Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲ ದಿನದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುಸೂತ್ರ: ಸುರೇಶ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೊದಲ ದಿನದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುಸೂತ್ರ: ಸುರೇಶ್ ಕುಮಾರ್

Bengaluru City

ಮೊದಲ ದಿನದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುಸೂತ್ರ: ಸುರೇಶ್ ಕುಮಾರ್

Public TV
Last updated: July 19, 2021 9:57 pm
Public TV
Share
7 Min Read
SSLC EXAM 1
ಸಾಂದರ್ಭಿಕ ಚಿತ್ರ
SHARE

ಬೆಂಗಳೂರು: ಮೊದಲ ದಿನ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಸುರಕ್ಷಿತ ವಾತಾವರಣದಲ್ಲಿ ಅತ್ಯಂತ ಉತ್ಸಾಹ ಮತ್ತು ಲವಲವಿಕೆಯಿಂದ ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

SURESHKUMAR 5

ಸೋಮವಾರ ಪರೀಕ್ಷೆಯ ನಂತರ ನಗರದ ಹಲವಾರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮೊದಲ ದಿನದ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಅವರು, ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಪ್ರಶಾಂತ ವಾತಾವರಣದಲ್ಲಿ ನಡೆದವು. ಇಂದು ಮೂರು ಕೋರ್ ವಿಷಯಗಳ ಪರೀಕ್ಷೆಗಳು ನಡೆದವು. ಮಕ್ಕಳು ಹೊಸ ಮಾದರಿ ಪರೀಕ್ಷಾ ಪದ್ಧತಿಯನ್ನು ಸುಲಭವಾಗಿ ಅರ್ಥೈಸಿಕೊಂಡು ಒಎಂಆರ್ ಶೀಟ್‍ಗಳಲ್ಲಿ ಗುರುತು ಮಾಡಿದರು. ಕೊಠಡಿ ಮೇಲ್ವಿಚಾಕರ ಮಾ‌ರ್ಗದರ್ಶನದಂತೆ ಒಎಂಆರ್ ಶೀಟ್‍ಗೆ ಮೊದಲು ರಿಜಿಸ್ಟರ್ ನಂಬರ್ ದಾಖಲಿಸಿ ಕೆಳಗಡೆ ಸಹಿ ಮಾಡಿ ನಂತರ ಸರಿಯುತ್ತರಗಳನ್ನು ಗುರುತಿಸಲಾರಂಭಿಸಿದರು.

ಇಂದು ಬೆಂಗಳೂರಿನ ರಾಜಾಜಿನಗರದ ಫ್ಲಾರೆನ್ಸ್, ಕಡಾಂಬಿ, ಜಯನಗರದ ವಿಜಯಾ ಪ್ರೌಢಶಾಲೆ, ಬಿಇಎಸ್ ಪ್ರೌಢಶಾಲೆ, ಕಾರ್ಮಂಟ್ ಕಾನ್ವೆಂಟ್ ಶಾಲೆ, ಉತ್ತರಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆ, ಸಾರಕ್ಕಿ ಪಬ್ಲಿಕ್ ಶಾಲೆ ಕೋಟೆ ಪ್ರದೇಶದ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಎಲ್ಲ ಕಡೆಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಮಕ್ಕಳು ಅತ್ಯಂತ ಶಿಸ್ತಿನಿಂದ ಪರೀಕ್ಷೆಗೆ ಹಾಜರಾಗಿದ್ದರು ಎಂದು ಅವರು ತಿಳಿಸಿದರು.

SSLC EXAM 4

ಕೆಲವೆಡೆ ಶಾಸಕರು ಮತ್ತು ಸಚಿವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಖುದ್ದಾಗಿ ಭೇಟಿ ನೀಡಿದ್ದಾರೆ ಮಕ್ಕಳನ್ನು ಹುರಿದುಂಬಿಸಿದ್ದಾರೆ. ಹಲವಾರು ಕಡೆಗಳಲ್ಲಿ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಮಕ್ಕಳಿಗೆ ಉಪಹಾರ ವ್ಯವಸ್ಥೆ ಮಾಡಿದ್ದರು ಎಂದು ಹೇಳಿದ ಸಚಿವರು ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಜುಲೈ 26ಕ್ಕೆ ಬಿಎಸ್‍ವೈ ಮಹಾ ಭಾಷಣ? – ಸಿಎಂ ಬೆಂಬಲಿಗರು ಸೈಲೆಂಟ್

ಮಕ್ಕಳು ಸರತಿ ಸಾಲಿನಲ್ಲಿ ಸಾಮಾಜಿಕ ಅಂತರದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಬಂದರು. ನೇರವಾಗಿ ಪರೀಕ್ಷಾ ಕೇಂದ್ರದ ಆರೋಗ್ಯ ತಪಾಸಣಾ ಘಟಕಕ್ಕೆ ಭೇಟಿ ನೀಡಿ ಅಲ್ಲಿ ಜ್ವರ ಪರೀಕ್ಷೆಯ ನಂತರ ಪರೀಕ್ಷಾ ಕೇಂದ್ರದ ಮುಂದೆ ಹಾಕಲಾಗಿದ್ದ ಫಲಕದಲ್ಲಿ ತಮ್ಮ ಕೊಠಡಿ ಸಂಖ್ಯೆಯನ್ನು ನೋಡಿಕೊಂಡು ಪರೀಕ್ಷಾ ಕೊಠಡಿಗಳಿಗೆ ತೆರಳುವ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದಿಂದ ಹೋಗುವಾಗಲೂ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಾರೆ ಎಂದು ಸಚಿವರು ಹೇಳಿದರು.

SSLC EXAM 3

ಕಳೆದ ಬಾರಿಯ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದ ಮಕ್ಕಳಿಗಿಂತ ಹೆಚ್ಚಿನ ಸಂಖ್ಯೆಯ ಮಕ್ಕಳು ಹಾಜರಾಗಿದ್ದಾರೆ. ಮಕ್ಕಳ ಶೇ. ಹಾಜರಾತಿಯೂ ಸಹ ಈ ಬಾರಿ ಹೆಚ್ಚಾಗಿದೆ ಎಂದು ಅವರು ಹೇಳಿದರು.

ಗಣಿತ ವಿಷಯಕ್ಕೆ 8,52,191 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,49,199 ಅಭ್ಯರ್ಥಿಗಳು ಹಾಜರಾಗಿ 2992 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.64 ಹಾಜರಾತಿ ಇದೆ. ಕಳೆದ ವರ್ಷ ಇದು 98.30 ಇತ್ತು.

ವಿಜ್ಞಾನ ವಿಷಯಕ್ಕೆ 8,43,976 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,40,841 ಅಭ್ಯರ್ಥಿಗಳು ಹಾಜರಾಗಿ 3127 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.62 ಹಾಜರಾತಿ ಇದೆ. ಕಳೆದ ವರ್ಷ ಇದು 98.36 ಇತ್ತು.

ಸಮಾಜ ವಿಜ್ಞಾನ ವಿಷಯಕ್ಕೆ 8,24,689 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,21,823 ಅಭ್ಯರ್ಥಿಗಳು ಹಾಜರಾಗಿ 2867 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.65 ಹಾಜರಾತಿ ಇದೆ. ಕಳೆದ ವರ್ಷ ಇದು 98.43 ಇತ್ತು.

SSLC Exams 7

ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಹಾಜರಿದ್ದು ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಆರೋಗ್ಯ ಇಲಾಖಾ ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿದರು. ಎಲ್ಲ ಅಭ್ಯರ್ಥಿಗಳು ಮಾಸ್ಕ್‍ಗಳನ್ನು ಧರಿಸಿದ್ದರು. ಮಾಸ್ಕ್ ಧರಿಸದೇ ಬಂದ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಾಸ್ಕ್ ನೀಡಲಾಯಿತು ಎಂದು ಅವರು ವಿವರಿಸಿದರು.

ಒಟ್ಟಾರೆಯಾಗಿ ಪರೀಕ್ಷೆ ಯಾವುದೇ ವಿಘ್ನಗಳಿಲ್ಲದೇ ಯಶಸ್ವಿಯಾಗಿ ನಡೆದಿದ್ದು ಇದಕ್ಕೆ ಕಾರಣೀಭೂತರಾದ ನಮ್ಮ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ವೃಂದಕ್ಕೆ ಸುರೇಶ್ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.

SSLC Exams 8

ಪರೀಕ್ಷಾ ಸಮಯದಲ್ಲಿ ಕಂಡು ಬಂದ ವಿಶೇಷತೆಗಳನ್ನು ಸಚಿವರು ಈ ಸಂರ್ಭದಲ್ಲಿ ವಿವರಿಸಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರಾದ ಕು. ಶಿಲ್ಪಾ ಮತ್ತು ಕಕು. ಸಂಜನಾ ಅವರಿಗೆ ಪರೀಕ್ಷೆಗೆ ಬಂದು ಹೋಗಲು ದೋಣಿಯ ವ್ಯವಸ್ಥೆ ಮಾಡಲಾಗಿತ್ತು. ತಮ್ಮೂರು ಕುರು ದ್ವೀಪ ಪ್ರದೇಶದ ಮನೆಗಳಿಂದ ಈ ಮಕ್ಕಳು ಬೋಟ್ ಮೂಲಕ ಬಂದು ಪರೀಕ್ಷೆ ಬರೆದು ಬೋಟ್‍ನಲ್ಲಿಯೇ ಹಿಂದಿರುಗಿದರು. ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ತೊಕ್ಕಟ್ಟು ಗ್ರಾಮದ ಖಾಸಗಿ ಪ್ರೌಢಶಾಲಾ ಪರೀಕ್ಷಾ ಕೇಂದ್ರದ ಶಾಲೆಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿದ್ಯುತ್ ಶಾರ್ಟ್ ಸ‌ರ್ಕ್ಯೂಟ್‍ನಿಂದ ಸ್ವಲ್ಪ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಆ ಪ್ರಯೋಗಾಲಯದ ಅಕ್ಕ ಪಕ್ಕದ ಮೂರು ಕೊಠಡಿಯ 36 ಅಭ್ಯರ್ಥಿಗಳನ್ನು ಅದೇ ಪರಿಸರದಲ್ಲಿರುವ ಅದೇ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ 3 ಕೊಠಡಿಗಳಿಗೆ ಸ್ಥಳಾಂತರಿಸಲಾಯಿತು. ಈ ಸ್ಥಳಾಂತರಕ್ಕೆ ತೆಗೆದುಕೊಂಡ ಸಮಯವನ್ನು ಹೆಚ್ಚುವರಿಯಾಗಿ ಈ 3 ಕೊಠಡಿಯ ಅಭ್ಯರ್ಥಿಗಳಿಗೆ ನೀಡಲಾಯಿತು. ಬೆಂಕಿ ಪ್ರಕರಣದಿಂದ ಯಾವುದೇ ತೊಂದರೆಯಾಗಲೀ ಹಾನಿಯಾಗಲಿ ಸಂಭವಿಸಿಲ್ಲ. ಸದರಿ ಪರೀಕ್ಷಾ ಕೇಂದ್ರಕ್ಕೆ ಜಿಪಂ ಸಿಇಒ ಅಗ್ನಿಶಾಮಕದಳದ ಅಧಿಕಾರಿಗಳು, ಪೊಲೀಸ್ ಆಯುಕ್ತರು, ಡಿಡಿಪಿಐ ಪರಿಶೀಲಿಸಿದರು. ಇದನ್ನೂ ಓದಿ: ಯಡಿಯೂರಪ್ಪ ಬದಲಾವಣೆ ಬಗ್ಗೆ ವರ್ಷದ ಹಿಂದೆಯೇ ಹೇಳಿದ್ದೆ, ಅದು ಈಗ ನಿಜವಾಗ್ತಿದೆ: ಸಿದ್ದರಾಮಯ್ಯ

ದಕ್ಷಿಣ ಕನ್ನಡ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಸೇರಿದಂತೆ ಹಲವಾರು ಗಡಿ ಭಾಗದ ಜಿಲ್ಲೆಗಳ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಕೇರಳ, ಮಹಾರಾಷ್ಟ್ರ, ಆಂಧ್ರ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದ ಒಟ್ಟು 770 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಒಬ್ಬ ನೊಂದಾಯಿತ ಅಭ್ಯರ್ಥಿ ಗೈರು ಹಾಜರಾಗಿದ್ದಾನೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು.

SSLC Exams 4

ಕಲಬುರ್ಗಿ ಜಿಲ್ಲೆಯ ಚಿಮ್ಮನಚೋಡ ಗ್ರಾಮದಲ್ಲಿ ರಾತ್ರಿಯಿಡೀ ಸುರಿದ ತೀವ್ರ ಮಳೆಯಿಂದ ಶಾಲೆಗೆ ಹಾದು ಹೋಗುವ ರಸ್ತೆಯಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿ ರಸ್ತೆ ಬಂದ್ ಅಗಿತ್ತು. ಅದನ್ನು ನಿಗದಿತ ಅವಧಿಯಲ್ಲಿ ಸರಿಪಡಿಸಲಾದ ಬಳಿಕ ಎಲ್ಲ ಮಕ್ಕಳು ರಸ್ತೆಯಲ್ಲಿ ಸಾಗಿ ಪರೀಕ್ಷೆ ಬರೆದರು. ಕೋಲಾರದ ಕುರುಬರ ಪೇಟೆಯ ನಿವಾಸಿ ಅವರು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ 55 ವರ್ಷ ವಯಸ್ಸಿನ ಪರೀಕ್ಷೆಗೆ ಹಾಜರಾಗಿದ್ದುದು ವಿಶೇಷವಾಗಿತ್ತು. ಖಾಸಗಿ ಅಭ್ಯರ್ಥಿಯಾದ ಅವರು ಕಳೆದ ವರ್ಷ ಪರೀಕ್ಷೆಗೆ ಹಾಜರಾಗಿ ಅನುತ್ತೀರ್ಣರಾಗಿದ್ದರಿಂದ ಈ ಬಾರಿ ಪುನರಾವರ್ತಿತ ಅಭ್ಯರ್ಥಿಯಾಗಿ ಕೋಲಾರದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿದ್ದರು. ರಾಜ್ಯದ ಬಹುತೇಕ ಕಡೆಗಳಲ್ಲಿ ಸಂಘ ಸಂಸ್ಥೆಗಳು ಮತ್ತು ಜನಪ್ರತಿನಿಧಿಗಳು ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಉಪಹಾರ ವ್ಯವಸ್ಥೆ ಮಾಡಿದ್ದರು. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಪರೀಕ್ಷೆ ಬರೆದ ಮಕ್ಕಳ ಉತ್ತರ ಪತ್ರಿಕೆಗಳನ್ನು ಪೊಲೀಸ್ ಕಣ್ಗಾವಲಿನಲ್ಲಿ ನಿಗದಿತ ಪರೀಕ್ಷಾ ಕೇಂದ್ರಕ್ಕೆ ತಂದು ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡಲಾಗಿದೆ. ಹಲವಾರು ಕಡೆಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಳಿರು ತೋರಣ ಕಟ್ಟಲಾಗಿತ್ತು. ನಂಜನಗೂಡು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಹಲವಾರು ಕಡೆಗಳಲ್ಲಿ ರಂಗೋಲಿ ಹಾಕಲಾಗಿತ್ತು.

ಹಲವಾರು ಕಡೆಗಳಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಕೆಲವೆಡೆ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ಸೌಲಭ್ಯವಿಲ್ಲದೇ ಯಾವೊಬ್ಬ ಅಭ್ಯರ್ಥಿಯೂ ಪರೀಕ್ಷೆಗೆ ಗೈರು ಹಾಜರಾಗಿಲ್ಲ. ಪರೀಕ್ಷಾ ಪ್ರಕ್ರಿಯೆಯಲ್ಲಿ ನಿಯೋಜಿತರಾಗುವ 1,19,469 ಮಂದಿ ಎಲ್ಲ ಸ್ತರದ ಸಿಬ್ಬಂದಿ ಲಸಿಕೆ ಪಡೆದಿದ್ದರು.  ಹಲವಾರು ಕಡೆಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಳಿರು ತೋರಣ ಕಟ್ಟಲಾಗಿತ್ತು. ನಂಜನಗೂಡು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಹಲವಾರು ಕಡೆಗಳಲ್ಲಿ ರಂಗೋಲಿ ಹಾಕಲಾಗಿತ್ತು.  ಹಲವಾರು ಕಡೆಗಳಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಕೆಲವೆಡೆ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ಸೌಲಭ್ಯವಿಲ್ಲದೇ ಯಾವೊಬ್ಬ ಅಭ್ಯರ್ಥಿಯೂ ಪರೀಕ್ಷೆಗೆ ಗೈರು ಹಾಜರಾಗಿಲ್ಲ. ಯಾವುದೇ ಅಭ್ಯರ್ಥಿ ಪರೀಕ್ಷಾ ಅವ್ಯವಹಾರದಲ್ಲಿ ತೊಡಗಿಲ್ಲ.

SSLC Exams 5

ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ ಬರೆದ ಅಭ್ಯರ್ಥಿಗಳು 111  ಸನಿಹದ ಪರೀಕ್ಷಾ ಕೇಂದ್ರಗಳನ್ನು ಆರಿಸಿಕೊಂಡ ವಲಸೆ ವಿದ್ಯಾರ್ಥಿಗಳು-10,693  ವಸತಿ ನಿಲಯಗಳಲ್ಲಿದ್ದು ಪರೀಕ್ಷೆ ಬರೆದವರು -2,870

ಮುಖ್ಯೋಪಾಧ್ಯಾಯರ ಲಾಗಿನ್‍ನಿಂದ ಪ್ರವೇಶ ಪತ್ರಗಳನ್ನು ವಿತರಿಸಲಾಗಿದೆ. ಶುಲ್ಕ ಪಾವತಿಸದ ಅಭ್ಯರ್ಥಿಗಳಿಗೂ ಬಿಇಒ ಮತ್ತು ಡಿಡಿಪಿಐ ಹಂತದಲ್ಲಿ ಪ್ರವೇಶ ಪತ್ರ ವಿತರಿಸಲಾಗಿದೆ. ಹಾವೇರಿ ಜಿಲ್ಲೆಯ ಚಿಕ್ಕೇರೂರು ಶಾಲೆಯ 30 ವಿದ್ಯಾರ್ಥಿಗಳು ಪರೀಕ್ಷಾ ಅರ್ಜಿ ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಿದ್ದರೂ ಶಾಲೆಯ ಶಿಕ್ಷಕರೊಬ್ಬರು ಶುಲ್ಕವನ್ನು ಮಂಡಳಿಗೆ ಪಾವತಿಸದೇ ಇರುವುದರಿಂದ 30 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಾಗಿಲ್ಲ. ಆ 30 ವಿದ್ಯಾರ್ಥಿಗಳು, ಬಾಗಲಕೋಟೆ ಜಿಲ್ಲೆಯ 3 ಮತ್ತು ಕೊರಟಗೆರೆ ವಿದ್ಯಾರ್ಥಿನಿ ಗ್ರೀಷ್ಮಾ ಎನ್. ನಾಯಕ್ ಅವರಿಗೆ ಮುಂದೆ ಆಗಸ್ಟ್ ನಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು. ಇದನ್ನೂ ಓದಿ: ಹಳ್ಳ ತುಂಬಿ ರಸ್ತೆ ಮಾರ್ಗ ಬಂದ್ – ಪರೀಕ್ಷೆಗೆ ತೆರಳಲು SSLC ವಿದ್ಯಾರ್ಥಿಗಳ ಪರದಾಟ

ಮಕ್ಕಳು ಸರತಿ ಸಾಲಿನಲ್ಲಿ ಸಾಮಾಜಿಕ ಅಂತರದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಬಂದರು. ನೇರವಾಗಿ ಪರೀಕ್ಷಾ ಕೇಂದ್ರದ ಆರೋಗ್ಯ ತಪಾಸಣಾ ಘಟಕಕ್ಕೆ ಭೇಟಿ ನೀಡಿ ಅಲ್ಲಿ ಜ್ವರ ಪರೀಕ್ಷೆಯ ನಂತರ ಪರೀಕ್ಷಾ ಕೇಂದ್ರದ ಮುಂದೆ ಹಾಕಲಾಗಿದ್ದ ಫಲಕದಲ್ಲಿ ತಮ್ಮ ಕೊಠಡಿ ಸಂಖ್ಯೆಯನ್ನು ನೋಡಿಕೊಂಡು ಪರೀಕ್ಷಾ ಕೊಠಡಿಗಳಿಗೆ ತೆರಳುವ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದಿಂದ ಹೋಗುವಾಗಲೂ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಾರೆ. ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಹಾಜರಿದ್ದು ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರಾದ ಕು. ಶಿಲ್ಪಾ ಮತ್ತು ಕಕು. ಸಂಜನಾ ಅವರಿಗೆ ಪರೀಕ್ಷೆಗೆ ಬಂದು ಹೋಗಲು ದೋಣಿಯ ವ್ಯವಸ್ಥೆ ಮಾಡಲಾಗಿತ್ತು. ತಮ್ಮೂರು ಕುರು ದ್ವೀಪ ಪ್ರದೇಶದ ಮನೆಗಳಿಂದ ಈ ಮಕ್ಕಳು ಬೋಟ್ ಮೂಲಕ ಬಂದು ಪರೀಕ್ಷೆ ಬರೆದು ಬೋಟ್‍ನಲ್ಲಿಯೇ ಹಿಂದಿರುಗಿದರು.

sslc 1

ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ತೊಕ್ಕಟ್ಟು ಗ್ರಾಮದ ಖಾಸಗಿ ಪ್ರೌಢಶಾಲಾ ಪರೀಕ್ಷಾ ಕೇಂದ್ರದ ಶಾಲೆಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿದ್ಯುತ್ ಶಾರ್ಟ್ ಸ‌ರ್ಕ್ಯೂಟ್‍ನಿಂದ ಸ್ವಲ್ಪ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಆ ಪ್ರಯೋಗಾಲದಯ ಅಕ್ಕ ಪಕ್ಕದ ಮೂರು ಕೊಠಡಿಯ 36 ಅಭ್ಯರ್ಥಿಗಳನ್ನು ಅದೇ ಪರಿಸರದಲ್ಲಿರುವ ಅದೇ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ 3 ಕೊಠಡಿಗಳಿಗೆ ಸ್ಥಳಾಂತರಿಸಲಾಯಿತು. ಈ ಸ್ಥಳಾಂತರಕ್ಕೆ ತೆಗೆದುಕೊಂಡ ಸಮಯವನ್ನು ಹೆಚ್ಚುವರಿಯಾಗಿ ಈ 3 ಕೊಠಡಿಯ ಅಭ್ಯರ್ಥಿಗಳಿಗೆ ನೀಡಲಾಯಿತು. ಬೆಂಕಿ ಪ್ರಕರಣದಿಂದ ಯಾವುದೇ ತೊಂದರೆಯಾಗಲೀ ಹಾನಿಯಾಗಲಿ ಸಂಭವಿಸಿಲ್ಲ. ಸದರಿ ಪರೀಕ್ಷಾ ಕೇಂದ್ರಕ್ಕೆ ಜಿಪಂ ಸಿಇಒ ಅಗ್ನಿಶಾಮಕದಳದ ಅಧಿಕಾರಿಗಳು, ಪೊಲೀಸ್ ಆಯುಕ್ತರು, ಡಿಡಿಪಿಐ ಪರಿಶೀಲಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಮಹಾರಾಷಚವ್ರದ ಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಕೇರಳದ 441 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ನಾಲ್ಕು ಪರೀಕ್ಷಾ ಕೇಂದ್ರಗಳಿಗೆ ಮಹಾರಾಷ್ಟ್ರ ಭಾಗದ 152 ವಿದ್ಯಾರ್ಥಿಗಳು ಬಂದು ಪರೀಕ್ಷೆ ಬರೆದರು. ಅವರೆಲ್ಲರಿಗೂ ಗಡಿ ಭಾಗದಿಂದ ವಾಹನ ವ್ಯವಸ್ಥೆ ಮಾಡಲಾಗಿತ್ತು.  ಒಟ್ಟಾರೆಯಾಗಿ ಪರೀಕ್ಷೆ ಯಾವುದೇ ವಿಘ್ನಗಳಿಲ್ಲದೇ ಯಶಸ್ವಿಯಾಗಿ ನಡೆದಿದ್ದು ಇದಕ್ಕೆ ಕಾರಣೀಭೂತರಾದ ನಮ್ಮ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ವೃಂದಕ್ಕೆ ಸಚಿವರು ಕೃತಜ್ಞತೆ ಸಲ್ಲಿಸಿದರು.

TAGGED:education ministerexamPublic TVSSLCstudentssureshkumar
Share This Article
Facebook Whatsapp Whatsapp Telegram

Cinema news

Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories
gilli kavya 1
ಕಣ್ಣೀರಿಟ್ಟ ‘ಕಾವು’ – ವಿಲನ್‌ ಕೊಟ್ಟ ಟಾಸ್ಕಲ್ಲಿ ಗೆದ್ರಾ ಗಿಲ್ಲಿ?
Cinema Latest Top Stories TV Shows
Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories

You Might Also Like

Conspiracy against Dharmasthala mass burial claims fabricated says SIT names 6 accused in report
Bengaluru City

ದೂರು ನೀಡಿದವರೇ ಈಗ ಆರೋಪಿಗಳು- ಬುರುಡೆ ಗ್ಯಾಂಗ್‌ ಮೇಲೆ ಸೆಕ್ಷನ್‌ಗಳ ಸುರಿಮಳೆ

Public TV
By Public TV
23 seconds ago
DK Shivakumar 11
Belgaum

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಡಿಕೆಶಿ

Public TV
By Public TV
3 minutes ago
Yaduveer
Districts

ಮೈಸೂರಲ್ಲಿ ಸನ್ V/s ಮದರ್ – ಮಗ ಗುದ್ದಲಿ ಪೂಜೆ ಮಾಡಿದ್ದ ಜಾಗಕ್ಕೆ ತಡೆಯಾಜ್ಞೆ ತಂದ ತಾಯಿ

Public TV
By Public TV
26 minutes ago
CRIME
Bengaluru City

ಬೆಂಗಳೂರಲ್ಲಿ ಕಳ್ಳತನ ಮಾಡಿದವನನ್ನೇ ದರೋಡೆ ಮಾಡಿದ ಗ್ಯಾಂಗ್

Public TV
By Public TV
52 minutes ago
BY Vijayendra
Belgaum

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ: ವಿಜಯೇಂದ್ರ

Public TV
By Public TV
1 hour ago
Rahul Gandhi
Latest

CIC ಆಯ್ಕೆ| ಮೋದಿ, ಶಾ ಜೊತೆ ಸಭೆ – ಸರ್ಕಾರ ಪ್ರಸ್ತಾಪಿಸಿದ ಹೆಸರುಗಳಿಗೆ ರಾಹುಲ್ ಆಕ್ಷೇಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?