Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು

Latest

ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು

Public TV
Last updated: June 18, 2020 2:55 pm
Public TV
Share
3 Min Read
india china army
SHARE

ನವದೆಹಲಿ: ಕುತಂತ್ರಿ ಚೀನಾ ಪೂರ್ವನಿಯೋಜಿತವಾಗಿ ಈ ದಾಳಿ ನಡೆಸಿದೆ ಎಂದು ಭಾರತ ಹೇಳಿದ್ದರೂ ನಮ್ಮ ಸೈನಿಕರ ಮೇಲೆ ಯಾವ ರೀತಿ ಹೇಗೆ ದಾಳಿ ಮಾಡಿದ್ದರು ಎನ್ನುವ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗಳಿಗೆ ಫೋಟೋ ಈಗ ಉತ್ತರ ನೀಡಿದೆ.

ಮೊಳೆಗಳಿರುವ ಕಬ್ಬಿಣದ ರಾಡ್‌ಗಳನ್ನು ಬಳಸಿ ಚೀನಾ ಸೈನಿಕರು ಪೈಶಾಚಿಕ ಕೃತ್ಯ ಎಸಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಘಟನೆಯ ವೇಳೆ ಗಾಯಗೊಂಡ ಸೈನಿಕರು ಈ ರಾಡ್‌ ಅನ್ನು ಭಾರತದ ನೆಲೆಗೆ ತಂದಿದ್ದು, ಅದರ ಫೋಟೋ ಈಗ ವೈರಲ್‌ ಆಗಿದೆ.

ಪಾಕಿಸ್ತಾನದ ಬಾರ್ಡರ್‌ ಆಕ್ಷನ್‌ ಪಡೆ ಸಹ ಈ ತಂತ್ರವನ್ನೇ ಅನುಸರಿಸುತ್ತದೆ. ವೀರ ಯೋಧರ ಮರಣೋತ್ತರ ಪರೀಕ್ಷೆಯಲ್ಲೂ ದೇಹದ ಮೇಲೆ ಗಂಭೀರ ಗಾಯ ಇರುವುದು ದೃಢಪಟ್ಟಿದೆ.

india china amry

ಘಟನೆ ಹೇಗಾಯ್ತು?
ಗಾಲ್ವಾನ್ ನದಿ ಪ್ರದೇಶದಲ್ಲಿ ಪೆಟ್ರೋಲಿಂಗ್ ಪಾಯಿಂಟ್ 14ರ ಬಳಿ ಚೀನಾ ಟೆಂಟ್‌ ನಿರ್ಮಿಸಿತ್ತು. ಕಳೆದ ವಾರ ಲೆಫ್ಟಿನೆಂಟ್ ಕಮಾಂಡರ್ ಮಟ್ಟದಲ್ಲಿ ಪಾಯಿಂಟ್ 14ನಲ್ಲಿ ಸಭೆ ನಡೆಸಿತ್ತು. ಮಾತುಕತೆಯಂತೆ ಟೆಂಟ್ ತೆರವು ಆಗಿದ್ಯಾ? ಇಲ್ವಾ? ಅಂತ ಪರಿಶೀಲನೆಗೆ ಭಾರತ ಹೋಗಿತ್ತು. ವಾಹನದಲ್ಲಿ ಕರ್ನಲ್ ಸಂತೋಷ್ ಬಾಬು, ಪಳನಿ, ಓಝೋ ಗಸ್ತು ಹೋಗಿದ್ದರು.

ತಾತ್ಕಾಲಿಕವಾಗಿ ನಿರ್ಮಿಸಿದ್ದ ಟೆಂಟ್‌ ತೆರವು ಮಾಡದ ಹಿನ್ನೆಲೆಯಲ್ಲಿ ಮಾತುಕತೆ ನಡೆಸುತ್ತಿದ್ದಾಗಲೇ ಚೀನಿ ಸೈನಿಕರು ಹಲ್ಲೆ ನಡೆಸಿದ್ದರು. ನಡೆಸಿದ ವಿಚಾರ ತಿಳಿದು ಭಾರತದ ಸೈನಿಕರು ಮತ್ತಷ್ಟು ಸಂಖ್ಯೆಯಲ್ಲಿ ಸ್ಥಳಕ್ಕೆ ಬಂದಾಗ ಚೀನಿಯರು ಕಲ್ಲು ತೂರಾಟ ನಡೆಸಿ ಕಬ್ಬಿಣದ ರಾಡ್‌ಗಳಿಂದ ಹೊಡೆದಿದ್ದಾರೆ. ಪರಿಣಾಮ ಭಾರತದ 20 ಸೈನಿಕರು ಹುತಾತ್ಮರಾಗಿದ್ದಾರೆ. ಈ ವೇಳೆ ಭಾರತದ ಸೈನಿಕರು ತಿರುಗೇಟು ನೀಡಿ 43 ಚೀನಿ ಸೈನಿಕರನ್ನು ಹತ್ಯೆ ಮಾಡಿದ್ದಾರೆ.

india china 1

ಗನ್‌ ಫೈರ್‌ ಮಾಡುವಂತಿಲ್ಲ:
ಭಾರತ ಮತ್ತು ಚೀನಾ ನಡುವೆ ಅಂತಾರಾಷ್ಟ್ರೀಯ ಗಡಿ ರೇಖೆ ಇಲ್ಲದ ಕಾರಣ ಗಡಿಯಲ್ಲಿ ಈ ರೀತಿ ಕಿತ್ತಾಟಗಳು ನಡೆಯುತಿತ್ತು. ಎರಡು ದೇಶಗಳ ಗಡಿಯನ್ನು ವಾಸ್ತವ ಗಡಿ ರೇಖೆಯಿಂದ(ಎಲ್‌ಎಸಿ – ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ಗುರುತಿಸಲಾಗಿದೆ. ಆದರೆ ಹಲವು ಭಾಗಗಳಲ್ಲಿ ಭಾರತ ಮತ್ತು ಚೀನಾದ ನಡುವಿನ ಗಡಿಗಳು ನಿರ್ಧಾರವಾಗಿಲ್ಲ. ಹೀಗಾಗಿ ಹಲವು ಬಾರಿ ಎರಡು ಕಡೆಯ ಸೈನಿಕರು ಗಡಿಯಲ್ಲಿ ಪಹರೆ ಕಾಯುತ್ತಿದ್ದಾಗ ಕಿತ್ತಾಟಗಳು ನಡೆಯುತ್ತಿದ್ದವು. ಎರಡು ಕಡೆಯಿಂದಲೂ ಪ್ರತಿರೋಧಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ 1993, 1996ರಲ್ಲಿ ಭಾರತ ಮತ್ತು ಚೀನಾ ನಡುವೆ ಒಪ್ಪಂದ ನಡೆಯಿತು.

1993ರ ಒಪ್ಪಂದದ ಪ್ರಕಾರ ಎಲ್‌ಎಸಿ ದಾಟಿ ಯಾರೇ ಒಳಬಂದರೂ ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಬೇಕು. 1996ರ ಪ್ರಕಾರ ಎಲ್‌ಎಸಿಯ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಎರಡು ದೇಶಗಳು ಯಾವುದೇ ಸ್ಫೋಟ ನಡೆಸಬಾರದು, ಗುಂಡಿನ ದಾಳಿ ನಡೆಸಕೂಡದು ಎಂಬ ಒಪ್ಪಂದಕ್ಕೆ ಬರಲಾಗಿದೆ. ಹೀಗಾಗಿ ಭಾರತ ಚೀನಾ ಗಡಿಯಲ್ಲಿ ಸೈನಿಕರು ಈ ಒಪ್ಪಂದಕ್ಕೆ ಬದ್ಧವಾಗಿದ್ದಾರೆ. ಗುಂಡಿನ ದಾಳಿಯ ಬದಲು ಪರಸ್ಪರ ಕಲ್ಲು, ದೊಣ್ಣೆಗಳಿಂದ ಬಡಿದಾಡಿಕೊಳ್ಳುತ್ತಾರೆ.

LADAKH INDIAN CHINA

ಭಾರತ ಹೇಳಿದ್ದು ಏನು?
ಜೂನ್‌ 6 ರಂದು ನಡೆದ ಮಿಲಿಟರಿ ಕಮಾಂಡರ್‌ ಮಟ್ಟದ ಮಾತುಕತೆಯ ವೇಳೆ ಎಲ್‌ಎಸಿಯಿಂದ ಸೇನೆ ಹಿಂದಕ್ಕೆ ಬರುವ ಸಂಬಂಧ ಮಾತುಕತೆ ನಡೆದಿತ್ತು. ಆದರೆ ಚೀನಾ ಸೇನೆ ಭಾರತದ ಎಲ್‌ಎಸಿ ಬಳಿ ಟೆಂಟ್‌ ನಿರ್ಮಿಸಿತ್ತು. ವಿವಾದಕ್ಕೆ ಕಾರಣವಾದ ಈ ಟೆಂಟ್‌ ಅನ್ನು ಚೀನಾ ತೆರವು ಮಾಡಬೇಕಿತ್ತು. ಈ ವಿಚಾರದ ಬಗ್ಗೆ ಮಾತುಕತೆ ನಡೆಯುತ್ತಿದ್ದಾಗ ಚೀನಾ ಸೇನೆ ಪೂರ್ವ ನಿಗದಿಯಂತೆ ದಾಳಿ ನಡೆಸಿದೆ. ಇದರಿಂದಾಗಿ ಸಾವು ನೋವು ಸಂಭವಿಸಿದೆ. ಈ ಘಟನೆಗೆ ಚೀನಾವೇ ನೇರ ಕಾರಣ.

ಈ ಘಟನೆಯಿಂದ ದ್ವಿಪಕ್ಷೀಯ ಮಾತುಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಜೂನ್‌ 6 ರಂದು ಕಮಾಂಡರ್‌ ಮಟ್ಟ ಮಾತುಕತೆಯ ವೇಳೆ ಏನು ನಿರ್ಧಾರ ಮಾಡಲಾಗಿದೆಯೋ ಅದನ್ನು ಎರಡು ದೇಶಗಳು ಪಾಲಿಸಬೇಕು. ಎರಡು ಕಡೆಯ ಸೈನಿಕರು ದ್ವಿಪಕ್ಷೀಯ ಒಪ್ಪಂದವನ್ನು ಪಾಲಿಸಬೇಕು ಎಂದು ಭಾರತ ಹೇಳಿದೆ.

india china ladakh border conflict

ಚೀನಾ ಹೇಳಿದ್ದು ಏನು?
ಭಾರತದ ಸೇನೆ ಎಲ್‌ಎಸಿ ದಾಟಿ ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದೆ. ಭಾರತ ಎಲ್ಲ ಒಪ್ಪಂದಗಳನ್ನು ಉಲ್ಲಂಘಿಸಿ ಈ ಕೃತ್ಯ ಎಸಗಿದೆ. ಚೀನಾ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಚೀನಿ ಸೈನಿಕರ ಮೇಲೆ ಹಲ್ಲೆ ಎಸಗಿದವರ ವಿರುದ್ಧ ಭಾರತ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಈ ರೀತಿಯ ಘಟನೆ ಮರುಕಳಿಸಬಾರದು. ನೂರು ಕೋಟಿ ಜನಸಂಖ್ಯೆ ಇರುವ ದೇಶಗಳಾದ ನಾವು ಅಭಿವೃದ್ಧಿ ವಿಚಾರಗಳಿಗೆ ಮನ್ನಣೆ ನೀಡಬೇಕು.

TAGGED:chinaChina ArmyindiaIndian soldierskannada newsಎಲ್‍ಎಸಿಕಬ್ಬಿಣದ ರಾಡ್ಗಾಲ್ವಾನ್‌ಚೀನಾಭಾರತಮೊಳೆ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Bike Showroom bengaluru
Bengaluru City

ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ – 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ

Public TV
By Public TV
15 minutes ago
Bus Fire
Crime

ಆಂಧ್ರದಲ್ಲಿ ಮತ್ತೊಂದು ಬಸ್ ದುರಂತ – ಮೂವರು ಸಜೀವ ದಹನ; ಬಸ್‌, ಕಂಟೈನರ್‌ ಧಗಧಗ

Public TV
By Public TV
45 minutes ago
MUDA Scam Siddaramaiah
Bengaluru City

ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ

Public TV
By Public TV
45 minutes ago
Sureshkumar
Bengaluru City

ಗವರ್ನರ್‌ Vs ಗವರ್ನಮೆಂಟ್‌ | ಇಂಥ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ: ಸುರೇಶ್‌‌ ಕುಮಾರ್

Public TV
By Public TV
1 hour ago
Hassan Arrest
Crime

ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ್ದ ಅಪರಿಚಿತ ಅರೆಸ್ಟ್

Public TV
By Public TV
1 hour ago
Governor
Bengaluru City

ವಿಧಾನಸೌಧ Vs ಲೋಕಭವನ ಫೈಟ್ – 11 ಅಂಶ ತೆಗೆಯುವಂತೆ ಪಟ್ಟು; ಇಂದು ಅಧಿವೇಶನಕ್ಕೆ ಬರ್ತಾರ ಗವರ್ನರ್?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?