Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಶವಂತಪುರ, ಆರ್‍ಆರ್ ವಲಯದ ಕೋವಿಡ್ ಕೇರ್ ಸೆಂಟರ್‌ಗೆ ಡಿವಿಎಸ್, ಎಸ್‌ಟಿಎಸ್‌ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಶವಂತಪುರ, ಆರ್‍ಆರ್ ವಲಯದ ಕೋವಿಡ್ ಕೇರ್ ಸೆಂಟರ್‌ಗೆ ಡಿವಿಎಸ್, ಎಸ್‌ಟಿಎಸ್‌ ಭೇಟಿ

Bengaluru City

ಯಶವಂತಪುರ, ಆರ್‍ಆರ್ ವಲಯದ ಕೋವಿಡ್ ಕೇರ್ ಸೆಂಟರ್‌ಗೆ ಡಿವಿಎಸ್, ಎಸ್‌ಟಿಎಸ್‌ ಭೇಟಿ

Public TV
Last updated: May 15, 2021 6:54 pm
Public TV
Share
3 Min Read
Sadananda Gowda
SHARE

– ಕೋವಿಡ್ ಕೇರ್ ಸೆಂಟರ್ ಗಳ ಮೂಲ ಸೌಕರ್ಯ, ಸ್ಥಿತಿಗತಿ ವಿಕ್ಷಣೆ
– ಸರ್ಕಾರದಿಂದ ಕೈಗೊಳ್ಳಲಾದ ಕ್ರಮಗಳ ವಿವರಿಸಿದ ಸಚಿವ ಸೋಮಶೇಖರ್
– ಜನಸೇವಾ ವಿದ್ಯಾಕೇಂದ್ರದ ನೂತನ ಕೇರ್ ಸೆಂಟರ್ಗೆ 16 ಬೆಡ್‍ಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ವ್ಯವಸ್ಥೆ ಮಾಡಿಸಿದ ಎಸ್‍ಟಿಎಸ್
– ಶಾಶ್ವತ ಸೌಕರ್ಯಗಳ ಬಗ್ಗೆ ಚಿಂತನೆ

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯದ ಕೋವಿಡ್ ಕೇರ್ ಸೆಂಟರ್‌ಗಳ   ವ್ಯವಸ್ಥೆಗಳ ಬಗ್ಗೆ ಶನಿವಾರ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Sadananda Gowda2

ಕೇಂದ್ರೀಯ ಆಯುರ್ವೇದ ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿದ ಸಚಿವರುಗಳು, ಅಲ್ಲಿ ನೂತನವಾಗಿ ಪ್ರಾರಂಭಿಸಲು ಉದ್ದೇಶಿಸಿರುವ 100 ಆಕ್ಸಿಜನ್ ಬೆಡ್‍ಗಳ ಪರಿಶೀಲನೆ ನಡೆಸಿದರು. ಜೊತೆಗೆ ಮೂಲ ಸೌಕರ್ಯ ವ್ಯವಸ್ಥೆಗಳನ್ನು ಹೇಗೆ ಮಾಡಿಕೊಳ್ಳಲಾಗಿದೆ. ಸರ್ಕಾರದಿಂದ ಯಾವ ಯಾವ ವ್ಯವಸ್ಥೆಗಳನ್ನು ಮಾಡಲಾಗಿದೆ. ಇನ್ನೂ ಏನೇನು ಬೇಡಿಕೆಗಳು ಇವೆ ಎಂಬೆಲ್ಲ ಮಾಹಿತಿಗಳನ್ನು ಸಚಿವರಾದ ಸೋಮಶೇಖರ್ ಅವರು ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಅವರಿಗೆ ವಿವರಿಸಿದರು.

ಬೆಂಗಳೂರಿನ ಚನ್ನೆನಹಳ್ಳಿ ಜನಸೇವಾ ವಿದ್ಯಾಕೇಂದ್ರದ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿದೆ.
ನೈಸರ್ಗಿಕ ವಿಕೋಪವೇ ಇರಲಿ OR ದೇಶಕ್ಕೆ ಯಾವುದೇ ವಿಪತ್ತು ಬರಲಿ – ತಕ್ಷಣವೇ ಸಂಘದ ಕಾರ್ಯಕರ್ತರು ನೆರವಿಗೆ ದಾವಿಸುತ್ತಾರೆ. ಈಗಲೂ ಅಷ್ಟೇ. ಜೀವದ ಹಂಗು ತೊರೆದು ಇಂತಹ ಅನೇಕ ಕೇಂದ್ರಗಳನ್ನು ತೆರೆದಿದ್ದಾರೆ. ಧನ್ಯವಾದಗಳು‌ @friendsofrss pic.twitter.com/d86MqCPe4K

— Sadananda Gowda (@DVSadanandGowda) May 15, 2021

ಮೂಲ ಸೌಲಭ್ಯ ಬಗ್ಗೆ ಮಾಹಿತಿ :
ಜ್ಞಾನಭಾರತಿ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿದ ಕೇಂದ್ರ ಸಚಿವರಾದ ಸದಾನಂದಗೌಡ ಅವರು ಹಾಗೂ ಸೋಮಶೇಖರ್ ಅವರು, ಅಲ್ಲಿನ ಮೂಲ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್‍ಗಳ ಪೂರೈಕೆ, ರೋಗಿಗಳಿಗೆ ಲಭ್ಯವಾಗುತ್ತಿರುವ ಚಿಕಿತ್ಸೆ, ಔಷಧಗಳು, ವೈದ್ಯಕೀಯ ಕಿಟ್‍ಗಳು, ನೀರು-ಊಟದ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಕರ್ಯಗಳನ್ನು ಯಾವ ರೀತಿಯಾಗಿ ಕಲ್ಪಿಸಲಾಗಿದೆ. ತುರ್ತು ಅಗತ್ಯವಿರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಯಾವ ರೀತಿ ಆಸ್ಪತ್ರೆ ಸಜ್ಜಾಗಿದೆ ಎಂಬ ಬಗ್ಗೆ ಸಚಿವರಾದ ಸೋಮಶೇಖರ್ ಅವರು ಕೇಂದ್ರ ಸಚಿವರಿಗೆ ವಿವರಣೆ ನೀಡಿದರು. ಅಲ್ಲದೆ, ಅಚ್ಚುಕಟ್ಟಿನ ವ್ಯವಸ್ಥೆ ಬಗ್ಗೆ ಈ ವೇಳೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಹಕಾರ ಸಚಿವ ಶ್ರೀ ಎಸ್ ಟಿ ಸೋಮಶೇಖರ್ ಅವರೊಂದಿಗೆ ಯಶ್ವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜ್ಞಾನಭಾರತಿ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಪರಿಶೀಲಿಸಲಾಯಿತು.
ಕ್ಷೇತ್ರದಲ್ಲಿ ಇಂತಹ ಹಲವು ತಾತ್ಕಾಲಿಕ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಭಿನಂದನೆಗಳು @STSomashekarMLA pic.twitter.com/HVU7MHP3eE

— Sadananda Gowda (@DVSadanandGowda) May 15, 2021

ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡಿಸಿದ ಎಸ್ ಟಿ ಎಸ್:
ಜನಸೇವಾ ವಿದ್ಯಾ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭವಾಗಿರುವ 100 ಬೆಡ್‍ಗಳ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿದ ಕೇಂದ್ರ ಸಚಿವರಾದ ಸದಾನಂದಗೌಡ ಅವರು ಹಾಗೂ ಸಚಿವರಾದ ಸೋಮಶೇಖರ್ ಅವರು, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇ ವೇಳೆ 16 ಬೆಡ್‍ಗಳಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ವ್ಯವಸ್ಥೆಗೆ ಬಿಬಿಎಂಪಿ ಮೂಲಕ ಸಚಿವರಾದ ಸೋಮಶೇಖರ್ ಅವರು ವ್ಯವಸ್ಥೆ ಮಾಡಿದ್ದರ ಬಗ್ಗೆ ವೈದ್ಯಾಧಿಕಾರಿಗಳು ಕೇಂದ್ರ ಸಚಿವರ ಗಮನಕ್ಕೆ ತಂದರು.

ಬೆಂಗಳೂರು ಉತ್ತರಹಳ್ಳಿ ಹೊಬಳಿಯಲ್ಲಿರುವ ಕೇಂದ್ರ ಸರ್ಕಾರದ ಆಯುರ್ವೇದ ಸಂಶೋಧನಾ ಸಂಸ್ಥೆ ಆಸ್ಪತ್ರೆಗೆ ಭೇಟಿ ನೀಡಿದೆ. ಇನ್ನು 2 ವಾರದಲ್ಲಿ ಇದನ್ನು ಸುಸಜ್ಜಿತ ಕೋವಿಡ್ ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸಲಾಗುವುದು.
ಸಹಕಾರಿ ಸಚಿವ @STSomashekarMLA, ಸಂಸ್ಥೆಯ ನಿರ್ದೇಶಕಿ ಡಾ ಸುಲೋಚನಾ ಭಟ್ ಉಪಸ್ಥಿತರಿದ್ದರು. @DDChandanaNews pic.twitter.com/ZJgDxwq8wc

— Sadananda Gowda (@DVSadanandGowda) May 15, 2021

ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಹಾಲಿ ಎಲ್ಲ ಕಡೆಗಳಿಂದ ಸೌಲಭ್ಯಗಳನ್ನು ಒದಗಿಸಿಕೊಂಡು ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ತಾತ್ಕಾಲಿಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ, ಆಕ್ಸಿಜನ್ ಬೆಡ್ ಗಳು, ಆಕ್ಸಿಜನ್ ಕಾನ್ಸಂಟ್ರೇಟರ್‌ಗಳು, ಮೆಡಿಕಲ್ ಕಿಟ್ ಗಳು ಸೇರಿದಂತೆ ಆಸ್ಪತ್ರೆಗಳಲ್ಲಿ ಕೋವಿಡ್‍ಗೆ ಸಂಬಂಧಪಟ್ಟಂತೆ ಮೂಲಸೌಕರ್ಯವನ್ನು ಶಾಶ್ವತವಾಗಿ ಒದಗಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದ್ದೇನೆ. ಈ ಬಗ್ಗೆ ಸರ್ಕಾರದೊಂದಿಗೆ ಮಾತನಾಡಿ ಮುಂಬರುವ ದಿನಗಳಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರಾದ ಸೋಮಶೇಖರ್ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು ಸೇರಿದಂತೆ ವೈದ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.

TAGGED:CoronapublictvS T Somashekharsadananda gowdaಆಯುರ್ವೇದಎಸ್ ಟಿ ಸೋಮಶೇಖರ್ಡಿ.ವಿ.ಸದಾನಂದಗೌಡ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Karnataka grants Rs 10 crore to Wayanad landslide victims BJP JDS slams congress govt
Bengaluru City

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ 10 ಕೋಟಿ ಅನುದಾನ – ಬಿಜೆಪಿ, ಜೆಡಿಎಸ್‌ ಆಕ್ರೋಶ

Public TV
By Public TV
37 minutes ago
Chinnaswamy Stadium
Bengaluru City

ಇನ್ಮುಂದೆ ಚಿನ್ನಸ್ವಾಮಿಯಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿಯೂ ಮೃತರ ನೆನಪಿಗೆ 11 ಸೀಟ್ ಮೀಸಲು

Public TV
By Public TV
2 hours ago
Mojtaba Khamenei
Latest

ಅಮೆರಿಕದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ

Public TV
By Public TV
2 hours ago
trump in share market inside trade
Latest

ಟ್ರಂಪ್‌ ಕದನ ವಿರಾಮ ಘೋಷಣೆಯ 10 ನಿಮಿಷಕ್ಕೂ ಮೊದಲು 14 ಸಾವಿರ ಕೋಟಿ ರೂ. ಬೆಟ್‌ – ಇನ್‌ಸೈಡರ್‌ ಟ್ರೇಡಿಂಗ್‌ ಮಾಡಿದ್ಯಾರು?

Public TV
By Public TV
2 hours ago
Air Canada Express Crew
Latest

Air Canada Plane Crash | 330 ಅಡಿ ದೂರಕ್ಕೆ ಬಿದ್ದರೂ ಉಳಿದ ಸಿಬ್ಬಂದಿ – ಸೀಟಿನಲ್ಲಿ ಸಿಲುಕಿ ಅದೃಷ್ಟವಶಾತ್ ಪಾರು

Public TV
By Public TV
3 hours ago
Asim Munir Shehbaz Sharif Donald Trump
Latest

ಪಾಕಿಸ್ತಾನದಲ್ಲಿ ಅಮೆರಿಕ, ಇರಾನ್‌ ಶಾಂತಿ ಮಾತುಕತೆ?

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?