– ರಾತ್ರಿ ದೇವಸ್ಥಾನದ ಬೀಗ ಒಡೆದು ಶಿವಲಿಂಗ ಕದ್ದರು
ಮಂಡ್ಯ: ದೇವಾಲಯದ ಬೀಗ ಒಡೆದು ಪುರಾತನ ಶಿವಲಿಂಗವನ್ನು ಕಳ್ಳತನ ಮಾಡಿರುವ ಘಟನೆ ತಾಲೂಕಿನ ಹಲ್ಲೇಗೆರೆ ಗ್ರಾಮದ ಕಾಶಿ ವಿಶ್ವನಾಥ ದೇವಾಲಯದಲ್ಲಿ ನಡೆದಿದೆ.
ಹಲ್ಲೇಗೆರೆ ಗ್ರಾಮದ ಹೊರ ಭಾಗದಲ್ಲಿ 400 ವರ್ಷಗಳ ಇತಿಹಾಸ ಹೊಂದಿರುವ ಪುರಾಣ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯವಿದೆ. ಕಾಶಿಯಿಂದ ತಂದು ಪ್ರತಿಷ್ಠಾಪಿಸಿದ್ದ ಶಿವಲಿಂಗವನ್ನು ಕಿಡಿಗೇಡಿಗಳು ಹೊತ್ತೋಯ್ದಿದ್ದಾರೆ. ರಾತ್ರಿ ದೇವಾಲಯದ ಬೀಗ ಒಡೆದು ಗರ್ಭ ಗುಡಿಯಲ್ಲಿದ್ದ ಶಿವಲಿಂಗವನ್ನು ಕದ್ದು ಪರಾರಿಯಾಗಿದ್ದಾರೆ.
ಬೆಳಗ್ಗೆ ಪೂಜೆ ಮಾಡಲೆಂದು ಅರ್ಚಕರು ದೇವಸ್ಥಾನಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ದಿನವೇ ಶಿವಲಿಂಗ ಕಳವು ಮಾಡಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.