ಯಾರು ನಿರ್ನಾಮ ಆಗುತ್ತಾರೆಂದು ಮುಂದಿನ ಚುನಾವಣೆಯಲ್ಲಿ ನೋಡೋಣ: ರೇವಣ್ಣ

Public TV
1 Min Read
HSN REVANNA

ಹಾಸನ: ನಾವು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ವಿರೋಧವಾಗಿದ್ದೇವೆ. ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ ನಾವು ಯಾರ ಮನೆ ಬಾಗಿಲಿಗೂ ಹೋಗಿಲ್ಲ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಬಿಜೆಪಿಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂಬ ಸಿಪಿ.ಯೋಗೇಶ್ವರ್ ಹೇಳಿಕೆ ವಿರುದ್ಧ ಮಾಜಿ ಸಚಿವ ಹೆಚ್‍ಡಿ.ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ.

H.D.Revanna

ಹಾಸನದಲ್ಲಿ ಮಾತನಾಡಿದ ಅವರು, ಪಕ್ಷವನ್ನು ನಿರ್ನಾಮ ಮಾಡೋದು ದೇವರು ಅಥವಾ ಪ್ರಜೆಗಳು. ಯೋಗೇಶ್ವರ್ ಅವರಿಂದಲೋ ಬೇರೆ ಯಾರಿಂದಲೋ ಪಕ್ಷ ನಿರ್ನಾಮ ಮಾಡಲು ಸಾಧ್ಯವಿಲ್ಲ. ಯಾರು ನಿರ್ನಾಮ ಆಗುತ್ತಾರೆ ಎಂಬುದನ್ನು ಮುಂದಿನ ಚುನಾವಣೆಯಲ್ಲಿ ನೋಡೋಣ ಎಂದು ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಬಗ್ಗೆ ಎಚ್‍ಡಿಕೆ ಸಾಫ್ಟ್ ಕಾರ್ನರ್ ಹೊಂದಿರುವುದು ಸತ್ಯ: ಬಸವರಾಜ್ ಹೊರಟ್ಟಿ

CP Yogeshwar

ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಪಕ್ಷದ ಆರೋಪ ಬಗ್ಗೆ ಮಾತನಾಡಿದ ಅವರು, ಅವರಿಬ್ಬರು ರಾಷ್ಟ್ರೀಯ ಪಕ್ಷದವರು. ನಾವು ಹಗರಣದ ಬಗ್ಗೆ ಮಾತನಾಡಲು ಹೋದರೆ ವಿಧಾನಸಭೆಯಲ್ಲಿ ಚರ್ಚೆ ಮಾಡಿ ಅಂತಾರೆ. ಒಳ್ಳೆಯ ಕೆಲಸ ಮಾಡುತ್ತಿರುವಾಗ ಹೊಟ್ಟೆಯುರಿ ಬಂದು ಇವರು ಅಳುತ್ತಾರೆ ಅಂತಾರೆ ಎಂದು ಹೇಳಿದರು. ಇದನ್ನೂ ಓದಿ: 15 ದಿನ ಹಿಂದೆ ಕಾಂಗ್ರೆಸ್‌ಗೆ ಬರ್ತಿನಿ ಅಂತ ಯೋಗೇಶ್ವರ್‌ ನನ್ನ ಬಳಿ ಚರ್ಚಿಸಿದ್ದ – ಡಿಕೆಶಿ

REVANNA 1

ಇದೇ ವೇಳೆ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನೇನಾದರೂ ಸಚಿವನಾಗಿದ್ದಾಗ ಹಣ ಪಡೆದು ವರ್ಗಾವಣೆ ಮಾಡಿದ್ರೆ, ಭ್ರಷ್ಟಾಚಾರ ಮಾಡಿದ್ರೆ ಇಂದೇ ರಾಜಕೀಯ ನಿವೃತ್ತಿ ಪಡೆಯುತ್ತಿದ್ದೆ. ಈ ಬಗ್ಗೆ ಯಾರಾದರೂ ಅಧಿಕಾರಿಗಳು ಹೇಳಲಿ. ಕೋವಿಡ್ ನಿರ್ವಹಣೆ ಸರಿಯಾಗಿ ಮಾಡದ ಸರ್ಕಾರ, ಎಷ್ಟು ದಿನ ಇರುತ್ತೋ ಅಷ್ಟು ದಿನ ಮಜಾ ಮಾಡಬೇಕು ಎಂದು ಹೊರಟಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಹಿಂದೆ ಹಾಸನ ಜಿಲ್ಲೆಗೆ ಅನುಮೋದನೆ ಕೊಟ್ಟಿರುವ ಕಾಮಗಾರಿಗಳು ಆಗದಿದ್ರೆ ಶಾಂತ ರೀತಿಯಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಡಿಕೆಶಿ ಜೆಡಿಎಸ್ ಮುಗಿಸಲು ನೋಡುತ್ತಿದ್ದಾರೆ: ಎಚ್‍ಡಿಕೆ

Share This Article
Leave a Comment

Leave a Reply

Your email address will not be published. Required fields are marked *