Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು

Latest

ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು

Public TV
Last updated: June 18, 2020 2:55 pm
Public TV
Share
3 Min Read
india china army
SHARE

ನವದೆಹಲಿ: ಕುತಂತ್ರಿ ಚೀನಾ ಪೂರ್ವನಿಯೋಜಿತವಾಗಿ ಈ ದಾಳಿ ನಡೆಸಿದೆ ಎಂದು ಭಾರತ ಹೇಳಿದ್ದರೂ ನಮ್ಮ ಸೈನಿಕರ ಮೇಲೆ ಯಾವ ರೀತಿ ಹೇಗೆ ದಾಳಿ ಮಾಡಿದ್ದರು ಎನ್ನುವ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗಳಿಗೆ ಫೋಟೋ ಈಗ ಉತ್ತರ ನೀಡಿದೆ.

ಮೊಳೆಗಳಿರುವ ಕಬ್ಬಿಣದ ರಾಡ್‌ಗಳನ್ನು ಬಳಸಿ ಚೀನಾ ಸೈನಿಕರು ಪೈಶಾಚಿಕ ಕೃತ್ಯ ಎಸಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಘಟನೆಯ ವೇಳೆ ಗಾಯಗೊಂಡ ಸೈನಿಕರು ಈ ರಾಡ್‌ ಅನ್ನು ಭಾರತದ ನೆಲೆಗೆ ತಂದಿದ್ದು, ಅದರ ಫೋಟೋ ಈಗ ವೈರಲ್‌ ಆಗಿದೆ.

ಪಾಕಿಸ್ತಾನದ ಬಾರ್ಡರ್‌ ಆಕ್ಷನ್‌ ಪಡೆ ಸಹ ಈ ತಂತ್ರವನ್ನೇ ಅನುಸರಿಸುತ್ತದೆ. ವೀರ ಯೋಧರ ಮರಣೋತ್ತರ ಪರೀಕ್ಷೆಯಲ್ಲೂ ದೇಹದ ಮೇಲೆ ಗಂಭೀರ ಗಾಯ ಇರುವುದು ದೃಢಪಟ್ಟಿದೆ.

india china amry

ಘಟನೆ ಹೇಗಾಯ್ತು?
ಗಾಲ್ವಾನ್ ನದಿ ಪ್ರದೇಶದಲ್ಲಿ ಪೆಟ್ರೋಲಿಂಗ್ ಪಾಯಿಂಟ್ 14ರ ಬಳಿ ಚೀನಾ ಟೆಂಟ್‌ ನಿರ್ಮಿಸಿತ್ತು. ಕಳೆದ ವಾರ ಲೆಫ್ಟಿನೆಂಟ್ ಕಮಾಂಡರ್ ಮಟ್ಟದಲ್ಲಿ ಪಾಯಿಂಟ್ 14ನಲ್ಲಿ ಸಭೆ ನಡೆಸಿತ್ತು. ಮಾತುಕತೆಯಂತೆ ಟೆಂಟ್ ತೆರವು ಆಗಿದ್ಯಾ? ಇಲ್ವಾ? ಅಂತ ಪರಿಶೀಲನೆಗೆ ಭಾರತ ಹೋಗಿತ್ತು. ವಾಹನದಲ್ಲಿ ಕರ್ನಲ್ ಸಂತೋಷ್ ಬಾಬು, ಪಳನಿ, ಓಝೋ ಗಸ್ತು ಹೋಗಿದ್ದರು.

ತಾತ್ಕಾಲಿಕವಾಗಿ ನಿರ್ಮಿಸಿದ್ದ ಟೆಂಟ್‌ ತೆರವು ಮಾಡದ ಹಿನ್ನೆಲೆಯಲ್ಲಿ ಮಾತುಕತೆ ನಡೆಸುತ್ತಿದ್ದಾಗಲೇ ಚೀನಿ ಸೈನಿಕರು ಹಲ್ಲೆ ನಡೆಸಿದ್ದರು. ನಡೆಸಿದ ವಿಚಾರ ತಿಳಿದು ಭಾರತದ ಸೈನಿಕರು ಮತ್ತಷ್ಟು ಸಂಖ್ಯೆಯಲ್ಲಿ ಸ್ಥಳಕ್ಕೆ ಬಂದಾಗ ಚೀನಿಯರು ಕಲ್ಲು ತೂರಾಟ ನಡೆಸಿ ಕಬ್ಬಿಣದ ರಾಡ್‌ಗಳಿಂದ ಹೊಡೆದಿದ್ದಾರೆ. ಪರಿಣಾಮ ಭಾರತದ 20 ಸೈನಿಕರು ಹುತಾತ್ಮರಾಗಿದ್ದಾರೆ. ಈ ವೇಳೆ ಭಾರತದ ಸೈನಿಕರು ತಿರುಗೇಟು ನೀಡಿ 43 ಚೀನಿ ಸೈನಿಕರನ್ನು ಹತ್ಯೆ ಮಾಡಿದ್ದಾರೆ.

india china 1

ಗನ್‌ ಫೈರ್‌ ಮಾಡುವಂತಿಲ್ಲ:
ಭಾರತ ಮತ್ತು ಚೀನಾ ನಡುವೆ ಅಂತಾರಾಷ್ಟ್ರೀಯ ಗಡಿ ರೇಖೆ ಇಲ್ಲದ ಕಾರಣ ಗಡಿಯಲ್ಲಿ ಈ ರೀತಿ ಕಿತ್ತಾಟಗಳು ನಡೆಯುತಿತ್ತು. ಎರಡು ದೇಶಗಳ ಗಡಿಯನ್ನು ವಾಸ್ತವ ಗಡಿ ರೇಖೆಯಿಂದ(ಎಲ್‌ಎಸಿ – ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ಗುರುತಿಸಲಾಗಿದೆ. ಆದರೆ ಹಲವು ಭಾಗಗಳಲ್ಲಿ ಭಾರತ ಮತ್ತು ಚೀನಾದ ನಡುವಿನ ಗಡಿಗಳು ನಿರ್ಧಾರವಾಗಿಲ್ಲ. ಹೀಗಾಗಿ ಹಲವು ಬಾರಿ ಎರಡು ಕಡೆಯ ಸೈನಿಕರು ಗಡಿಯಲ್ಲಿ ಪಹರೆ ಕಾಯುತ್ತಿದ್ದಾಗ ಕಿತ್ತಾಟಗಳು ನಡೆಯುತ್ತಿದ್ದವು. ಎರಡು ಕಡೆಯಿಂದಲೂ ಪ್ರತಿರೋಧಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ 1993, 1996ರಲ್ಲಿ ಭಾರತ ಮತ್ತು ಚೀನಾ ನಡುವೆ ಒಪ್ಪಂದ ನಡೆಯಿತು.

1993ರ ಒಪ್ಪಂದದ ಪ್ರಕಾರ ಎಲ್‌ಎಸಿ ದಾಟಿ ಯಾರೇ ಒಳಬಂದರೂ ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಬೇಕು. 1996ರ ಪ್ರಕಾರ ಎಲ್‌ಎಸಿಯ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಎರಡು ದೇಶಗಳು ಯಾವುದೇ ಸ್ಫೋಟ ನಡೆಸಬಾರದು, ಗುಂಡಿನ ದಾಳಿ ನಡೆಸಕೂಡದು ಎಂಬ ಒಪ್ಪಂದಕ್ಕೆ ಬರಲಾಗಿದೆ. ಹೀಗಾಗಿ ಭಾರತ ಚೀನಾ ಗಡಿಯಲ್ಲಿ ಸೈನಿಕರು ಈ ಒಪ್ಪಂದಕ್ಕೆ ಬದ್ಧವಾಗಿದ್ದಾರೆ. ಗುಂಡಿನ ದಾಳಿಯ ಬದಲು ಪರಸ್ಪರ ಕಲ್ಲು, ದೊಣ್ಣೆಗಳಿಂದ ಬಡಿದಾಡಿಕೊಳ್ಳುತ್ತಾರೆ.

LADAKH INDIAN CHINA

ಭಾರತ ಹೇಳಿದ್ದು ಏನು?
ಜೂನ್‌ 6 ರಂದು ನಡೆದ ಮಿಲಿಟರಿ ಕಮಾಂಡರ್‌ ಮಟ್ಟದ ಮಾತುಕತೆಯ ವೇಳೆ ಎಲ್‌ಎಸಿಯಿಂದ ಸೇನೆ ಹಿಂದಕ್ಕೆ ಬರುವ ಸಂಬಂಧ ಮಾತುಕತೆ ನಡೆದಿತ್ತು. ಆದರೆ ಚೀನಾ ಸೇನೆ ಭಾರತದ ಎಲ್‌ಎಸಿ ಬಳಿ ಟೆಂಟ್‌ ನಿರ್ಮಿಸಿತ್ತು. ವಿವಾದಕ್ಕೆ ಕಾರಣವಾದ ಈ ಟೆಂಟ್‌ ಅನ್ನು ಚೀನಾ ತೆರವು ಮಾಡಬೇಕಿತ್ತು. ಈ ವಿಚಾರದ ಬಗ್ಗೆ ಮಾತುಕತೆ ನಡೆಯುತ್ತಿದ್ದಾಗ ಚೀನಾ ಸೇನೆ ಪೂರ್ವ ನಿಗದಿಯಂತೆ ದಾಳಿ ನಡೆಸಿದೆ. ಇದರಿಂದಾಗಿ ಸಾವು ನೋವು ಸಂಭವಿಸಿದೆ. ಈ ಘಟನೆಗೆ ಚೀನಾವೇ ನೇರ ಕಾರಣ.

ಈ ಘಟನೆಯಿಂದ ದ್ವಿಪಕ್ಷೀಯ ಮಾತುಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಜೂನ್‌ 6 ರಂದು ಕಮಾಂಡರ್‌ ಮಟ್ಟ ಮಾತುಕತೆಯ ವೇಳೆ ಏನು ನಿರ್ಧಾರ ಮಾಡಲಾಗಿದೆಯೋ ಅದನ್ನು ಎರಡು ದೇಶಗಳು ಪಾಲಿಸಬೇಕು. ಎರಡು ಕಡೆಯ ಸೈನಿಕರು ದ್ವಿಪಕ್ಷೀಯ ಒಪ್ಪಂದವನ್ನು ಪಾಲಿಸಬೇಕು ಎಂದು ಭಾರತ ಹೇಳಿದೆ.

india china ladakh border conflict

ಚೀನಾ ಹೇಳಿದ್ದು ಏನು?
ಭಾರತದ ಸೇನೆ ಎಲ್‌ಎಸಿ ದಾಟಿ ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದೆ. ಭಾರತ ಎಲ್ಲ ಒಪ್ಪಂದಗಳನ್ನು ಉಲ್ಲಂಘಿಸಿ ಈ ಕೃತ್ಯ ಎಸಗಿದೆ. ಚೀನಾ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಚೀನಿ ಸೈನಿಕರ ಮೇಲೆ ಹಲ್ಲೆ ಎಸಗಿದವರ ವಿರುದ್ಧ ಭಾರತ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಈ ರೀತಿಯ ಘಟನೆ ಮರುಕಳಿಸಬಾರದು. ನೂರು ಕೋಟಿ ಜನಸಂಖ್ಯೆ ಇರುವ ದೇಶಗಳಾದ ನಾವು ಅಭಿವೃದ್ಧಿ ವಿಚಾರಗಳಿಗೆ ಮನ್ನಣೆ ನೀಡಬೇಕು.

TAGGED:chinaChina ArmyindiaIndian soldierskannada newsಎಲ್‍ಎಸಿಕಬ್ಬಿಣದ ರಾಡ್ಗಾಲ್ವಾನ್‌ಚೀನಾಭಾರತಮೊಳೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
45 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?