Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಯಾವುದೇ ಸಂಧಾನ ಮಾತುಕತೆ ನಡೆದಿಲ್ಲ: ಲಕ್ಷ್ಮಣ ಸವದಿ

Public TV
Last updated: April 19, 2021 8:54 pm
Public TV
Share
5 Min Read
Laxman Savadi 2
SHARE

ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಸಂಧಾನದ ಮಾತುಕತೆ ನಡೆದಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ. ಆದರೆ ಆ ರೀತಿಯ ಯಾವುದೇ ಸಂಧಾನದ ಪ್ರಕ್ರಿಯೆ ನಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ಪ್ರಾರಂಭದ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳು ಯಾವುದೇ ಮಾತುಕತೆ, ಸಂಧಾನದ ಅವಶ್ಯಕತೆ ಇರುವುದಿಲ್ಲ. ಮೊದಲು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿ ಎಂದು ತಾಕೀತು ಮಾಡಿದ್ದರು. ಕೆಲವು ಮುಖಂಡರು ತಾವು ಮುಷ್ಕರ ನಿರತರ ಪರವಾಗಿ ಇಂದು ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾಗಿ ತಿಳಿಸಿರುತ್ತಾರೆ. ಅದನ್ನು ನಾನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ಆದರೆ ಬೊಮ್ಮಾಯಿ ಅವರನ್ನು ಈ ಬಗ್ಗೆ ಕೇಳಿದಾಗ, ಮುಖ್ಯಮಂತ್ರಿಗಳ ಮಾತನ್ನು ಮೀರಿ ಈಗ ಸಂಧಾನದ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿಗಳು ತಿಳಿಸಿದಂತೆ ಮೊದಲು ಅವರು ಕರ್ತವ್ಯಕ್ಕೆ ಹಾಜರಾಗಲಿ ಎಂದು ಅವರು ತಿಳಿಸಿದ್ದಾರೆ.

Laxman Savadi 3

ಆದರೆ ಇದನ್ನು ತಿರುಚಿ ಮುಷ್ಕರ ನಿರತ ಸಾರಿಗೆ ನೌಕರರ ಮುಖಂಡರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಿರುವುದು ಸರಿಯಲ್ಲ. ಆದ್ದರಿಂದ ಇನ್ನೂ ಕಾಲ ಮಿಂಚಿಲ್ಲ. ಎಲ್ಲಾ ಸಾರಿಗೆ ನೌಕರ ಬಂಧುಗಳೂ ತಕ್ಷಣಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಲಕ್ಷ್ಮಣ ಸವದಿ ಮನವಿ ಮಾಡಿಕೊಂಡರು.

ಮುಷ್ಕರದ ಕಾಲವಲ್ಲ: ಪ್ರಸ್ತುತ ಇಡೀ ಮನುಕುಲವನ್ನೇ ಬೆಚ್ಚಿಬೀಳಿಸಿರುವ ಕೋವಿಡ್ 2ನೇ ಅಲೆಯ ತೀವ್ರ ಅಪಾಯದ ನಡುವೆಯೂ ನಮ್ಮ ಸಾರಿಗೆ ನೌಕರ ಮಿತ್ರರು ಸಾರಿಗೆ ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿರುವುದು ಸಾರ್ವಜನಿಕರ ಹಿತದೃಷ್ಟಿಯಿಂದಲೂ ಒಳ್ಳೆಯದಲ್ಲ ಮತ್ತು ನೌಕರರ ಹಿತದೃಷ್ಟಿಯಿಂದಲೂ ಸೂಕ್ತವಲ್ಲ.

 

ಕಳೆದ ವರ್ಷ ಕೋವಿಡ್ ಸಮಸ್ಯೆ ಉಲ್ಬಣವಾದಾಗ ನಮ್ಮ ಸಾರಿಗೆ ನೌಕರರೂ ಸಹ ಕೊರೊನಾ ವಾರಿಯರ್ಸ್ ಗಳಾಗಿ ಹಗಲಿರುಳೂ ಕೆಲಸ ಮಾಡಿದ್ದನ್ನು ಯಾರೂ ಮರೆತಿಲ್ಲ. ಸರ್ಕಾರವೂ ಈ ಸೇವೆಯನ್ನು ಗೌರವಿಸಿ ಸಾರಿಗೆ ನೌಕರರ ಸಂಕಷ್ಟಗಳಿಗೆ ಸ್ಪಂದಿಸಿತ್ತು. ಆದರೆ ಈಗ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತೆ ಅದೇ ರೀತಿ ಕೊರೋನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದ್ದರೂ ಮುಷ್ಕರದ ಕಾರಣದಿಂದ ಇದೇ ಸಾರಿಗೆ ನೌಕರರಿಗೆ ಕೆಟ್ಟ ಹೆಸರು ಬರುವಂತಾಗಿ ಅವರ ವರ್ಚಸ್ಸಿಗೆ ಧಕ್ಕೆ ಉಂಟಾಗಿದೆ. ಆದ್ದರಿಂದ ಯಾವುದೇ ಪಟ್ಟಭದ್ರ ಹಿತಾಸಕ್ತಿಗಳ ಕುತಂತ್ರಕ್ಕೆ ಬಲಿಯಾಗದೇ ಬಸ್ಸುಗಳ ಸುಗಮ ಸಂಚಾರಕ್ಕೆ ಕೈಜೊಡಿಸುವ ಮೂಲಕ ಮತ್ತೊಮ್ಮೆ ತಾವು ಸಾರ್ವಜನಿಕ ಸ್ನೇಹಿ ನೌಕರರು ಎಂಬುದನ್ನು ಸಾಬೀತುಪಡಿಸುವುದಕ್ಕೆ ಇದು ಸೂಕ್ತ ಸಂದರ್ಭವಾಗಿದೆ. ಆದ್ದರಿಂದ ಕೂಡಲೇ ಎಲ್ಲರೂ ಕರ್ತವ್ಯಕ್ಕೆ ಹಾಜರಾಗಿ ಸಾರ್ವಜನಿಕರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಬೇಕೆಂದು ನಾನು ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತಿದ್ದೇನೆ.

HBL BUS 1

ಕೋವಿಡ್ ಮಹಾಮಾರಿಯ ಪಿಡುಗಿನಿಂದ ಜನಜೀವನ ತತ್ತರಿಸಿ ಹೋಗುತ್ತಿರುವ ದೃಶ್ಯ ನಮ್ಮ ಕಣ್ಮುಂದೆಯೇ ಇದೆ. ಇಂಥ ವೈದ್ಯಕೀಯ ತುರ್ತಿನ ಸಂದರ್ಭದಲ್ಲಿ ಹೆಚ್ಚಾಗಿ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಸರ್ಕಾರಿ ಸಾರಿಗೆ ಸೇವೆಯ ಅಗತ್ಯ ತೀರಾ ಹೆಚ್ಚಾಗಿರುತ್ತದೆ. ಆದಾಗ್ಯೂ 13ನೆಯ ದಿನದವರೆಗೂ ಈ ಮುಷ್ಕರವನ್ನು ಮುಂದುವರೆಸಿರುವುದು ಎಷ್ಟರ ಮಟ್ಟಿಗೆ ಸರಿ?

ಈ ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ನಮ್ಮ ಸರ್ಕಾರ ಸಮರೋಪಾದಿಯಲ್ಲಿ ಶ್ರಮಿಸುತ್ತಿದೆ. ಸರ್ಕಾರದ ಈ ಪ್ರಯತ್ನಕ್ಕೆ ಅನೇಕ ಇಲಾಖೆಗಳ ಸಿಬ್ಬಂದಿಗಳು ಕೈಜೋಡಿಸಿ ಅನುಪಮ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ನಮ್ಮ ಸಾರಿಗೆ ನಿಗಮಗಳ ನೌಕರರು ಮಾತ್ರ ಇಂಥ ಸೂಕ್ಷ್ಮ ಮತ್ತು ಸಂದಿಗ್ಧ ಪರಿಸ್ಥಿತಿಯಲ್ಲೂ ಈ ರೀತಿ ಮುಷ್ಕರ ನಿರತರಾದರೆ ಅವರಿಗೆ ಇದು ದೊಡ್ಡ ಕಪ್ಪು ಚುಕ್ಕೆಯಾಗುತ್ತದೆ ಎಂಬುದನ್ನು ಮರೆಯಬಾರದು.

BMTC KSRTC STRIKE 2

ಈ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಇತರ ಸಚಿವ ಸಹೋದ್ಯೋಗಿಗಳೂ ಹಲವು ಬಾರಿ ಮುಷ್ಕರ ನಿರತರಿಗೆ ಮನವಿ ಮಾಡಿಕೊಂಡಿದ್ದರೂ ಸಹ ಅವರು ಮುಷ್ಕರ ನಡೆಸುತ್ತಿರುವುದು ತೀರಾ ಬೇಸರದ ಸಂಗತಿಯಾಗಿದೆ. ಅಷ್ಟೇ ಅಲ್ಲ, ಹಲವಾರು ನೌಕರ ಕುಟುಂಬದವರು ಮತ್ತು ಹಿರಿಯ ಕಾರ್ಮಿಕ ಮುಖಂಡರೂ ಸಹ ಈ ವಿಪತ್ತಿನ ಕಾಲದಲ್ಲಿ ಮುಷ್ಕರ ನಡೆಸುವುದು ಸರ್ವಥಾ ಸರಿಯಲ್ಲ ಎಂದು ಪ್ರತಿಪಾದಿಸಿದ್ದರೂ ಮೊಂಡುತನದ ಹಠಕ್ಕೆ ಬಿದ್ದು ಮುಷ್ಕರ ನಡೆಸುವುದು ಎಷ್ಟರಮಟ್ಟಿಗೆ ಸರಿ?

ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಲಾಗಿದ್ದು, ಇನ್ನುಳಿದ ಒಂದು ಬೇಡಿಕೆಯಾದ ವೇತನ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ. ಪ್ರಸ್ತುತ ಮೇ-04 ರವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ವೇತನ ಹೆಚ್ಚಳದ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಚುನಾವಣಾ ನೀತಿ ಸಂಹಿತೆಯು ಮುಗಿದ ನಂತರ ವೇತನ ಹೆಚ್ಚಳದ ಬಗ್ಗೆ ಕ್ರಮ ಕೈಗೊಳ್ಳಲಾಗುವುದೆಂದು ಮತ್ತೊಮ್ಮೆ ಸಾರಿಗೆ ನೌಕರ ಮಿತ್ರರಿಗೆ ತಿಳಿಸಬಯಸುತ್ತೇನೆ.

KSRTC BMTC 1

ಹಿಂಸಾಕೃತ್ಯಗಳಿಂದ ಬೇಡಿಕೆ ಈಡೇರುವುದಿಲ್ಲ:
ಪ್ರಸ್ತುತ ಸಹಸ್ರಾರು ಮಂದಿ ಸಾರಿಗೆ ನೌಕರರು ತಮ್ಮ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಇದರ ಫಲಶೃತಿಯಾಗಿ ಈಗ ಪ್ರತಿನಿತ್ಯವೂ ಸುಮಾರು 7 ಸಾವಿರ ಸರ್ಕಾರಿ ಬಸ್ಸುಗಳು ಸಂಚರಿಸುವಂತಾಗಿದೆ. ಸಾಕಷ್ಟು ಸಂಖ್ಯೆಯಲ್ಲಿ ಖಾಸಗಿ ವಾಹನಗಳೂ ಸಂಚಾರ ಸೇವೆಗೆ ಲಭ್ಯವಾಗಿ ಒಟ್ಟಾರೆ ಬಸ್ಸುಗಳ ಸಂಚಾರದ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಕೆಲವು ಮುಷ್ಕರ ನಿರತರ ಮುಖಂಡರು ಹತಾಶರಾಗಿ ಕರ್ತವ್ಯಕ್ಕೆ ಹಾಜರಾಗುತ್ತಿರುವ ನಿಷ್ಠಾವಂತ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಪ್ರಚೋದಿಸುತ್ತಿರುವುದು ಖಂಡನೀಯ.

BMTC 1 copy

ಈಗಾಗಲೇ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಮೀಪ ನಿಷ್ಠಾವಂತ ಚಾಲಕರಾಗಿದ್ದ ಅವಟಿ ಅವರು ಕರ್ತವ್ಯದಲ್ಲಿದ್ದಾಗ ಅವರ ಮೇಲೆ ಹಲ್ಲೆ ನಡೆಸಿ ಅವರ ಜೀವವನ್ನೇ ಬಲಿ ತೆಗೆದುಕೊಂಡಿದ್ದು ಅತ್ಯಂತ ಹೀನ ಘಟನೆಯಾಗಿದೆ. ಇದರಿಂದಾಗಿ ತೀವ್ರ ಸಂಕಷ್ಟಕ್ಕೀಡಾದ ಅವಟಿ ಅವರ ಕುಟುಂಬಸ್ಥರಿಗೆ ಈಗಾಗಲೇ 30 ಲಕ್ಷ ರೂಪಾಯಿ ಪರಿಹಾರ ನೀಡಿದ್ದಲ್ಲದೇ, ಅವರ ಕುಟುಂಬದ ಒಬ್ಬ ಸದಸ್ಯರಿಗೆ ಸೂಕ್ತ ಉದ್ಯೋಗವನ್ನು ನಮ್ಮ ಸಾರಿಗೆ ನಿಗಮದಲ್ಲೇ ಕಲ್ಪಿಸಲು ಸೂಚಿಸಿದ್ದೇನೆ.

BMTC KSRTC Bus STRIKE 6

ಈ ಮುಷ್ಕರದ ನೆಪದಲ್ಲಿ ಈಗಾಗಲೇ ಒಟ್ಟು 110ಕ್ಕೂ ಹೆಚ್ಚು ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿ ಸಾರಿಗೆ ನಿಗಮಗಳಿಗೆ ಅಪಾರ ಹಾನಿ ಉಂಟು ಮಾಡಲಾಗಿದೆ. ಇಂದು ಕೂಡ ಕೆ.ಎಸ್.ಆರ್.ಟಿ.ಸಿ.ಯ 3 ಬಸ್ಸುಗಳಿಗೆ ಕನಕಪುರ-ಹಾರೋಹಳ್ಳಿ ಮಾರ್ಗದಲ್ಲಿ ಕಲ್ಲು ಹೊಡೆದು, ಕರ್ತವ್ಯಕ್ಕೆ ಬರುತ್ತಿದ್ದ ಇಬ್ಬರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು ತೀವ್ರ ಖಂಡನೀಯವಾಗಿದೆ. ಈ ರೀತಿಯ ಗೂಂಡಾಗಿರಿಯನ್ನು ನಮ್ಮ ಸರ್ಕಾರ ಎಂದಿಗೂ ಸಹಿಸುವುದಿಲ್ಲ ಎಂಬುದನ್ನು ಈ ದುಷ್ಕರ್ಮಿಗಳು ಅರ್ಥಮಾಡಿಕೊಳ್ಳಬೇಕು. ಮುಷ್ಕರದ ನೆಪದಲ್ಲಿ ಕೆಲವರು ನೌಕರ ವರ್ಗದವರಲ್ಲಿ ಭಯಭೀತಿಯ ವಾತಾವರಣ ಸೃಷ್ಟಿಸಿ ಸರ್ಕಾರದ ವಿರುದ್ಧ ಹಾಗೂ ಕರ್ತವ್ಯ ನಿಷ್ಠೆ ಮೆರೆಯುತ್ತಿರುವ ನಮ್ಮ ಸಾರಿಗೆ ನೌಕರರ ವಿರುದ್ಧ ಪ್ರಚೋದಿಸುತ್ತಿದ್ದಾರೆ. ಈ ರೀತಿಯ ಕಾನೂನುಬಾಹಿರ ಕೃತ್ಯಗಳಿಗೆ ಮುಂದಾಗುವವರು ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಬಯಸುತ್ತೇನೆ. ಸಾರ್ವಜನಿಕರ ಅಮೂಲ್ಯ ಆಸ್ತಿಯಾಗಿರುವ ಈ ಬಸ್ಸುಗಳನ್ನು ಧ್ವಂಸಗೊಳಿಸಲು ಯಾರಿಗೂ ಹಕ್ಕಿಲ್ಲ. ಅಷ್ಟೆ ಅಲ್ಲದೆ ನಮ್ಮ ಸಾರಿಗೆ ನೌಕರರ ಮಕ್ಕಳು ಮತ್ತು ಕುಟುಂಬದವರನ್ನು ಬೀದಿಗೆ ತಂದು ಭಿಕ್ಷಾಟನೆಗೆ ತಳ್ಳಿದ್ದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಬೇಕು.

ksrtc bmtc bus strike 1

ಒಂದೆಡೆ ಮುಷ್ಕರ ನಿರತರು ಶಾಂತಿಯುತ ಹೋರಾಟ ನಡೆಸುತ್ತೇವೆ ಎಂದು ಹೇಳುತ್ತಲೇ ಮತ್ತೊಂದೆಡೆ ಸಹೋದ್ಯೋಗಿಗಳ ಮೇಲೆ ಹಲ್ಲೆ ನಡೆಸುವುದು ಹಾಗೂ ಬಸ್ಸುಗಳ ಮೇಲೆ ಕಲ್ಲು ತೂರಾಟಗಳಂತಹ ಹಿಂಸಾಕೃತ್ಯಗಳನ್ನು ನಡೆಸುವುದು ನಿಜಕ್ಕೂ ನಿಜಕ್ಕೂ ಜನವಿರೋಧಿ ಬೆಳವಣಿಗೆಯಾಗಿದೆ. ಈ ಸಂಬಂಧ ಈಗಾಗಲೇ ಹಲವು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿ ಕಠಿಣ ಕ್ರಮ ಜರುಗಿಸುತ್ತಿದ್ದಾರೆ.

ksrtc bmtc bus strike 3

ಪ್ರಸ್ತುತ ಸಾರಿಗೆ ವ್ಯವಸ್ಥೆಯಲ್ಲಿ ಸರ್ಕಾರ ಕೈಗೊಂಡಿರುವ ಪರ್ಯಾಯ ವ್ಯವಸ್ಥೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಹತಾಶಗೊಂಡಿರುವ ಕೆಲವು ಮುಷ್ಕರ ನಿರತರು ಸರ್ಕಾರದ ಪ್ರಾಮಾಣಿಕ ಸ್ಪಂದನೆಯ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ನಡೆಸುತ್ತಿದ್ದಾರೆ. ಕೆಲವು ಪಟ್ಟಭದ್ರರು ಸರ್ಕಾರದ ವಿರುದ್ಧ ನೌಕರರನ್ನು ಎತ್ತಿಕಟ್ಟಿ ನೌಕರರಿಗೇ ಗಂಡಾಂತರ ತಂದೊಡ್ಡಲು ಹವಣಿಸುತ್ತಿದ್ದಾರೆ. ಆದರೆ ಇವರ ದಾಳಕ್ಕೆ ಯಾರೂ ಬಲಿಯಾಗಬಾರದು ಎಂದು ನಾನು ಕಿವಿಮಾತು ಹೇಳಬಯಸುತ್ತೇನೆ.

ksrtc bmtc bus strike 4

ಸಾರಿಗೆ ನೌಕರರನ್ನೂ ಒಳಗೊಂಡಂತೆ ನಮ್ಮೆಲ್ಲರ ಮೇಲೂ ಕೋವಿಡ್ ತಡೆಗಟ್ಟುವ ಸಾಮಾಜಿಕ ಜವಾಬ್ದಾರಿಯಿದೆ. ಹೀಗಿರುವಾಗ ನಾವು ನಮ್ಮ ಕರ್ತವ್ಯಕ್ಕೆ ಚ್ಯುತಿ ತರಬಾರದು. ನಮ್ಮ ಸಾರಿಗೆ ನೌಕರರು ಮತ್ತೆ ಮೊದಲಿನಂತೆ ಉತ್ಸಾಹದಿಂದ ಕರ್ತವ್ಯಕ್ಕೆ ಮರಳಿ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿ ಈ ಸೂಕ್ಷ್ಮ ಸಂದರ್ಭದಲ್ಲಿ ಕೋವಿಡ್ ವಾರಿಯರ್ಸ್ ಎಂದು ಸಾರ್ವಜನಿಕರಿಂದ ಮತ್ತೊಮ್ಮೆ ಪ್ರಶಂಸೆಗೆ ಪಾತ್ರರಾಗ ಎಂದು ಸವದಿ ಅವರು ಹಾರೈಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ಕರಪತ್ರಕ್ಕೆ ಸಚಿವ ಬೊಮ್ಮಾಯಿ ಸ್ಪಷ್ಟೀಕರಣhttps://t.co/xkOgAQDBxL#KodihalliChandrashekhar #BasavarajBommai #KSRTC #KannadaNews @BSBommai @LaxmanSavadi @KSRTC_Journeys

— PublicTV (@publictvnews) April 19, 2021

TAGGED:BangaloreBMTCHome Minister Basavaraj BommaiKSR TCLaxman SavadiPublic TVTransport Employees Strikeಕೆಎಸ್‍ಆರ್‍ ಟಿಸಿಗೃಹ ಸಚಿವ ಬಸವರಾಜ್ ಬೊಮ್ಮಾಯಿಪಬ್ಲಿಕ್ ಟಿವಿಬಿಎಂಟಿಸಿಬೆಂಗಳೂರುಲಕ್ಷ್ಮಣ ಸವದಿಸಾರಿಗೆ ನೌಕರರ ಮುಷ್ಕರ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Sindhu Loknath
`ಅಪರಿಚಿತೆ’ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾದ ಸಿಂಧೂ ಲೋಕನಾಥ್
Cinema Latest Sandalwood Top Stories
Vikram Ravichandran
ಹುಟ್ಟು ಹಬ್ಬಕ್ಕೆ ಮುಧೋಳ್ ಚಿತ್ರದ ಅಪ್ಡೇಟ್‌ ಕೊಟ್ಟ ವಿಕ್ರಂ ರವಿಚಂದ್ರನ್
Cinema Latest Sandalwood
DARSHAN 5
ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ
Bengaluru City Cinema Karnataka Latest Main Post Sandalwood States
Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories

You Might Also Like

Vijayendra 4
Bengaluru City

ತುಂಗಭದ್ರಾ ಡ್ಯಾಮ್‌ನ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಿ: ವಿಜಯೇಂದ್ರ ಆಗ್ರಹ

Public TV
By Public TV
9 minutes ago
Army Jawan
Latest

Video Viral | ಯೋಧನನ್ನ ಕಂಬಕ್ಕೆ ಕಟ್ಟಿ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ; ನಾಲ್ವರು ಅರೆಸ್ಟ್‌

Public TV
By Public TV
17 minutes ago
Ashwath Narayan
Bengaluru City

ಧರ್ಮಸ್ಥಳ ಕೇಸ್ | ಅಪಪ್ರಚಾರಕರ ವಿರುದ್ಧ ಸ್ವಯಂಪ್ರೇರಿತ ಕೇಸ್ ಹಾಕಿ: ಅಶ್ವಥ್ ನಾರಾಯಣ್ ಆಗ್ರಹ

Public TV
By Public TV
26 minutes ago
BY Vijayendra
Bengaluru City

ಧರ್ಮಸ್ಥಳ ಕೇಸ್‌ | ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ ಬೀಳುವ ವಿಶ್ವಾಸ: ವಿಜಯೇಂದ್ರ

Public TV
By Public TV
31 minutes ago
CT Ravi 1
Bengaluru City

ಸಿಎಂ‌ ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಅಂದ್ರೆ ನಾನು ನಂಬಲ್ಲ: ಸಿ.ಟಿ ರವಿ

Public TV
By Public TV
57 minutes ago
Ramalinga Reddy 1
Bengaluru City

ಧರ್ಮಾಧಿಕಾರಿಗಳ ವಿರುದ್ಧ ಯಾರೂ ಇಲ್ಲ: ರಾಮಲಿಂಗಾರೆಡ್ಡಿ

Public TV
By Public TV
57 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?