ಮೇಕೆದಾಟು ಮಾಡೇ ಮಾಡುತ್ತೇವೆ, ನಾಡಿನ ರಕ್ಷಣೆ ನಮ್ಮ ಹೊಣೆ: ಜಿಎಂ ಸಿದ್ದೇಶ್ವರ್

Public TV
2 Min Read
gm siddeshwar2

– ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ನನ್ನ ವಿರೋಧವಿಲ್ಲ

ದಾವಣಗೆರೆ: ಯಾರೇ ಪ್ರತಿಭಟನೆ ಮಾಡಲಿ ಮೇಕೆದಾಟು ಯೋಜನೆ ಮಾಡೇ ಮಾಡುತ್ತೇವೆ ಎಂದು ದಾವಣಗೆರೆಯಲ್ಲಿ ಸಂಸದ ಜಿಎಂ ಸಿದ್ದೇಶ್ವರ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮೇಕೆದಾಟು ಯೋಜನೆ ಕುರಿತು ಮಾತನಾಡಿದ್ದಾರೆ. ಈಗಾಗಲೇ ಸಿಎಂ ನಿರ್ಧಾರ ಮಾಡಿದ್ದಾರೆ. ಮೇಕೆದಾಟು ಮಾಡೇ ಮಾಡುತ್ತೇವೆ. ನಾವು ಯಾರಿಗೂ ಜಗ್ಗಲ್ಲ ಬಗ್ಗಲ್ಲ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಏನು ಹೇಳಿದ್ದಾರೋ ಗೊತ್ತಿಲ್ಲ. ನಮ್ಮ ನಾಡಿನ ರಕ್ಷಣೆ ನಮ್ಮ ಹೊಣೆ. ಹೀಗಾಗಿ ಮೇಕೆದಾಟು ಮಾಡೇ ಮಾಡುತ್ತೇವೆ ಎಂದಿದ್ದಾರೆ.

Mekedatu project 5

ಇದೇ ವೇಳೆ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ನಾನು ವಿರೋಧ ಮಾಡಲ್ಲ. ಕ್ಯಾಂಟಿನ್ ಹೆಸರಿನಲ್ಲಿ ನಾನಾ ರೀತಿಯಲ್ಲಿ ವಿರೋಧ ಆಗುತ್ತಿದೆ. ಇಂದಿರಾ ಗಾಂಧಿ ನಮ್ಮ ದೇಶದ ಲೀಡರ್ ಆಗಿದ್ದವರು. ದೇಶದ ಪ್ರಧಾನಿಯಾಗಿ ಹತ್ತು ಹದಿನೈದು ವರ್ಷ ಆಡಳಿತ ಮಾಡಿದವರಾಗಿದ್ದಾರೆ. ವಾಜಪೇಯಿ, ಇಂದಿರಾ ಗಾಂಧಿ ಆಡಳಿತ ಅಲ್ಲಗೆಳೆಯಲು ಆಗಲ್ಲ. ಆದ್ದರಿಂದ ಈ ಬಗ್ಗೆ ನಾನು ವಿರೋಧ ಮಾಡಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ತೀರ್ಮಾನ ಮಾಡುತ್ತೆ. ಹುಕ್ಕಾ ಬಾರ್ ಬಗ್ಗೆ ನನಗೆ ಏನಂತ ಗೊತ್ತಿಲ್ಲ ಎಂದ ಸಿದ್ದೇಶ್ವರ್ ಹೇಳಿದ್ದಾರೆ. ಇದನ್ನೂ ಓದಿ:  ಮೇಕೆದಾಟು ಯೋಜನೆ ಬಗ್ಗೆ ಸಿಎಂ ನಿಲುವು ಸ್ಪಷ್ಟಪಡಿಸಬೇಕು: ಸಿದ್ದರಾಮಯ್ಯ

Mekedatu project 1

ಏನಿದು ಮೇಕೆದಾಟು ಯೋಜನೆ?
ಬೆಂಗಳೂರಿನಿಂದ 90 ಕಿ.ಮೀ ದೂರದ ರಾಮನಗರ ಜಿಲ್ಲೆಯಲ್ಲಿರುವ ಸ್ಥಳವೇ ಮೇಕೆದಾಟು. ಕಾವೇರಿ ಮತ್ತು ಅರ್ಕಾವತಿ ನದಿಗಳ ಸಂಗಮ ಸ್ಥಳದಿಂದ 4 ಕಿಲೋಮೀಟರ್ ದೂರದಲ್ಲಿದೆ ಮೇಕೆದಾಟು. ಮೇಕೆದಾಟು ಬಳಿ ಕುಡಿಯುವ ನೀರಿನ ಯೋಜನೆಗಾಗಿ ಕಾವೇರಿ ನದಿಗೆ ಅಡ್ಡಲಾಗಿ ಕಿರು ಅಣೆಕಟ್ಟು ಕಟ್ಟಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕಾವೇರಿ ನದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಬಾರಿಯೂ ಕ್ಯಾತೆ ತೆಗೆಯುತ್ತದೆ.

Mekedatu project 4

ಕರ್ನಾಟಕಕ್ಕೆ ಈ ಅಣೆಕಟ್ಟು ಅಗತ್ಯ ಯಾಕೆ?
ಬೆಂಗಳೂರು ನಗರಕ್ಕೆ ನೀರು ಬರುವುದು ಕೆಆರ್‍ಎಸ್ ಡ್ಯಾಂನಿಂದ. ಮಳೆಗಾಲದಲ್ಲಿ ಡ್ಯಾಂ ಭರ್ತಿಯಾದರೆ ಬೆಂಗಳೂರು ಜನತೆಗೆ ನೀರು ಭಾಗ್ಯ. ಬೆಂಗಳೂರು ನಗರಕ್ಕೆ ಪ್ರತಿದಿನ 1400 ದಶಲಕ್ಷ ಲೀಟರ್‍ನ ಅಗತ್ಯವಿದೆ. ಬೇಸಿಗೆ ಸಮಯದಲ್ಲಿ ನೀರಿನ ಬೇಡಿಕೆ ಶೇ.15ರಷ್ಟು ಹೆಚ್ಚಾಗುತ್ತದೆ. ತಿಪ್ಪಗೊಂಡನಹಳ್ಳಿ ಜಲಾಶಯದಿಂದ 2012ರಲ್ಲಿ ನೀರು ಪಂಪಿಂಗ್ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಬೆಂಗಳೂರಿನ ನೀರಿನ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಇಲ್ಲಿ ಸಂಗ್ರಹವಾದ ಡ್ಯಾಂ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗೆ ಬಳಸುವ ಉದ್ದೇಶ ರಾಜ್ಯ ಸರ್ಕಾರದ್ದಾಗಿದೆ.

Share This Article