ಬೆಂಗಳೂರು: ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಯಾರೂ ಯಾರೂ ರಾಜಕೀಯ ಹೇಳಿಕೆಗಳನ್ನು ನೀಡಕೂಡದು ಎಂದು ಸಿಎಂ ಯಡಿಯೂರಪ್ಪ ಆಪ್ತರಿಗೆ ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ.
ಬಿಎಸ್ವೈ ಟ್ವೀಟ್:
ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ.
ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ
— B.S.Yediyurappa (@BSYBJP) June 7, 2021
ಭಾನುವಾರ ಸಿಎಂ ರಾಜೀನಾಮೆ ಮಾತುಗಳನ್ನಾಡುತ್ತಿದ್ದ ರಾಜ್ಯ ಬಿಜೆಪಿ ಅಂಗಳದಲ್ಲಿ ಹಲವು ಚರ್ಚೆಗಳು ಮುನ್ನಲೆಗೆ ಬಂದಿದ್ದವು. ಇತ್ತ ಮುಖ್ಯಮಂತ್ರಿಗಳು ಕೆಲವರ ಹೇಳಿಕೆಗಳಿಂದ ಮನನೊಂದು ಈ ಮಾತುಗಳನ್ನಾಡಿದ್ದಾರೆ ಎಂದು ಬಿಎಸ್ವೈ ಬಣದ ಶಾಸಕರು ಪರೋಕ್ಷವಾಗಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅವರಿಗೆ ಮನಸ್ಸಿದೆ ಇವರಿಗೆ ಕನಸಿದೆ ಆದರೆ…?
ಸಿಎಂ ಭಾನುವಾರ ಹೇಳಿದ್ದೇನು?: ನಾನು ಯಾರ ಬಗ್ಗೆಯೂ ಟೀಕೆ ಮಾಡಲು ಹೋಗುವುದಿಲ್ಲ. ಬಿಜೆಪಿಗೆ ಪರ್ಯಾಯದ ವ್ಯಕ್ತಿ ಇಲ್ಲ ಎಂಬುದನ್ನು ನಾನು ಒಪ್ಪುವುದಿಲ್ಲ. ರಾಜ್ಯದಲ್ಲಿ ದೇಶದಲ್ಲಿ ಪರ್ಯಾಯ ನಾಯಕರು ಇದ್ದಾರೆ. ಕರ್ನಾಟಕದಲ್ಲೂ ಪರ್ಯಾಯ ವ್ಯಕ್ತಿಗಳು ಇಲ್ಲ ಎನ್ನುವುದನ್ನು ನಾನು ಒಪ್ಪುವುದಿಲ್ಲ. ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ಎಲ್ಲಿಯವರೆಗೆ ಹೈಕಮಾಂಡ್ ವಿಶ್ವಾಸ ಇರುತ್ತೋ ಅಲ್ಲಿವರೆಗೂ ನಾನು ಸಿಎಂ ಆಗಿರುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಮಠಾಧೀಶರಿಗೆ ಬಿಜೆಪಿ ಸಚಿವರು ಲ್ಯಾಪ್ಟಾಪ್ ತೋರಿಸಿದ್ದಾರೆ: ಡಿಕೆಶಿ