ಗದಗ: ಸಾರಿಗೆ ನೌಕರರು ಇಂದು ನಡೆಸುತ್ತಿರುವ ಮುಷ್ಕರದ ನಡುವೆಯೂ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಪೀಲ್ಡಿಗಿಳಿದಿದೆ. ನಗರದ ಹೊಸ ಬಸ್ ನಿಲ್ದಾಣಕ್ಕೆ ಹೊಸಪೇಟೆ ಘಟಕದ ಬಸ್ ಪ್ರಯಾಣಿಕರನ್ನು ಹೊತ್ತು ತಂದಿದೆ.
ಸರ್ಕಾರಿ ಬಸ್ ಹುಬ್ಬಳ್ಳಿಯಿಂದ ಗದಗ ಮಾರ್ಗವಾಗಿ ಹೊಸಪೇಟೆಗೆ ಸಂಚರಿಸುತ್ತಿದೆ. ಈ ವೇಳೆ ಗದಗ ಬಸ್ ನಿಲ್ದಾಣಕ್ಕೆ ಪ್ರಯಾಣಿಕರನ್ನು ಕರೆತಂದಿದೆ. ಎಲ್ಲಾ ಕಡೆಗಳಲ್ಲಿ ಸಾರಿಗೆ ನೌಕರರು ನಿನ್ನೆಯೇ ಸೆಕೆಂಡ್ ಶಿಫ್ಟ್ಗೆ ಗೈರು ಹಾಜರಾಗಿದ್ದರು. ಆದರೆ ಹೊಸಪೇಟೆ ಘಟಕದ ಕೆಲವು ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿದ್ದರು. ನಿನ್ನೆ ಮಧ್ಯಾಹ್ನ ಬಸ್ ಹೊಸಪೇಟೆಯಿಂದ ಹೊರಟು ರಾತ್ರಿ ಹುಬ್ಬಳ್ಳಿಗೆ ತಲುಪಿದೆ. ಮತ್ತೆ ಇಂದು ಮುಂಜಾನೆ ಹುಬ್ಬಳ್ಳಿಯಿಂದ ಹೊರಟು ಗದಗ ಮಾರ್ಗವಾಗಿ ಹೊಸಪೇಟೆಗೆ ಬಸ್ ತಲುಪಲಿದೆ.
ಕೆಲವರು ನಿನ್ನೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ನಿಜ. ಆದರೆ ಬಂದ್ ಇರೋದು ಇಂದು. ಹಾಗಾಗಿ ಸರ್ಕಾರದ ಆದೇಶವನ್ನು ನಾವು ಪಾಲಿಸಿದ್ದೇವೆ. ಸಂಘಟಕರು ಮತ್ತು ಅಧಿಕಾರಿಗಳು ಹೇಳಿದರೆ ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಹೊಸಪೇಟೆ ಘಟಕದ ಬಸ್ ಚಾಲಕರು ಮತ್ತು ನಿರ್ವಾಹಕರು ಅಭಿಪ್ರಾಯಪಟ್ಟಿದ್ದಾರೆ.