ಮುಷ್ಕರದ ನಡುವೆಯೂ ಸಂಚರಿಸುತ್ತಿದ್ದ ಸರ್ಕಾರಿ ಬಸ್‍ಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

Public TV
1 Min Read
ckd bus 1

ಚಿಕ್ಕೋಡಿ: ಸಾರಿಗೆ ನೌಕರರ ಮುಷ್ಕರದ ನಡುವೆಯು ಸಂಚಾರ ಮಾಡುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‍ಗೆ ಕಿಡಿಗೇಡಿಗಳು ಕಲ್ಲು ತೂರಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗೂಡು ಗ್ರಾಮದ ಬಳಿ ನಡೆದಿದೆ.

ckd bus 2

ಬಸ್‍ಗೆ ಕಲ್ಲು ತೂರಿದ್ದರಿಂದ ಬಸ್‍ನ ಮುಂಭಾಗದ ಗಾಜಿಗೆ ಹಾನಿಯಾಗಿದೆ. ಸಾರಿಗೆ ನೌಕರರ ಮುಷ್ಕರ ಮುಂದುವರೆದಿರುವ ಪರಿಣಾಮ ಮುಷ್ಕರದ ನಡುವೆಯೂ ಜಿಲ್ಲೆಯಲ್ಲಿ ಕೆಲವು ಬಸ್‍ಗಳು ಸಂಚಾರ ಮಾಡುತ್ತಿವೆ. ಈ ನಡುವೆ ಸಂಚಾರ ಮಾಡುತ್ತಿದ್ದ ಬಸ್‍ನ ಮೇಲೆ ಕಲ್ಲು ತೂರಾಟ ನಡೆದಿದೆ.

ಕೆ.ಎಸ್‍.ಆರ್‍.ಟಿಸಿ ಬಸ್ ಸಂಚರಿಸುತ್ತಿದ್ದಂತೆ ಯಾದಗೂಡು ಗ್ರಾಮ ಬಳಿ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಬಸ್ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದಾರೆ. ಚಿಕ್ಕೋಡಿ- ಹುಕ್ಕೇರಿ ಪಟ್ಟಣಗಳ ನಡುವೆ ಈ ಬಸ್ ಸಂಚಾರ ಮಾಡುತ್ತಿತ್ತು. ಕಲ್ಲು ಹೊಡೆದ ಪರಿಣಾಮ ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

bus 4

ಕಲ್ಲು ತೂರಿದ ನಂತರ ಹುಕ್ಕೇರಿ ಬಸ್ ನಿಲ್ದಾಣಕ್ಕೆ ಚಾಲಕ ಬಸ್ ತೆಗೆದುಕೊಂಡು ಬಂದು ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಹುಕ್ಕೇರಿ ಠಾಣೆಯ ಪಿ.ಎಸ್.ಐ ಸಿದ್ದರಾಮಪ್ಪ ಉನ್ನದ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಿಡಿಗೇಡಿಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *