ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹಾ: ಶಿವರಾಮ್ ಹೆಬ್ಬಾರ್

Public TV
1 Min Read
RCR 10

ರಾಯಚೂರು: ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಕೇವಲ ಊಹಾಪೋಹಾ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಅಂತ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂಂದಿಗೆ ಮಾತನಾಡಿದ ಸಚಿವರು, ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ ಸೂಕ್ತ ಸಮಯದಲ್ಲಿ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಸಿಎಂ ಹಾಗೂ ಹೈಕಮಾಂಡ್‍ಗೆ ಬಿಟ್ಟ ವಿಚಾರ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಮರ್ಥ ನಾಯಕತ್ವ ಹೊಂದಿದೆ ಎಂದರು.

YOGESWAR DKS

ಡಿಕೆಶಿ ಹಾಗೂ ಹೆಚ್‍ಡಿಕೆ ಅಡ್ಜಸ್ಟ್ ಮೆಂಟ್ ರಾಜಕೀಯ ವಿಚಾರದ ಬಗ್ಗೆ ಸಿ.ಪಿ.ಯೋಗೇಶ್ವರ್ ಏನು ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ನಾನು ರಾಜ್ಯ ಪ್ರವಾಸದಲ್ಲಿದ್ದೇನೆ ಅದರ ಬಗ್ಗೆ ತಿಳಿದುಕೊಂಡು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು. ಇದನ್ನೂ ಓದಿ: ಬಿಜೆಪಿ ಬಗ್ಗೆ ಎಚ್‍ಡಿಕೆ ಸಾಫ್ಟ್ ಕಾರ್ನರ್ ಹೊಂದಿರುವುದು ಸತ್ಯ: ಬಸವರಾಜ್ ಹೊರಟ್ಟಿ

ಇದೇ ವೇಳೆ ಎಂಟಿಬಿ ನಾಗರಾಜ್ ಹಾಗೂ ಎಚ್ ವಿಶ್ವನಾಥ್ ಗೆ ಸಚಿವ ಸ್ಥಾನ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು ಅವರನ್ನ ಈಗಾಗಲೇ ಎಂಎಲ್ ಸಿ ಮಾಡಿದ್ದಾರೆ ಸಚಿವರನ್ನಾಗಿ ಮಾಡುವುದು ಸಿಎಂ ಗೆ ಬಿಟ್ಟ ವಿಚಾರ ಅಂತ ಸ್ಪಷ್ಟಪಡಿಸಿದರು. ಇದನ್ನೂ ಓದಿ: 15 ದಿನ ಹಿಂದೆ ಕಾಂಗ್ರೆಸ್‌ಗೆ ಬರ್ತಿನಿ ಅಂತ ಯೋಗೇಶ್ವರ್‌ ನನ್ನ ಬಳಿ ಚರ್ಚಿಸಿದ್ದ – ಡಿಕೆಶಿ

Share This Article
Leave a Comment

Leave a Reply

Your email address will not be published. Required fields are marked *