ಬೆಂಗಳೂರು: ಯಾರು ಯಾರಿಗೆ ಬೆಂಬಲ ಕೊಡ್ತಾರೆ ನಾಳೆ ನೋಡೋಣ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸಿಎಂ ಜೊತೆಗಿನ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಲಕ್ಷ್ಮಣ ಸವದಿ, ನಾಳೆ ನಮ್ಮ ಎಲ್ಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುತ್ತಾರೆ ಎಂಬ ವಿಶ್ವಾಸ ನಮಗಿದೆ. ಸಾರಿಗೆ ನೌಕರರು ನಾಳೆ ಕೆಲಸಕ್ಕೆ ಹಾಜರಾಗಬಹುದು. ಕೆಲಸಕ್ಕೆ ಹಾಜರಾಗುವ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುತ್ತೇವೆ. ಯಾರಾದ್ರೂ ಅಡ್ಡಿ ಪಡಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರತಿಭಟನಾ ನಿರತರಿಗೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಚೆನ್ನಾಗಿ ಮಾತಾಡಿದರು. ಮಾಧ್ಯಮಗಳ ಮುಂದೆ ಸಕಾರಾತ್ಮಕ ಬೆಳವಣಿಗೆ ಅಂತ ಅವರೇ ಹೇಳಿದವರು ಅಲ್ಲಿ ತಮ್ಮ ಮಾತು ಬದಲಿಸಿದ್ದಾರೆ. ನಾಳೆ ಪ್ರಯಾಣಿಕರು ನಿಲ್ದಾಣಕ್ಕೆ ಬರಬಹುದು. ಯಾರಿಗೂ ತೊಂದರೆ ಆಗದಂತೆ ಸರ್ಕಾರ ನೋಡಿಕೊಳ್ಳುತ್ತದೆ. ಖಾಸಗಿ ವಾಹನಗಳ ಬೆಂಬಲ ನೀಡುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾಳೆ ಯಾರು ಯಾರಿಗೆ ಬೆಂಬಲ ಕೊಡ್ತಾರೆ ನೋಡೋಣ. ಕೆಲವರ ಪ್ರತಿಷ್ಠೆಗಾಗಿ ಸಾರಿಗೆ ನೌಕರರು ಒಳಗಾಗೋದು ಬೇಡ ಎಂದು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ ಹೊರ ಹಾಕಿದರು.