ಮೋಸ, ವಂಚನೆ, ವಸೂಲಿಯಿಂದ ಸಚಿವ ಸ್ಥಾನ ತಪ್ಪಿತು: ಸಿಎಂ ವಿರುದ್ಧವೇ ಗುಡುಗಿದ ಶಾಸಕ ಓಲೇಕಾರ್

Public TV
2 Min Read
Nehru Olekar 1

– ಎಲ್ಲ ಸ್ಥಾನ ಲಿಂಗಾಯತರಿಗೆ ಸಿಕ್ರೆ ನಾವ್ ಏನ್ ಮಾಡೋದು?
– ಜಾತಿ ರಾಜಕಾರಣದಿಂದ ಮುಖ್ಯಮಂತ್ರಿಗಳಿಂದಲೇ ಮೋಸ ಆಯ್ತು
– ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಬೆಂಗಳೂರು: ಮೋಸ, ವಂಚನೆ ಮತ್ತು ವಸೂಲಿಯಿಂದಾಗಿ ನನಗೆ ಸಚಿವ ಸ್ಥಾನ ತಪ್ಪಿದೆ. ನಮ್ಮ ಜಿಲ್ಲೆಯವರಾದ ಮುಖ್ಯಮಂತ್ರಿಗಳಿಂದಲೇ ನನಗೆ ಮೋಸವಾಯ್ತು ಎಂದು ಶಾಸಕ ನೆಹರು ಓಲೇಕಾರ್ ಸಿಎಂ ಬೊಮ್ಮಾಯಿ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ.

Nehru Olekar 2

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕ ನೆಹರು ಓಲೇಕಾರ್, ಪಟ್ಟಿಯಲ್ಲಿಯೂ ನನ್ನ ಹೆಸರಿಲ್ಲ ಮತ್ತು ಸಿಎಂ ಸಹ ನನಗೆ ಕರೆ ಮಾಡಿಲ್ಲ. ನಮ್ಮ ಪಕ್ಷದಲ್ಲಿಯೂ ಮೋಸ, ವಂಚನೆ ಮಾಡೋರು ಇರೋದರಿಂದ ಸಚಿವ ಸ್ಥಾನ ತಪ್ಪಿದೆ. ಹಿಂದುಳಿದ ವರ್ಗದ ನಾಯಕನಾದ ನಾನು ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಸಚಿವ ಸ್ಥಾನಕ್ಕೆ ಅರ್ಹ ವ್ಯಕ್ತಿ. ಆದ್ರೂ ಯಾರ್ ಯಾರಿಗೂ ಸಚಿವ ಸ್ಥಾನ ನೀಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಅಸಮಾಧಾನ ಹೊರ ಹಾಕಿದರು.

Nehru Olekar 2

ಹೈಕಮಾಂಡ್‍ನಿಂದ ಅಗೌರವ:
ನೂತನ ಸಚಿವರ ಪಟ್ಟಿ ನೋಡಿದ್ರೆ ಇದು ವಸೂಲಿ ಮೇಲೆ ಆಯ್ಕೆಯಾಗಿದೆ ಅನ್ನೋದು ಗೊತ್ತಾಗುತ್ತೆ. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಬಲಗೈ ಸಮುದಾಯಕ್ಕೆ ಸೇರಿದ ನಾಯಕ ಮೂರು ಬಾರಿ ಆಯ್ಕೆಯಾದ್ರೂ ಹೈಕಮಾಂಡ್ ನಮಗೆ ಅಗೌರವ ತೋರಿಸಿದೆ. ಸದ್ಯ ಹೈಕಮಾಂಡ್ ಮಾಡಿದ ಪಟ್ಟಿಯ ಬಗ್ಗೆ ಅಸಮಾಧಾನವಿದ್ದು, ಇನ್ನುಳಿದ ಸ್ಥಾನಗಳಲ್ಲಿ ಅವಕಾಶ ಮಾಡಿಕೊಡಬೇಕು. ಇಲ್ಲವಾದ್ರೆ ಅನಿವಾರ್ಯವಾಗಿ ಪಕ್ಷದಲ್ಲಿ ಇರುತ್ತೇವೆ.

Nehru Olekar 3

ನಾವು ಏನು ಮಾಡಬೇಕು?
ಪಕ್ಷದಲ್ಲಿ ಜಾತಿ ರಾಜಕಾರಣ ಮಾಡಲಾಗುತ್ತಿದ್ದು, ಪ.ಪಂಗಡದವರನ್ನ ಕಡೆಗಣನೆ ಮಾಡಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಮುಂದುವರಿದ ಕೋಮಿನವರೆಗೆ ಅವಕಾಶಗಳು ಸಿಗುತ್ತಿವೆ. ಎಲ್ಲ ಲಿಂಗಾಯತರಿಗೆ ನೀಡಿದ್ರೆ, ಪ.ಜಾತಿ ಮತ್ತು ಪ.ಪಂಗಡದವರು ಏನು ಮಾಡಬೇಕು ಎಂದು ಪ್ರಶ್ನೆ ಮಾಡಿದರು. ಸಿಎಂ ಮತ್ತು ಬಿ.ಸಿ.ಪಾಟೀಲ್ ಮುಂದುವರಿದ ಕೋಮಿನವರು. ಅವರಿಗೆ ಸ್ಥಾನ ಕೊಟ್ರೆ, ಅವರೇನು ಹಿಂದುಳಿದ ವರ್ಗಕ್ಕೆ ಸಂಬಂಧಿಸಿದವರಾ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾತ್ರಿಯಾಗ್ತಿದ್ದಂತೆ ನಾಪತ್ತೆಯಾಗುವ ಸಿಎಂ, ಹೋಗ್ತಿರುವುದು ಎಲ್ಲಿಗೆ? – ದೆಹಲಿಯಲ್ಲಿ ಬೊಮ್ಮಾಯಿ ನಿಗೂಢ ಹೆಜ್ಜೆ

Nehru Olekar 4

ಕಾದು ನೋಡಿ, ಎಚ್ಚರಿಕೆ ಕೊಟ್ರಾ?:
ನಮ್ಮ ಜಿಲ್ಲೆಯವರಾದ ಮುಖ್ಯಮಂತ್ರಿಗಳಿಂದಲೇ ನನಗೆ ಸಚಿವ ಸ್ಥಾನ ತಪ್ಪಿದೆ. ಈ ಮೊದಲು ಮಾತನಾಡಿದಾಗ ದೆಹಲಿಗೆ ಹೋಗಿ ಬಂದು ಮಾತನಾಡುತ್ತೇನೆ ಎಂದು ಹೇಳಿದ್ದರು. ಇತ್ತ ಯಡಿಯೂರಪ್ಪ ಅವರ ಜೊತೆ ಸಹ ಚರ್ಚೆ ನಡೆಸಿದ್ದೇನೆ. ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರ ಜೊತೆ ಸಭೆ ನಡೆಸಿ ಚರ್ಚೆ ನಡೆಸುತ್ತೇನೆ. ಬಿಜೆಪಿಯಲ್ಲಿ ಹಿಂದಿನಿಂದಲೂ ಇದ್ದೇನೆ, ಮುಂದೆಯೂ ಇರುತ್ತೇನೆ. ಆದ್ರೆ ಪಕ್ಷದಲ್ಲಿ ಸದ್ಯದ ವ್ಯವಸ್ಥೆ ಮುಂದಿನ ದಿನಗಳಲ್ಲಿ ದೊಡ್ಡ ಹೊಡೆತ ಬೀಳಲಿದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ:ಬುಧವಾರ ಮಧ್ಯಾಹ್ನ 2:15ಕ್ಕೆ ನೂತನ ಸಚಿವರ ಪ್ರಮಾಣ ವಚನ- ಯಾರಿಗೆ ಮಂತ್ರಿಗಿರಿ?

Share This Article
Leave a Comment

Leave a Reply

Your email address will not be published. Required fields are marked *