಚಿಕ್ಕಬಳ್ಳಾಪುರದ 820, ಹಾಸನ 790, ಉತ್ತರ ಕನ್ನಡ 687 ಮತ್ತು ಉಡುಪಿಯ 670 ಮಂದಿಗೆ ಸೋಂಕು ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *