ಮಾತಾಡೋ ಮುನ್ನ ಯೋಚನೆ ಮಾಡಬೇಕು- ಡಿಕೆಶಿ ವಿರುದ್ಧ ಸಚಿವ ಸೋಮಣ್ಣ ಕಿಡಿ

Public TV
1 Min Read
SOMANNA 2 1

– ಸಿಟಿ ರವಿ ಬುದ್ಧಿವಂತ, ಭಾರೀ ಕಿಲಾಡಿ ಇದ್ದಾನೆ

ಮಡಿಕೇರಿ: ಮೂಳೆ ಇಲ್ಲದ ನಾಲಿಗೆ ಅಂತ ಏನು ಬೇಕಾದರೂ ಮಾತನಾಡಬಹುದು. ಆದರೆ ಹಾಗೆ ಮಾತನಾಡುವುದು ಎಷ್ಟು ಸರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಒಮ್ಮೆ ಯೋಚನೆ ಮಾಡಬೇಕಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಕಿಡಿಕಾತಿದ್ದಾರೆ.

DKSHI

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ದಿವಂಗತ ಸುರೇಶ್ ಅಂಗಡಿ ಅವರ ಮೃತದೇಹವನ್ನು ಬಿಜೆಪಿಯವರಿಗೆ ಬೆಳಗಾವಿಗೆ ತರಲು ಆಗಲಿಲ್ಲ ಎಂಬ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿದರು. ಸುರೇಶ್ ಅಂಗಡಿ ಅವರ ಬಗ್ಗೆ ನನಗೂ ಸಹ ವಿಶೇಷ ಗೌರವವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೂ ಅವರ ಮೇಲೆ ಅಪಾರ ಗೌರವವಿದೆ. ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ರಾಷ್ಟ್ರ ಕಂಡ ಅಪರೂಪದ ವ್ಯಕ್ತಿತ್ವದವರು. ಅವರು ಮೃತಪಟ್ಟಾಗಲೇ ಅವರ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಲಿಲ್ಲ. ಇದನ್ನೂ ಓದಿ: ನಟಿಯರನ್ನು ಬಿಟ್ಟು ಬೇರೆ ಯಾರೂ ಡ್ರಗ್ಸ್ ತಗೊಂಡಿಲ್ವಾ – ಡಿಕೆಶಿ ಪ್ರಶ್ನೆ

Suresh Angadi 2

ಇತಂಹ ಸಂದರ್ಭದಲ್ಲಿ ಸುರೇಶ್ ಅಂಗಡಿ ಅವರ ಮೃತದೇಹವನ್ನು ಹೇಗೆ ತರಬೇಕಿತ್ತು. ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಅದನ್ನು ರಾಜ್ಯ, ಕೇಂದ್ರ ಸರ್ಕಾರಗಳು ಕಟ್ಟುನಿಟ್ಟಾಗಿ ಪಾಲಿಸಿವೆ. ಇದನ್ನು ಡಿಕೆಶಿ ಆಗಲಿ ಯಾರೇ ಆಗಲಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಸಚಿವ ಸಿ.ಟಿ.ರವಿ ಅವರು ಸಚಿವ ಸ್ಥಾನ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಎರಡನ್ನು ನಿಭಾಯಿಸುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿ.ಟಿ.ರವಿ ನನಗಿಂತ ಬುದ್ಧಿವಂತ ಮತ್ತು ಬಹಳ ಕಿಲಾಡಿ ಇದ್ದಾನೆ. ಎರಡು ಸ್ಥಾನ ಅಷ್ಟೇ ಅಲ್ಲ ನಾಲ್ಕು ಸ್ಥಾನಗಳನ್ನು ಕೊಟ್ಟರು ನಿಭಾಯಿಸುತ್ತಾರೆ. ರವಿ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸುತ್ತೇನೆ ಎಂದರು. ಇದನ್ನೂ ಓದಿ: ಅಂಗಡಿ ಓರ್ವ ಮಂತ್ರಿಯಾಗಿದ್ರೂ ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಸರ್ಕಾರಕ್ಕೆ ಆಗಿಲ್ಲ: ಡಿಕೆಶಿ

CT RAVI

Share This Article
Leave a Comment

Leave a Reply

Your email address will not be published. Required fields are marked *