– ಸಂತಾಪ ಸೂಚಿಸಿದ ಚಿತ್ರರಂಗ
ಚೆನ್ನೈ: ರಸ್ತೆ ಅಪಘಾತದಲ್ಲಿ ತಮಿಳಿನ ಯುವ ನಿರ್ದೇಶಕರೊಬ್ಬರು ಕೊಯಮತ್ತೂರಿನ ಮೆಟ್ಟುಪಾಳ್ಯಂ ಸಮೀಪ ಮೃತಪಟ್ಟಿದ್ದಾರೆ.
ಎ.ವಿ.ಅರುಣ್ ಪ್ರಸಾದ್ ಅಲಿಯಾಸ್ ವೆಂಕಟ್ ಪಕ್ಕರ್ ಮೃತ ಯುವ ನಿರ್ದೇಶಕ. ಪ್ರಸಾದ್ ಅವರು ಬೈಕಿನಲ್ಲಿ ಹೋಗುತ್ತಿದ್ದಾಗ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಸಾದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Heartbroken by the sudden demise of the young director and my ex-assistant, Arun. You were always sweet, positive and hardworking. My prayers are forever with you and my deepest condolences to your family and friends.???? pic.twitter.com/ZA6kvfcYLj
— Shankar Shanmugham (@shankarshanmugh) May 15, 2020
ಮೃತ ಪ್ರಸಾದ್ ಖ್ಯಾತ ನಿರ್ದೇಶಕ ಶಂಕರ್ ಅವರ ಬಳಿ ವೆಂಕಟ್ ಪಕ್ಕರ್ ಎಂಬ ಹೆಸರಿನಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ವಿಕ್ರಮ್ ಅಭಿನಯದ ‘ಐ’ ಸೇರಿದಂತೆ ಹಲವು ಚಿತ್ರಗಳಿಗೆ ಕೆಲಸ ಮಾಡಿದ್ದರು. ಹೀಗಾಗಿ ನಿರ್ದೇಶಕ ಶಂಕರ್ ಪ್ರಸಾದ್ ಸಾವಿಗೆ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
என்ன இது..என்ன நடக்குது..RIP pic.twitter.com/1Aj0kIHfoU
— Manobala (@manobalam) May 15, 2020
“ಯುವ ನಿರ್ದೇಶಕ ಮತ್ತು ನನ್ನ ಮಾಜಿ ಸಹಾಯಕ ಅರುಣ್ ಸಾವಿನ ಸುದ್ದಿ ಕೇಳಿ ನನಗೆ ತುಂಬಾ ನೋವಾಯಿತು. ನೀವು ಯಾವಾಗಲು ಸಿಹಿಯಾದ, ಸಕಾರಾತ್ಮಕ ಮತ್ತು ಕಠಿಣ ಪರಿಶ್ರಮಿಯಾಗಿದ್ದಿರಿ. ನಿಮ್ಮ ಕುಟುಂಬ ಮತ್ತು ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ಸೂಚಿಸಿದ್ದಾರೆ.
‘4ಜಿ’ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಪ್ರಸಾದ್ ಪರಿಚಿತರಾಗುತ್ತಿದ್ದರು. ಈ ಚಿತ್ರದಲ್ಲಿ ಜಿ.ವಿ. ಪ್ರಕಾಶ್ ಮತ್ತು ಗಾಯತ್ರಿ ಸುರೇಶ್ ಪ್ರಮುಖ ತಾರಾಗಣ ಅಭಿನಯಿಸಿದ್ದಾರೆ. ಆದರೆ ಅವರ ಮೊದಲ ಚಿತ್ರ ಇನ್ನೂ ಬಿಡುಗಡೆಯಾಗಿರಲಿಲ್ಲ. ಹೀಗಾಗಿ ಸಿನಿಮಾ ತೆರೆಕಾಣುವ ಮೊದಲೇ ಅರುಣ್ ಮೃತಪಟ್ಟಿದ್ದಾರೆ.
எப்போதும் நட்போடும் நம்பிக்கையோடும் பழகும் ஒரு இனிய சகோதரன் என் இயக்குனர் வெங்கட் பாக்கர் சாலை விபத்தில் மரணமடைந்த செய்தி கேட்டு மிகுந்த துயருற்றேன்…
அவரை இழந்து வாடும் உறவினர்களுக்கும் நண்பர்களுக்கும் என் ஆழ்ந்த இரங்கல்..
நண்பரின் ஆன்மா இறைவனடி இளைப்பாறட்டும் @AVArunPrasath ???? pic.twitter.com/wQvtoYOTTF
— G.V.Prakash Kumar (@gvprakash) May 15, 2020
ಯುವ ನಿರ್ದೇಶಕನ ಸಾವಿನ ಸುದ್ದಿ ತಮಿಳು ಚಿತ್ರರಂಗ ಸಂತಾಪ ಸೂಚಿಸಿದೆ. ನಟ ಜಿ.ವಿ. ಪ್ರಕಾಶ್, ಖ್ಯಾತ ಹಾಸ್ಯ ನಟ ಮನೋಬಲ ಸಹ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.