ಮೂರು ಹಸುಗಳ ಮೇಲೆ ಗುಂಡಿನ ದಾಳಿ

Public TV
1 Min Read
mdk cow

ಮಡಿಕೇರಿ: ಕಾಡಿನಲ್ಲಿ ಮೇಯಲು ಬಿಟ್ಟಿದ ಮೂರು ಹಸುಗಳ ಮೇಲೆ ಗುಂಡಿನ ದಾಳಿ ನಡೆಸಿ ಕೊರಳ ಕೊಯ್ದಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಹೆಬ್ಬಾಲೆ ದೇವರಪುರದ ಎಸ್ಟೇಟ್ ವೊಂದರಲ್ಲಿ ನಡೆದಿದೆ.

ಕಾಡಿನಲ್ಲಿ ಮೂರು ಹಸುಗಳ ಮೃತದೇಹ ದೊರೆತಿದ್ದು, ಗುಂಡು ಹಾರಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಹಸುಗಳ ಕುತ್ತಿಗೆಯನ್ನು ಕತ್ತರಿಸಲಾಗಿದೆ. ಮಾಂಸಕ್ಕಾಗಿ ಈ ಕೃತ್ಯ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆಗಡುಕರು ಮೃತದೇಹಗಳನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದಾರೆ. ಹಸುಗಳ ಮಾಲೀಕರದ ರಮೇಶ್ ಸಾಬು ಗಣಪತಿ ಮತ್ತು ಎರವರ ಚುಬ್ರ ಅವರಿಗೆ ಸೇರಿದ ಹಸುಗಳು ಇವಾಗಿವೆ.

ಈ ರೀತಿಯ ಕೃತ್ಯ ಮಾಡಿರುವ ದುಷ್ಕರ್ಮಿಗಳ ಪತ್ತೆಗೆ ಒತ್ತಾಯಿಸಿದ್ದಾರೆ. ಪ್ರಕರಣ ಸಂಬಂಧ ಪೋನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *