ಮುಂಬೈಯಿಂದ ವಸ್ತುಗಳನ್ನು ಖರೀದಿಸಿ ಮಂಗ್ಳೂರಲ್ಲಿ ಮಾರಾಟ: ಪೊಲೀಸ್ ಆಯುಕ್ತ

Public TV
2 Min Read
MNG POLICE COMMISSIONER

– ಪ್ರಖ್ಯಾತ ಆಂಕರ್ ಕಂ ನಟಿ ಜೊತೆಯೂ ಪಾರ್ಟಿ
– ಬಂಧಿತರಿಂದ ನಿಷೇಧಿತ ಮಾದಕ ವಸ್ತುಗಳ ವಶ

ಮಂಗಳೂರು: ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಮಂಗಳೂರಿನಲ್ಲಿ ಇಂದು ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

MNG KISHORE SHETTY

ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಮಂಗಳೂರು ಸಿಸಿಬಿ ಪೋಲಿಸರು, ಇಕಾನಾಮಿಕ್ &ನಾರ್ಕೋಟಿಕ್ ಠಾಣೆಯ ಪೊಲೀಸರ ಕಾರ್ಯಾಚರಣೆ ನಡೆಸಿ ಡ್ಯಾನ್ಸರ್ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇಂದು ಬೆಳಗ್ಗಿನ ಜಾವ ಮಂಗಳೂರು ನಗರದ ಕದ್ರಿ ಪದವು ಪರಿಸರದಲ್ಲಿ ಆರೋಪಿಗಳ ಬಂಧನವಾಗಿದೆ ಎಂದರು.

MNG NOUSHIL

ಆರೋಪಿಗಳನ್ನು ಮಂಗಳೂರು ಸುರತ್ಕಲ್ ಕಾನ ನಿವಾಸಿ ಅಕೀಲ್ ನೌಶೀಲ್ (28) ಹಾಗೂ ಕುಳಾಯಿ ನಿವಾಸಿ ಕಿಶೋರ್ ಅಮನ್ ಶೆಟ್ಟಿ(30) ಎಂದು ಗುರುತಿಸಲಾಗಿದೆ. ಆರೋಪಿಗಳ ಬಳಿಯಿಂದ ಎಂಡಿಎಂ ಪೌಡರ್, ಬೈಕ್, 2 ಮೊಬೈಲ್ ಫೋನ್ ಸೇರಿದಂತೆ 1 ಲಕ್ಷ ಮೌಲ್ಯದ ವಸ್ತು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಕೆಲ ಆರೋಪಿಗಳಿದ್ದಾರೆ. ಇವರ ಚೈನ್ ಲಿಂಕ್ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು.

MNG POLICE 1

ಆರೋಪಿಗಳು ಮುಂಬೈಯಿಂದ ವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಇಬ್ಬರ ಮೇಲೆ ಸೇವನೆ ಮತ್ತು ಮಾರಾಟ ಎರಡೂ ಪ್ರಕರಣ ದಾಖಲಿಸಿದ್ದೇವೆ. ಆರೋಪಿ ಅಕೀಲ್ ನೌಶೀಲ್ ಈ ಹಿಂದೆ ವಿದೇಶದಲ್ಲಿ ಸೇಫ್ಟಿ ಆಫೀಸರ್ ಆಗಿದ್ದ. ಒಂದು ವರ್ಷದ ಊರಿಗೆ ಬಂದಿದ್ದ ಈತ, ಕಿಶೋರ್ ಅಮನ್ ಶೆಟ್ಟಿ ಜೊತೆ ಡ್ಯಾನ್ಸರ್, ಕೋರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ. ಅಲ್ಲದೆ ಅಕೀಲ್ ನೌಶೀಲ್ ಜೊತೆ ಸೇರಿ ಮಾದಕ ವಸ್ತು ಖರೀದಿಸಿ ಮಾರಾಟ ಮಾಡುತ್ತಿದ್ದ. ಬೆಂಗಳೂರು, ಮುಂಬೈಯಿಂದ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

Kishore Shetty

ಖ್ಯಾತ ಡ್ಯಾನ್ಸರ್ ಆಗಿರುವ ಕಿಶೋರ್ ಶೆಟ್ಟಿ, ಹಿಂದಿಯ ಎಬಿಸಿಡಿ ಸಿನಿಮಾದಲ್ಲಿ ನಟಿಸಿದ್ದ. ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ನಲ್ಲೂ ಸ್ಪರ್ಧಿಯಾಗಿದ್ದ ಕಿಶೋರ್ ಶೆಟ್ಟಿ, ಇದೀಗ ಮಂಗಳೂರು ಸಿಸಿಬಿ ಪೊಲೀಸರ ಬಲೆಯಲ್ಲಿದ್ದಾರೆ. ಈತ ಬಹಳ ಮಂದಿ ಹುಡುಗಿಯರಿಗೆ ಡ್ರಗ್ಸ್ ಕೊಟ್ಟು ಪಾರ್ಟಿ ಮಾಡ್ತಾ ಇದ್ದ. ಬೆಂಗಳೂರಿನ ಪ್ರಖ್ಯಾತ ಆಂಕರ್ ಕಂ ನಟಿ ಜೊತೆ ಕೂಡ ಪಾರ್ಟಿ ಮಾಡಿದ್ದು, ಇತ್ತೀಚೆಗಷ್ಟೆ ಮಂಗಳೂರಿನಲ್ಲಿ ಒಂದು ಡ್ರಗ್ ಪಾರ್ಟಿ ಕೂಡ ಆಯೋಜಿಸಿದ್ದ. ಈ ಪಾರ್ಟಿಯಲ್ಲಿ ನಟಿ ಕಂ ಆಂಕರ್ ಭಾಗವಹಿದ್ದರು.

MNG KISHORE SHETTY

ಒಟ್ಟಿನಲ್ಲಿ ನೃತ್ಯ ಸಂಯೋಜಕರಾಗಿರುವ ಕಿಶೋರ್, ಮುಂಬೈ ಸಂಪರ್ಕ ಹೊಂದಿದ್ದಾರೆ. ಮಂಗಳೂರು ಮೂದವನಾಗಿದ್ದರೂ ಮುಂಬೈನಲ್ಲಿ ಹೆಚ್ಚಿನ ಸಂಪರ್ಕ ಹೊಂದಿದ್ದಾರೆ. ಕಿಶೋರ್ ಡ್ರಗ್ಸ್ ದಂಧೆ ಮಾಡುವ ಬಗ್ಗೆ ಮುಂಬೈ ಎನ್‍ಸಿಎಯಿಂದಲೇ ಮಾಹಿತಿ ಬಂದಿದ್ದು, ಆ ಮಾಹಿತಿ ಮೇರಗೆ ದಾಳಿ ನಡೆಸಿದ ಇವರನ್ನ ಬಂಧನ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Share This Article