ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜಕೀಯ ಜಂಜಾಟಗಳ ನಡುವೆ ಇಂದು ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮುದ್ದಾದ ಮಕ್ಕಳ ಕೆನ್ನೆ ಸವರಿ ಪ್ರೀತಿ ತೋರಿ ಸ್ವಲ್ಪ ರಿಲ್ಯಾಕ್ಸ್ ಮೂಡ್ ನಲ್ಲಿ ಕಾಣಿಸಿಕೊಂಡರು.
- Advertisement 2
ಎಂ.ಎಲ್.ಸಿ. ಆಯನೂರು ಮಂಜುನಾಥ್ ಪುತ್ರ ಸಂತೋಷ್ ಹಾಗೂ ಕಾಂಗ್ರೆಸ್ ಮುಖಂಡ ವೈ.ಹೆಚ್ ನಾಗರಾಜ್ ಪುತ್ರಿ ಲಾವಣ್ಯ ಅವರ ಆರತಕ್ಷತೆ ಆಯೋಜಿಸಲಾಗಿತ್ತು. ಆರತಕ್ಷಕೆಗೆ ಪುತ್ರ ಸಂಸದ ರಾಘವೇಂದ್ರ ಜೊತೆ ಆಗಮಿಸಿದ ಸಿಎಂ, ನವಜೋಡಿಗೆ ಶುಭ ಹಾರೈಸಿ ಆಶೀರ್ವದಿಸಿದರು. ಈ ವೇಳೆ ಸಿಎಂ ಮಂಟಪದಲ್ಲಿದ್ದ ಮುದ್ದು ಮಕ್ಕಳ ಜೊತೆ ಸಮಯ ಕಳೆದರು.
- Advertisement 3
- Advertisement 4
ಮದುವೆಯಲ್ಲಿ ಭಾಗಿಯಾಗಿದ್ದ ಹಲವರು ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಇನ್ನು ಸದಾ ಬ್ಯುಸಿಯಾಗಿರುವ ಮುಖ್ಯಮಂತ್ರಿಗಳು ನಗುತ್ತಲೇ ಎಲ್ಲರ ಸೆಲ್ಫಿಗೆ ಪೋಸ್ ನೀಡಿದರು.