ಬೆಂಗಳೂರು: ಕೊರೊನಾ ಸೋಂಕಿತರ ದಿನದ ಸಂಖ್ಯೆ ಮೂರು ಸಾವಿರದ ಗಡಿಯತ್ತ ಸಾಗುತ್ತಿದ್ದು, ಇಂದು 2,886 ಪ್ರಕರಣಗಳು ಪತ್ತೆಯಾಗಿವೆ. ಮಹಾಮಾರಿಗೆ 8 ಮಂದಿ ಬಲಿಯಾಗಿದ್ದಾರೆ.
ಇಂದಿನ 27/03/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/xWssD7X9PS@mla_sudhakar @Comm_dhfwka @MDNHM_Kar @KarnatakaVarthe @PIBBengaluru @CovidKarnataka pic.twitter.com/Pc2yTzDV6c
— K’taka Health Dept (@DHFWKA) March 27, 2021
ರಾಜ್ಯದಲ್ಲಿ ಇಂದು ಬರೋಬ್ಬರಿ 2,886 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 1,820 ಕೇಸ್ ಪತ್ತೆಯಾಗಿವೆ. ಸಿಲಿಕಾನ್ ಸಿಟಿಯಲ್ಲಿ ಇಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 196 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರ 78, ಕಲಬುರಗಿ 17, ತುಮಕೂರು 14 ಹಾಗೂ ಮಂಡ್ಯದಲ್ಲಿ 10 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,252ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಒಟ್ಟು ಸಂಖ್ಯೆ 9,83,930ಕ್ಕೆ ಏರಿಕೆಯಾಗಿದೆ. ಇಂದು 1,179 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.2.68ರಷ್ಟು ಮತ್ತು ಮರಣ ಪ್ರಮಾಣ ಶೇ.0.27ರಷ್ಟಿದೆ. ಬೆಂಗಳೂರು ನಗರದ ಬಳಿಕ ಉಡುಪಿಯಲ್ಲಿ ಅತ್ಯಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇಂದು ಒಟ್ಟು 36,770 ಜನರಿಗೆ ಲಸಿಕೆ ನೀಡಲಾಗಿದೆ.
ಎಂಐಟಿಯಲ್ಲಿ ಹೆಚ್ಚುತ್ತಿವೆ ಕೇಸ್
ಉಡುಪಿ ಜಿಲ್ಲೆಯಲ್ಲಿ ಇಂದೂ ಕೊರೊನಾ ಸ್ಫೋಟವಾಗಿದ್ದು, 156 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 136 ಕೇಸ್ಗಳು ಮಣಿಪಾಲದ ಎಂಐಟಿ ಕ್ಯಾಂಪಸ್ನಲ್ಲೇ ಪತ್ತೆಯಾಗಿವೆ. ಮಣಿಪಾಲದಲ್ಲಿ ಈವರೆಗೆ 842 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಕಂಟೈನ್ಮೆಂಟ್ ಜೋನಲ್ಲಿರುವವರಿಗೆ ಗಂಟಲು ದ್ರವ ಪರೀಕ್ಷೆ ಮುಂದುವರಿದಿದೆ ಎಂದು ಉಡುಪಿ ಡಿಎಚ್ಒ ಡಾ.ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 11, ಬಳ್ಳಾರಿ 21, ಬೆಳಗಾವಿ 16, ಬೆಂಗಳೂರು ಗ್ರಾಮಾಂತರ 58, ಬೆಂಗಳೂರು ನಗರ 1,820, ಬೀದರ್ 82, ಚಾಮರಾಜನಗರ 7, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 40, ಚಿತ್ರದುರ್ಗ 9, ದಕ್ಷಿಣ ಕನ್ನಡ 39, ದಾವಣಗೆರೆ 4, ಧಾರವಾಡ 41, ಗದಗ 13, ಹಾಸನ 43, ಹಾವೇರಿ 2, ಕಲಬುರಗಿ 147, ಕೊಡಗು 7, ಕೋಲಾರ 33, ಕೊಪ್ಪಳ 6, ಮಂಡ್ಯ 16, ಮೈಸೂರು 131, ರಾಯಚೂರು 10, ರಾಮನಗರ 5, ಶಿವಮೊಗ್ಗ 15, ತುಮಕೂರು 80, ಉಡುಪಿ 156, ಉತ್ತರ ಕನ್ನಡ 14, ವಿಜಯಪುರ 41 ಮತ್ತು ಯಾದಗಿರಿಯಲ್ಲಿ 9 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.