Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ -ಸುರೇಶ್ ಕುಮಾರ್

Public TV
Last updated: May 12, 2021 7:20 pm
Public TV
Share
3 Min Read
SURESH KUMAR 1
SHARE

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ನೀಡಬೇಕಾದ ಬಾಕಿ ಉಳಿದಿರುವ ಅಹಾರ ಧಾನ್ಯಗಳನ್ನು ಮೇ ತಿಂಗಳ ಅಂತ್ಯದೊಳಗೆ ಪೂರ್ಣವಾಗಿ ವಿತರಿಸಲು ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

SURESH KUMAR 3

ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಉಪಹಾರದ ಬದಲಿಗೆ ನೀಡಲಾಗುತ್ತಿದ್ದ ಬಾಕಿ ಉಳಿದಿರುವ ಅಡುಗೆ ಎಣ್ಣೆ ಸೇರಿದಂತೆ ಆಹಾರ ಧಾನ್ಯಗಳನ್ನು ಲಾಕ್‍ಡೌನ್ ಅವಧಿ ಮುಗಿದ ತಕ್ಷಣವೇ ವಿತರಿಸಬೇಕೆಂದು ನಿರ್ದೇಶನ ನೀಡಲಾಗಿದೆ. ಈ ಆಹಾರ ಧಾನ್ಯಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದ್ದು, ಪೂರ್ಣ ದಿನಗಳಿಗೆ ವಿತರಣೆ ಮಾಡಲು ಅಗತ್ಯವಿರುವ ಆಹಾರ ಧಾನ್ಯ ಕೆಎಸ್‍ಎಫ್‍ಸಿ ಗೋದಾಮುಗಳಲ್ಲಿ ಏಕ ಕಾಲದಲ್ಲಿ ಸಂಗ್ರಹಣೆ ಮಾಡಿ ವಿತರಿಸಲು ಕಷ್ಟಸಾಧ್ಯವಾಗಿರುವುದರಿಂದ ಎರಡು ಹಂತಗಳಲ್ಲಿ ವಿತರಿಸಲು ತೀರ್ಮಾನಿಸಿ ಈಗಾಗಲೇ ಒಂದು ಹಂತದ ವಿತರಣೆ ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮೊದಲ ಹಂತದ 108 ದಿನಗಳ ಆಹಾರ ಧಾನ್ಯಗಳನ್ನು ಎಲ್ಲ ಶಾಲೆಗಳಿಗೆ ವಿತರಿಸಲಾಗಿದೆ. ಉಳಿದ ಅವಧಿಯಾದ 2021ರ ನವೆಂಬರ್ ನಿಂದ 2021ಮಾರ್ಚ್ ವರೆಗಿನ 132 ದಿನಗಳಿಗೆ ಸಂಬಂಧಿಸಿದ ಆಹಾರ ಧಾನ್ಯಗಳನ್ನು ಕೆಲವು ಶಾಲೆಗಳಿಗೆ ವಿತರಿಸಲಾಗಿದೆ. ಲಾಕ್‍ಡೌನ್ ಘೋಷಣೆಯಾದ್ದರಿಂದ ಕೆಲವು ಶಾಲೆಗಳಿಗೆ ಎರಡನೇ ಹಂತದ ಆಹಾರ ಧಾನ್ಯಗಳನ್ನು ವಿತರಿಸಲು ಸಾಧ್ಯವಾಗಿಲ್ಲ. ಲಾಕ್‍ಡೌನ್ ಮುಗಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಿ ಉಳಿದ ಶಾಲೆಗಳಿಗೆ ಮೇ ಅಂತ್ಯದೊಳಗೆ ವಿತರಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Private School Students

ತೊಗರಿ ಬೇಳೆ ಸರಬರಾಜುದಾರರಿಗೆ ಏ. 27ರಂದು ಮತ್ತು ಅಡುಗೆ ಎಣ್ಣೆ ಸರಬರಾಜುದಾರರಿಗೆ ಮೇ 7ರಂದು ಸರಬರಾಜು ಕಾರ್ಯಾದೇಶ ನೀಡಲಾಗಿದೆ. ದಾಸ್ತಾನಿನಲ್ಲಿರುವ ಆಹಾರ ಧಾನ್ಯಗಳನ್ನು ಡಿಡಿಪಿಐ ಮತ್ತು ಜಿಪಂ ಸಿಇಒಗಳೊಂದಿಗೆ ಚರ್ಚಿಸಿ ತಕ್ಷಣವೇ ಕೂಡಲೇ ವಿತರಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಶಾಲೆಗಳ ಮುಖ್ಯಸ್ಥರು ಶಾಲೆಗಳಲ್ಲಿ ಹಾಜರಿರುವಂತೆ ಸೂಚಿಸಿ, ಸೂಚಿತ ಅವಧಿಗೆ ಆಹಾರ ಧಾನ್ಯಗಳ ವಿತರಣೆಗೆ ಕ್ರಮ ವಹಿಸಲಾಗುತ್ತದೆ. ಶಾಲೆಗಳು ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಪ್ರಸ್ತುತ ಆರು ತಿಂಗಳ ಅವಧಿಗೆ ಒಂದು ಬಾರಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದ್ದು, ಮುಂದಿನ ಶೈಕ್ಷಣಿಕ ಸಾಲಿನಿಂದ ಇದನ್ನು ಸರಿಪಡಿಸಲಾಗುತ್ತದೆ. ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ ತಿಂಗಳು ವಿದ್ಯಾರ್ಥಿಗಳ ಮನೆಗೆ ಆಹಾರ ಧಾನ್ಯ ವಿತರಣೆಗೆ ನೀಲನಕ್ಷೆ ತಯಾರಿಸಲು ಸೂಚಿಸಲಾಗಿದೆ ಎಂದೂ ಸಚಿವರು ಹೇಳಿದರು.

ಆರ್.ಟಿ.ಇ ಹಣ ಮರುಪಾವತಿಗೆ ಸೂಚನೆ:
ಈಗಾಗಲೇ ಬಹುತೇಕ ಶಾಲೆಗಳಿಗೆ ಆರ್.ಟಿ.ಇ ಅನುದಾನ ಮರುಪಾವತಿಸಲಾಗಿದೆ. ಉಳಿದ ಶಾಲೆಗಳಿಗೆ ತಕ್ಷಣವೇ ಹಣ ಬಿಡುಗಡೆಗೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಲಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲೂ ಮಕ್ಕಳಿಗೆ ಶಿಕ್ಷಣ ನೀಡಲು ಶಾಲೆಗಳು ಕ್ರಮ ವಹಿಸಿದ್ದು, ಬಾಕಿ ಆರ್.ಟಿ.ಇ ಹಣವನ್ನು ಮೇ ಅಂತ್ಯದೊಳಗೆ ಬಿಡುಗಡೆ ಮಾಡಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಬಾಕಿ ಹಣ ನೀಡದೇ ಬಾಕಿ ಉಳಿಸಿಕೊಂಡಿರುವ ಬಿಇಒ ಮತ್ತು ಡಿಡಿಪಿಐಗಳಿಗೆ ಎಚ್ಚರಿಕೆ ನೀಡಿ ತಕ್ಷಣವೇ ಹಣ ಬಿಡುಗಡೆಗೆ ಕ್ರಮ ವಹಿಸಬೇಕೇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಚಿವರು ಸೂಚಿಸಿದರು.

ಶಿಸ್ತು ಕ್ರಮ: ಅನಗತ್ಯವಾಗಿ ಶಾಲೆಗಳಿಗೆ ನೀಡಬೇಕಾದ ಹಣವನ್ನು ತಮ್ಮ ಖಾತೆಯಲ್ಲೇ ಉಳಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮಕ್ಕೆ ಕೂಡಲೇ ಪ್ರಸ್ತಾವನೆ ಮಂಡಿಸಲೂ ಸಹ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಸಾಶಿಇ ಆಯುಕ್ತ ವಿ. ಅನ್ಬುಕುಮಾರ್, ಮಧ್ಯಾಹ್ನ ಉಪಹಾರ ಯೋಜನೆ ಅಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಭಾಗವಹಿಸಿದ್ದರು.

mid day meal

ಖಾಸಗಿ ಪಿಯು ಆಡಳಿತ ಮಂಡಳಿಗಳೊಂದಿಗೆ ಚರ್ಚೆ:
ಇದೇ ಸಂದರ್ಭದಲ್ಲಿ ಬೆಂಗಳೂರು ವಿಭಾಗದ ದಾವಣಗೆರೆ, ಶಿವಮೊಗ್ಗ ಮತು ಚಿತ್ರದುರ್ಗ ಜಿಲ್ಲೆಗಳಿಗೆ ಸೇರಿದ ಖಾಸಗಿ ಅನುದಾನರಹಿತ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಕೋವಿಡ್ ಸಂಕಷ್ಟದ ಸಮಯದಲ್ಲಿ ಎದುರಿಸುತ್ತಿರುವ ಸವಾಲುಗಳು, ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದ ರೀತಿಯಲ್ಲಿ ಅನುಸರಿಸಬೇಕಾದ ಕ್ರಮಗಳು, ಪರೀಕ್ಷಾ ಪ್ರಕ್ರಿಯೆ ಕುರಿತಂತೆ ಸಚಿವರ ಗಮನ ಸೆಳೆದರು.

ಸಭೆಯಲ್ಲಿ ಮಾಜಿ ವಿಧಾನಪರಿಷತ್ ಮುಖ್ಯ ಸಚೇತಕ ಶಿವಯೋಗಿ ಸ್ವಾಮಿ ಸೇರಿದಂತೆ ಆ ಭಾಗದ 45ಕ್ಕೂ ಹೆಚ್ಚು ವಿದ್ಯಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಪದವಿಪೂರ್ವ ಶಿಕ್ಷಣ ನಿರ್ದೇಶಕಿ ಸ್ನೇಹಲ್ ಹಾಜರಿದ್ದರು.

TAGGED:Coronaeducation departmentgovernmentPublic TVsuresh kumarಆರ್.ಟಿ.ಇಕೊರೊನಾಕೋವಿಡ್ 19ಪಬ್ಲಿಕ್ ಟಿವಿಶಿಕ್ಷಣ ಇಲಾಖೆಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema Updates

ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood
Thalaivan Thalaivii 03
ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!
Cinema Latest South cinema
Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood

You Might Also Like

03 5
Big Bulletin

ಬಿಗ್‌ ಬುಲೆಟಿನ್‌ 17 July 2025 ಭಾಗ-3

Public TV
By Public TV
2 minutes ago
02 5
Big Bulletin

ಬಿಗ್‌ ಬುಲೆಟಿನ್‌ 17 July 2025 ಭಾಗ-2

Public TV
By Public TV
3 minutes ago
01 8
Big Bulletin

ಬಿಗ್‌ ಬುಲೆಟಿನ್‌ 17 July 2025 ಭಾಗ-1

Public TV
By Public TV
3 minutes ago
Yadgir DYSP
Dakshina Kannada

ಡಿವೈಎಸ್‌ಪಿ ವಿಜಯಕ್ರಾಂತಿ ವರ್ಗಾವಣೆಯಲ್ಲಿ ಬದಲಾವಣೆ – ಮಂಗಳೂರು ದಕ್ಷಿಣಕ್ಕೆ ಟ್ರಾನ್ಸ್‌ಫರ್‌

Public TV
By Public TV
16 minutes ago
Robert Vadra
Crime

ಶಿಕೋಹ್‌ಪುರ ಭೂ ವ್ಯವಹಾರ ಕೇಸ್‌ – ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ವಿರುದ್ಧ ED ಚಾರ್ಜ್‌ಶೀಟ್

Public TV
By Public TV
28 minutes ago
sunil kumar with his father
Latest

ಸಂಘದ ಶಾಖೆಗೆ ಕರೆದೊಯ್ದು ಸಂಸ್ಕಾರ ಕಲಿಸಿದ್ರು ನನ್ನಪ್ಪ: ಅಗಲಿದ ತಂದೆ ನೆನೆದು ಶಾಸಕ ಸುನಿಲ್‌ ಕುಮಾರ್‌ ಭಾವುಕ ಪತ್ರ

Public TV
By Public TV
40 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?