Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಗಿಯದ ಚಾರ್ಮಾಡಿ ಕಾಮಗಾರಿ- ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಮುಗಿಯದ ಚಾರ್ಮಾಡಿ ಕಾಮಗಾರಿ- ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

Chikkamagaluru

ಮುಗಿಯದ ಚಾರ್ಮಾಡಿ ಕಾಮಗಾರಿ- ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

Public TV
Last updated: March 13, 2021 8:05 am
Public TV
Share
3 Min Read
charmadi
SHARE

– ಎರಡು ವರ್ಷವಾದ್ರೂ ಪೂರ್ಣಗೊಳ್ಳದ ಕಾಮಗಾರಿ
– ಸರ್ಕಾರದ ಮಂದಗತಿ ಕಾರ್ಯಕ್ಕೆ ಸ್ಥಳೀಯರ ಕಿಡಿ

ಚಿಕ್ಕಮಗಳೂರು: 2019ರ ಆಗಸ್ಟನಲ್ಲಿ ಸುರಿದ ಮಳೆಯಿಂದಾಗಿ ಚಾರ್ಮಾಡಿ ರಸ್ತೆಯಲ್ಲಾದ ಅನಾಹುತ ಇನ್ನೂ ದುರಸ್ತಿಯಾಗಿಲ್ಲ, ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೇ ರಸ್ತೆ ಕಾಮಗಾರಿಯನ್ನ ಪೂರ್ಣಗೊಳಿಸಿ ಚಾರ್ಮಾಡಿ ಘಾಟ್ ರಸ್ತೆಯನ್ನ ಸಂಚಾರ ಮುಕ್ತಗೊಳಿಸಬೇಕೆಂದು ಸ್ಥಳೀಯರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

charmadi 1

2019 ಆಗಸ್ಟ್ ತಿಂಗಳಲ್ಲಿ ಜಿಲ್ಲೆಯ ಮಲೆನಾಡು ಭಾಗ 45 ವರ್ಷಗಳಿಂದ ಕಾಣದಂತಹ ಮಳೆಯನ್ನ ಕಂಡು ಕಂಗಾಲಾಗಿದ್ದರು. ಸೇತುವೆಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದಕ್ಕೆ ಲೆಕ್ಕವೇ ಇರಲಿಲ್ಲ. ರಸ್ತೆಗಳು ಮಳೆ ನೀರಲ್ಲಿ ಕೊಚ್ಚಿ ಹೋಗಿತ್ತು. ಅದರಲ್ಲೂ ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ತೀವ್ರ ಕುಸಿತಕ್ಕೆ ಒಳಗಾಗಿತ್ತು. ಕೊಟ್ಟಿಗೆಹಾರದಿಂದ 22 ಕಿ.ಮೀ. ಅಂತರದ ಚಾರ್ಮಾಡಿ ಘಾಟ್ ಸುಮಾರು 20ಕ್ಕೂ ಹೆಚ್ಚು ಕಡೆ ಕುಸಿತ ಕಂಡಿತ್ತು. ಅಂದು ಸರ್ಕಾರ ಮೂರು ತಿಂಗಳಲ್ಲಿ ದುರಸ್ತಿ ಮಾಡುತ್ತೇವೆ ಎಂದಿತ್ತು. ಎರಡು ವರ್ಷವಾದರೂ ಚಾರ್ಮಾಡಿ ಘಾಟ್ ಸಂಚಾರ ಮುಕ್ತವಾಗಿಲ್ಲ.

charmadi 2

ಜಿಲ್ಲೆ ಸೇರಿದಂತೆ ರಾಜ್ಯದ ಜನ ಚಾರ್ಮಾಡಿ ಘಾಟ್ ಮೇಲೆ ಅವಲಂಬಿತರಾಗಿದ್ದಾರೆ. ಆರೋಗ್ಯ ಸಂಬಂಧಿಸಿದಂತೆ ತುರ್ತು ಸಂದರ್ಭದಲ್ಲಿ ಮಂಗಳೂರು-ಉಡುಪಿ ಹೋಗಲು ಚಾರ್ಮಾಡಿ ಅತ್ಯಂತ ಸಹಾಯಕಾರಿ. ಆದರೆ ಈ ಬಹುಪಯೋಗಿ ರಸ್ತೆ ದುರಸ್ತಿಯಾಗುತ್ತಿದ್ದ ಕಾರಣ ಸಂಚಾರಕ್ಕೆ ಅವಕಾಶವಿರಲಿಲ್ಲ. ಈ ಮಾರ್ಗ ತಿಂಗಳುಗಟ್ಟಲೇ ಬಂದ್ ಆಗಿತ್ತು. ಮೂರೇ ತಿಂಗಳಲ್ಲಿ ಸಂಚಾರಮುಕ್ತ ಮಾಡುತ್ತೇವೆ ಎಂದಿದ್ದ ಸರ್ಕಾರ ಎರಡು ವರ್ಷವಾದರೂ ಕಾಮಗಾರಿ ಮುಗಿಸಿಲ್ಲ. ಇದು ಮಲೆನಾಡಿಗರು ಸೇರಿದಂತೆ ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ. ಈಗ ಮತ್ತೆ ಮಳೆಗಾಲದ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮತ್ತೆ ಮಳೆಯಾದ್ರೆ ಇಡೀ ಚಾರ್ಮಾಡಿಯೇ ಇಲ್ಲದಂತಾಗುತ್ತೇನೋ ಅನ್ನೋ ಆತಂಕ ಸ್ಥಳೀಯರು ಹಾಗೂ ರಾಜ್ಯದ ಜನರನ್ನ ಕಾಡುತ್ತಿದೆ. ಸರ್ಕಾರದ ಮಂದಗತಿಯ ಕೆಲಸದ ವಿರುದ್ಧ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

charmadi 3

ಒಂದೆಡೆ ಚಾರ್ಮಾಡಿ ಘಾಟ್‍ನಲ್ಲಿ ಕೆಲಸವೂ ಮಂದಗತಿಯಲ್ಲಿ ನಡೆಯುತ್ತಿದೆ. ಮತ್ತೊಂದೆಡೆ ಭಾರೀ ವಾಹಗಳಿಗೆ ಬ್ರೇಕ್ ಬಿದ್ದಿದೆ. ಈ ಎರಡೂ ಬೆಳೆವಣಿಗೆ ಕೂಡ ಮಲೆನಾಡಿಗರಿಗೆ ಮತ್ತಷ್ಟು ಸಮಸ್ಯೆ ತಂದಿದೆ. ಅದರಲ್ಲೂ ಕೆ.ಎಸ್.ಆರ್.ಟಿ.ಸಿ ಬಸ್‍ಗಳಿಗೆ ಚಾರ್ಮಾಡಿಯಲ್ಲಿ ಸಂಚಾರಕ್ಕೆ ನಿಷೇಧವಿರೋದು ಕೂಡ ಜನಸಾಮಾನ್ಯರ ತೀವ್ರ ಸಂಕಷ್ಟಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಸದ್ಯಕ್ಕೆ ಮಿನಿ ಬಸ್‍ಗಳ ಸಂಚಾರವಿದ್ದರೂ ಅದು ಸೂಕ್ತ ಸಮಯಕ್ಕೆ ಜನಸಾಮಾನ್ಯರ ಕಷ್ಟಕ್ಕೆ ಆಗುತ್ತಿಲ್ಲ. ಗಂಟೆಗೊಂದು ಬಸ್ ಇರೋದು ಬಂದಾಗಲೇ ಬಂತೆಂದು. ಹೋದಾಗಲೇ ಹೊರಡ್ತು ಎಂದು ಜನರಿಗೆ ಮಿನಿ ಬಸ್‍ಗಳ ಮೇಲೂ ಅಸಮಾಧಾನವಿದೆ.

charmadi 4

ಮಿನಿ ಬಸ್ ಕೂಡ ಬೆಳಗ್ಗೆ 6 ರಿಂದ ಸಂಜೆ 4ರವರೆಗೆ ಮಾತ್ರ ಇರೋದು. ಪ್ರತಿ 10 ನಿಮಿಷಕ್ಕೆ ಒಂದು ಬಸ್ಸಿದ್ದ ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಗಂಟೆಗೊಂದು ಬಸ್ ಇರುವುದರಿಂದ ಜನ ತೀವ್ರ ಸಂಕಷ್ಟಕ್ಕೀಡಾಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಸಮರ್ಪಕವಾದ ಆರೋಗ್ಯ ಸೇವೆ ಸೌಲಭ್ಯವಿಲ್ಲದ ಕಾರಣ ಜಿಲ್ಲೆಯ ಜನ ಮಂಗಳೂರು-ಉಡುಪಿ ಮೇಲೆ ಅವಲಂಬಿತರಾಗಿದ್ದಾರೆ. ತುರ್ತು ಸಂದರ್ಭದಲ್ಲಿ ಯಾರಾದರೂ ಮಂಗಳೂರು-ಉಡುಪಿ ಹೋಗಬೇಕಂದರೆ ಖಾಸಗಿ ವಾಹನಗಳಿಗೆ ಸಾವಿರಾರು ರೂಪಾಯಿ ಹಣ ನೀಡಬೇಕೆಂಬುದು ಸ್ಥಳೀಯರು ಅಳಲು. ಆದ್ದರಿಂದ, ಸರ್ಕಾರ ಕೂಡಲೇ ಕೆಲಸ ಮುಗಿಸಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಂಡಬೇಕೆಂದು ಆಗ್ರಹಿಸಿದ್ದಾರೆ.

charmadi 5

ಜನರಿಗೆ ಅನಿವಾರ್ಯ ಹಾಗೂ ಅಗತ್ಯವಾಗಿರುವ ರಸ್ತೆ ಕುಸಿದು ಎರಡು ವರ್ಷವಾದರೂ ಸರ್ಕಾರ ಇನ್ನೂ ಕಾಮಗಾರಿಯನ್ನ ಪೂರ್ಣಗೊಳಿಸದಿರೋದು ಸ್ಥಳೀಯರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೇನು ನಾಳೆ-ನಾಡಿದ್ದು ಎನ್ನುವಷ್ಟರಲ್ಲಿ ಮಲೆನಾಡಲ್ಲಿ ಮಳೆಗಾಲ ಆರಂಭವಾಗಲಿದೆ. ಹೆದ್ದಾರಿ ಪ್ರಾಧಿಕಾರದವರು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಯಾರೂ ಮುಂದೆ ಬರುತ್ತಿಲ್ಲ ಅಂತ ಕಾರಣ ಹೇಳಿಕೊಂಡು ದಿನದೂಡುತ್ತಿದ್ದಾರೆ ಎಂದು ಸ್ಥಳಿಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

TAGGED:Charmadi GhatiChikkamgalurudakshina kannadaPublic TVtransportಉಡುಪಿಚಾರ್ಮಾಡಿ ಘಾಟಿಚಿಕ್ಕಮಗಳೂರುದಕ್ಷಿಣ ಕನ್ನಡಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Garbage Auto
Bengaluru City

ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

Public TV
By Public TV
13 minutes ago
ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
29 minutes ago
Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
54 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
2 hours ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?