Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೃತದೇಹ ಕೂಡಲೇ ಹಸ್ತಾಂತರಿಸಿ, ವಿಳಂಬವಾದರೆ ಆಸ್ಪತ್ರೆಗಳ ವಿರುದ್ಧ ಕ್ರಮ: ಡಿಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೃತದೇಹ ಕೂಡಲೇ ಹಸ್ತಾಂತರಿಸಿ, ವಿಳಂಬವಾದರೆ ಆಸ್ಪತ್ರೆಗಳ ವಿರುದ್ಧ ಕ್ರಮ: ಡಿಸಿಎಂ

Bengaluru City

ಮೃತದೇಹ ಕೂಡಲೇ ಹಸ್ತಾಂತರಿಸಿ, ವಿಳಂಬವಾದರೆ ಆಸ್ಪತ್ರೆಗಳ ವಿರುದ್ಧ ಕ್ರಮ: ಡಿಸಿಎಂ

Public TV
Last updated: April 23, 2021 9:46 pm
Public TV
Share
3 Min Read
dcm ashwath narayan
SHARE

– ಮೆಡಿಕಲ್ ಕಿಟ್, ಚಿತಾಗಾರ ಸಮಸ್ಯೆ, ರೆಮ್‍ಡಿಸಿವಿರ್ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ

ಬೆಂಗಳೂರು: ನಗರದ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಅಥವಾ ಕೋವಿಡ್‍ಯೇತರ ಕಾರಣದಿಂದ ಯಾರೇ ಮೃತಪಟ್ಟರೂ ಕೂಡಲೇ ಮೃತ ದೇಹವನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಬೇಕು. ಮೃತದೇಹ ನೀಡುವುದು ತಡವಾದರೆ ಆಸ್ಪತ್ರೆ ವಿರುದ್ಧ ಕ್ರಮ ಜರುಗಿಸಿ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.

WhatsApp Image 2021 04 23 at 7.25.58 PM e1619194377916

ಶುಕ್ರವಾರ ಕೋವಿಡ್ ನಿರ್ವಹಣೆ ಸಂಬಂಧ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆಸ್ಪತ್ರೆಯಿಂದ ಮೃತದೇಹವನ್ನು ಸಂಬಂಧಿಕರಿಗೆ ತಡವಾಗಿ ನೀಡುತ್ತಿರುವುದರಿಂದ ಚಿತಾಗಾರಗಳಲ್ಲಿ ಸಮಸ್ಯೆ ಹೆಚ್ಚಾಗುತ್ತಿದೆ. ಒಮ್ಮೆಗೇ ಮೃತದೇಹಗಳನ್ನು ತರುತ್ತಿರುವುದರಿಂದ ಅವುಗಳ ನಿರ್ವಹಣೆ ಕಷ್ಟವಾಗುತ್ತಿದೆ. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರಿಗೆ ಸೂಚಿಸಿದರು.

ಮೃತರ ಸಂಬಂಧಿಕರು ಮೊದಲೇ ದುಃಖದಲ್ಲಿರುತ್ತಾರೆ. ಅವರ ನೋವನ್ನು ಮತ್ತಷ್ಟು ಹೆಚ್ಚಿಸುವ ಕೆಲಸ ಆಗಬಾರದು. ಕೂಡಲೇ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಮೃತದೇಹವನ್ನು ಹಸ್ತಾಂತರ ಮಾಡಬೇಕು ಎಂದರು.

corona ambulence

ಗ್ಯಾಸ್ ಚಿತಾಗಾರ:
ನಗರದ 13 ವಿದ್ಯುತ್ ಚಿತಾಗಾರಗಳಲ್ಲಿ ಅಂತ್ಯಕ್ರಿಯೆ ನಡೆಯುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗಿರುವ ಕಾರಣ ಶವಸಂಸ್ಕಾರ ತಡ ಆಗುತ್ತಿದೆ. ಹೀಗಾಗಿ ಪ್ರಾಯೋಗಿಕವಾಗಿ ಸುಮ್ಮನಹಳ್ಳಿ ಮತ್ತು ಗಿಡ್ಡ ಹಳ್ಳಿಯಲ್ಲಿ ಗ್ಯಾಸ್ ಚಿತಾಗಾರಗಳನ್ನು ತುರ್ತಾಗಿ ತೆರೆಯಲು ಉದ್ದೇಶಿಸಲಾಗಿದೆ. ಇದು ಯಶಸ್ವಿಯಾದರೆ ಇತರೆಡೆಯೂ ಆ ವ್ಯವಸ್ಥೆ ಮಾಡಲಾಗುವುದು. ಪ್ರತಿ ಚಿತಾಗಾರಕ್ಕೂ 15 ಸ್ಟ್ರೆಚರ್‍ಗಳನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿ ಚಿತಾಗಾರಕ್ಕೂ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಸಮಸ್ಯೆಗಳಿದ್ದರೆ ಬಗೆಹರಿಸುವಂತೆ ತಿಳಿಸಲಾಗಿದೆ ಎಂದು ವಿವರಿಸಿದರು.

Held an emergency meeting in Bengaluru with the Chief Minister’s Political Secretary, Shri @SRVishwanathBJP, @BBMPCOMM and senior officials on the current situation.

1/4 pic.twitter.com/5ig7OioeeL

— Dr. Ashwathnarayan C. N. (@drashwathcn) April 23, 2021

ಪ್ರತಿ ಆರೋಗ್ಯ ಸೇವಾ ಕೇಂದ್ರಕ್ಕೂ ಅನುದಾನ
ನಗರದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೋಂಕಿತರಿಗೆ, ಅದರಲ್ಲೂ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಕೊಡಮಾಡುವ ಮೆಡಿಕಲ್ ಕಿಟ್ ಕೊರತೆ ಉಂಟಾಗಿದೆ. ಕೂಡಲೇ ಈ ಕಿಟ್‍ಗಳನ್ನು ಖರೀದಿ ಮಾಡಲು ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ತಲಾ 2 ಲಕ್ಷ ರೂ. ನೀಡಲಾಗಿದೆ. ಇದು ಸಾಕಾಗುವುದಿಲ್ಲ, ಹೀಗಾಗಿ ವಿಧಾನಸಭಾ ಕ್ಷೇತ್ರವಾರು, ಬಿಬಿಎಂಪಿ ವಿಭಾಗವಾರು ಇನ್ನೂ ಹೆಚ್ಚಿನ ಅನುದಾನ ಅಗತ್ಯ ಇದೆ. ತಕ್ಷಣ ಒದಗಿಸಬೇಕು ಎಂದು ಗೌರವ್ ಗುಪ್ತಾ ಅವರಿಗೆ ಸೂಚಿಸಿದರು. ಹಣ ಒದಗಿಸುವ ಭರವಸೆಯನ್ನು ಗುಪ್ತಾ ನೀಡಿದರು.

corona ambulence 2

ಕೋವಿಡ್ ಸೋಂಕಿತರಿಗೆ ಎಲ್ಲಿಯೂ ರೆಮ್‍ಡಿಸಿವಿರ್ ಸೇರಿ ಯಾವುದೇ ಔಷಧ ಅಥವಾ ಕಿಟ್‍ಗಳ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಕೋವಿಡ್ ಸಹಾಯವಾಣಿ 1912 ಸಂಖ್ಯೆಗೆ ಕೆರೆಗಳು ಹೆಚ್ಚು ಬರುತ್ತಿವೆ. ಸಹಾಯವಾಣಿ ಕೇಂದ್ರದಲ್ಲಿ ಸದ್ಯಕ್ಕೆ ಕರೆ ಸ್ವೀಕರಿಸಲು 30 ಜನರಿದ್ದು, ಇನ್ನೂ 30 ಜನರನ್ನು ನಿಯೋಜಿಸುವಂತೆ ಸೂಚಿಸಿದ್ದೇನೆ. ಕರೆ ಮಾಡುವ ವ್ಯಕ್ತಿಗಳ ಸಮಸ್ಯೆಗಳನ್ನು ಆಲಿಸಿ ಕೂಡಲೇ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ತಿಳಿಸಲಾಗುವುದು ಎಂದರು.

ರಾಜ್ಯದಲ್ಲಿ 7 ಕಡೆ ಕೋವಿಡ್ ಲಸಿಕೆಯನ್ನು ತಯಾರಿಸಲಾಗುತ್ತಿದೆ. ಅಲ್ಲಿಂದ ಲಸಿಕೆ ಬಂದ ಮೇಲೆ ಅದನ್ನು ಸರಿಯಾದ ರೀತಿಯಲ್ಲಿ ಶೇಖರಿಸಿಟ್ಟು ಸಮರ್ಪಕವಾಗಿ ವಿತರಣೆ ಮಾಡಬೇಕು. ದೆಹಲಿಯಲ್ಲಿ ಆದಂತೆ ಯಾವುದೇ ರೀತಿಯಲ್ಲೂ ವ್ಯತ್ಯಯ ಆಗಬಾರದು. ರಾಜ್ಯದಲ್ಲಿ 280 ಆಸ್ಪತ್ರೆಗಳಿಂದ ರೆಮ್‍ಡಿಸಿವಿರ್ ಔಷಧಿಗೆ ಬೇಡಿಕೆ ಬಂದಿದೆ. ಬೇಡಿಕೆ ಅನುಸಾರ ಒದಗಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.

corona virus 2 1

ಸಭೆಯಲ್ಲಿ ಗೌರವ್ ಗುಪ್ತಾ ಜೊತೆ ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಔಷಧ ನಿಯಂತ್ರಣ ಇಲಾಖೆಯ ಉಪ ನಿರ್ದೇಶಕ ಸುರೇಶ್ ಹಾಗೂ ಇತರರು ಇದ್ದರು.

TAGGED:bbmpCorona VirusDCM Ashwath NarayanPublic TVಕೊರೊನಾ ವೈರಸ್ಡಿಸಿಎಂ ಅಶ್ವಥ್ ನಾರಾಯಣ್ಪಬ್ಲಿಕ್ ಟಿವಿಬಿಬಿಎಂಪಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Yatnal
Latest

ಭಾರತದ ಗಾಳಿ ಸೇವಿಸಿ, ಯಾವುದೋ ದೇಶದ ಅಧ್ಯಕ್ಷ ಸತ್ತರೆ ಇಲ್ಲಿ ಅಳುವುದು ಯಾಕೆ?: ಯತ್ನಾಳ್‌

Public TV
By Public TV
26 minutes ago
US F 15 Jets Shot Down
Latest

ಕುವೈತ್‌ ಎಡವಟ್ಟಿಗೆ ಅಮೆರಿಕದ 3 F-15 ವಿಮಾನ ಪತನ

Public TV
By Public TV
57 minutes ago
Siddaramaiah DK Shivakumar Narendra Modi
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಮೋದಿಗೆ ಸಿಎಂ ಪತ್ರ

Public TV
By Public TV
1 hour ago
us and israeli military operations natanz nuclear facility hit says iran iaea flags risk of radiation leak
Latest

ಇರಾನ್‌ ಪರಮಾಣು ಸೌಲಭ್ಯದ ಮೇಲೆ ದಾಳಿ – ವಿಕಿರಣ ಸೋರಿಕೆಯ ಆತಂಕ

Public TV
By Public TV
2 hours ago
Benjamin Netanyahu
Latest

ನೆತನ್ಯಾಹು ಕಚೇರಿ, ಇಸ್ರೇಲಿ ವಾಯುಪಡೆಯ ಕಮಾಂಡರ್ ಮೇಲೆ ಕ್ಷಿಪಣಿ ದಾಳಿ

Public TV
By Public TV
2 hours ago
Male Mahadeshwar
Chamarajanagar

ಮಲೆ ಮಹದೇಶ್ವರನಿಗೆ ತಟ್ಟಲ್ಲ ಗ್ರಹಣದ ಎಫೆಕ್ಟ್: ಚಂದ್ರಗ್ರಹಣವಿದ್ದರೂ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?