Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಸಹಮತವಿದೆ: ಆರ್.ಅಶೋಕ್

Public TV
Last updated: June 30, 2021 2:06 pm
Public TV
Share
3 Min Read
R Ashok 2 1
SHARE

– 20 ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ
– ಸಿಎಂ ಬಿಎಸ್‍ವೈ ಬದಲಾವಣೆ ಪ್ರಶ್ನೆಯೇ ಇಲ್ಲ
– ಜುಲೈ 5ರ ಬಳಿಕ ಮತ್ತಷ್ಟು ಲಾಕ್‍ಡೌನ್ ಸಡಿಲಿಕೆ

ಹಾಸನ: ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ನಮ್ಮ ಸಹಮತವಿದೆ. ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಅವರ ಶ್ರಮ ಸಾಕಷ್ಟಿದೆ. ಈಗ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು, ಪಕ್ಷದಲ್ಲಿ ಸಮನ್ವಯತೆ ಇಲ್ಲ. ಪಕ್ಷದ ರೈಲು ಇನ್ನೂ ಟ್ರ್ಯಾಕ್ ಗೆ ಇಳಿದಿಲ್ಲ. ಕೇಂದ್ರದಲ್ಲೂ ಸಹ ಸಮರ್ಥ ವಿರೋಧ ಪಕ್ಷದ ನಾಯಕರು ಇಲ್ಲದೆ ತಬ್ಬಿಬ್ಬಾಗಿದೆ. ಇಂತಹ ಸ್ಥಿತಿಯಲ್ಲಿ ಕಾಂಗ್ರೆಸ್ ನಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಜಾತಿ ರಾಜಕೀಯದಲ್ಲಿ ತೊಡಗಿರುವ ಪಕ್ಷದಲ್ಲಿ ಸಂವಿಧಾನ ಬದಲಾವಣೆ ಮೂಲಕ ಜಾತಿಗೊಂದರಂತೆ ಸಿಎಂ ಕುರ್ಚಿಯನ್ನು ಸೃಷ್ಟಿ ಮಾಡಬೇಕು ಅಷ್ಟೇ. ಅದು ಸಹ ಕಷ್ಟ ಸಾಧ್ಯ ಆದ್ದರಿಂದ ಕಾಂಗ್ರೆಸ್ ರಾಜ್ಯದಲ್ಲಿ ಮುಂದಿನ 20 ವರ್ಷ ಅಧಿಕಾರಕ್ಕೆ ಬರುವುದು ಸುಳ್ಳು ಎಂದು ಭವಿಷ್ಯ ನುಡಿದರು.

Ramesh Jarkiholi 1

ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿದರು ಎಂದು ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರ ಜಗಳವನ್ನು ಪ್ರೇಕ್ಷಕರಾಗಿ ನೋಡುತ್ತಿದ್ದೇವೆ. ನಮ್ಮ ಬಿಜೆಪಿ ಸರ್ಕಾರದಿಂದ ಕೇವಲ ಅಭಿವೃದ್ಧಿಯ ಮಂತ್ರ ಜಪ ಮಾಡಲಾಗುತ್ತಿದ್ದು, ಕೊರೊನಾ ಹತೋಟಿ, ಲಸಿಕೆ ಕಾರ್ಯಕ್ರಮ ಯಶಸ್ಸಿಗೆ ಹಾಗೂ ಜನರ ಆರ್ಥಿಕ ಸುಧಾರಣೆಗೆ ಕೆಲಸ ಮಾಡುತ್ತಿದ್ದೇವೆ ಎಂದರು .

HDK SIddu

ಎರಡು ವರ್ಷ ಬಿಎಸ್‍ವೈ ಸಿಎಂ:
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿರುವ ಯಡಿಯೂರಪ್ಪ ಅವರು ಮುಂದಿನ ಮೂರನೇ ಅಲೆಯನ್ನು ಸಹ ಅವರ ನೇತೃತ್ವದಲ್ಲಿಯೇ ನಿರ್ವಹಣೆ ಮಾಡಲಾಗುವುದು ಹಾಗೂ 2 ವರ್ಷದವರೆಗೆ ಸಿಎಂ ಬದಲಾವಣೆ ಪ್ರಶ್ನೆ ಇಲ್ಲ ಎಂದು ಪುನರುಚ್ಚರಿಸಿದರು. ಮುಂದಿನ ಡಿಸೆಂಬರ್ ಒಳಗೆ ರಾಜ್ಯದ ಎಲ್ಲಾ ಜನರಿಗೆ 2 ಡೋಸ್ ಲಸಿಕೆ ಹಾಕಲು ತಯಾರಿ ಮಾಡುತ್ತಿದ್ದೇವೆ. ಕೊರೊನಾ ಮೂರನೇ ಅಲೆ ತಡೆಗಟ್ಟಲು ಪ್ರತ್ಯೇಕ ಟಾಸ್ಕ್ ಫೋರ್ಸ್ ರಚಿಸಲು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದು ಮುಂದಿನ ದಿನಗಳಲ್ಲಿ ಕಾರ್ಯಗತವಾಗಲಿದೆ ಎಂದು ಸ್ಪಷ್ಟಪಡಿಸಿದರು.

R Ashok CM BSY medium

ಜುಲೈ 5 ಬಳಿಕ ಲಾಕ್‍ಡೌನ್ ಇನ್ನಷ್ಟು ಸಡಿಲ:
ರಾಜ್ಯದಲ್ಲಿ ಜುಲೈ 5 ರಿಂದ ಇನ್ನಷ್ಟು ಲಾಕ್‍ಡೌನ್ ಸಡಿಲ ಮಾಡಲು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಈಗಾಗಲೇ ಜನರು ವ್ಯಾಪಾರ-ವಹಿವಾಟು ಇಲ್ಲದೆ ಸಂಕಷ್ಟದಲ್ಲಿರುವ ಕಾರಣ ಜುಲೈ ಐದರ ಮುಂಚಿತವಾಗಿಯೇ ಲಾಕ್‍ಡೌನ್ ಸಡಿಲಿಸುವ ಬಗ್ಗೆ ಮುನ್ಸೂಚನೆ ನೀಡಿದರು. ಇದನ್ನೂ ಓದಿ: ದೇಶದ ಪ್ರಗತಿ-ನೆಮ್ಮದಿಗಳೆರಡೂ ಆ ದೇಶದ ತೆರಿಗೆ ನೀತಿ ಹೇಗಿದೆ ಎಂಬುದರ ಮೇಲೆ ತೀರ್ಮಾನವಾಗುತ್ತೆ: ಸಿದ್ದರಾಮಯ್ಯ

vishwanath 3 medium

ಕರ್ನಾಟಕ ಕಾಂಗ್ರೆಸ್ ನಲ್ಲಿ ಬಂಡಾಯ ಏಳುವ ಸ್ಥಿತಿ ನಿರ್ಮಾಣವಾಗಿದೆ. ಹಲವು ಕಾಂಗ್ರೆಸ್ಸಿಗರು ಚುನಾವಣೆ ಒಂದು ವರ್ಷ ಇದ್ದಹಾಗೆ ಬಿಜೆಪಿಗೆ ಬರಲಿದ್ದಾರೆ ಎಂದ ಅವರು ಕಾಂಗ್ರೆಸ್ ಪಕ್ಷದಿಂದ 15 ಮಂದಿಯನ್ನು ನಾವು ಕರೆದುಕೊಂಡು ಬಂದಿದ್ದೇವೆ ಈ ಮೂಲಕ ನಮ್ಮ ಶಕ್ತಿಪ್ರದರ್ಶನ ಮಾಡಿದ್ದು ಅವರು ಬಿಜೆಪಿಯಿಂದ ಎಷ್ಟುಮಂದಿ ಕರೆದುಕೊಂಡು ಹೋಗುತ್ತಾರೆ ಕಾದು ನೋಡುವ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಕಾರ್ಮಿಕರ ಫುಡ್ ಕಿಟ್ ಅನ್ಯರಿಗೆ ಹಂಚಿಕೆ ಆರೋಪ: ಪ್ರಜ್ವಲ್ ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ

aravind Bellad 2 1 medium

ಹೆಚ್.ವಿಶ್ವನಾಥ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಕ್ಷದ ಬಗ್ಗೆ ಸರ್ಕಾರದ ಬಗ್ಗೆ ಮಾತನಾಡಬಾರದು ಎಂದು ರಾಜ್ಯಕ್ಕೆ ಭೇಟಿ ನೀಡಿದ ಉಸ್ತುವಾರಿ ಅರುಣ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಬಿಜೆಪಿ ವಿರುದ್ಧ ಮಾತನಾಡುವ ನಾಯಕರ ಬಗ್ಗೆ ವರದಿ ಕಳುಹಿಸಿಕೊಡಲು ಸಹ ಸೂಚನೆ ನೀಡಿದೆ. ಆದ್ದರಿಂದ ಯತ್ನಾಳ್, ಯೋಗೇಶ್ವರ್, ಬೆಲ್ಲದ್ ವಿಚಾರ ಮಾತನಾಡುತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಈ ಸರ್ಕಾರದಲ್ಲಿ ಅಕ್ಷರ, ಆರೋಗ್ಯ ಎರಡು ಕೆಟ್ಟು ಹೋಗುತ್ತಿದೆ – ವಿಶ್ವನಾಥ್ ವಾಗ್ದಾಳಿ

TAGGED:bjpBS YediyurappacongresshassanPublic TVr ashokUnlockಅನ್‌ಲಾಕ್‌ಆರ್‌.ಅಶೋಕ್‌ಕಾಂಗ್ರೆಸ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಹಾಸನ
Share This Article
Facebook Whatsapp Whatsapp Telegram

You Might Also Like

Kerala Snake rescues by women forest officers
Latest

ಕೇರಳ: 6 ನಿಮಿಷದಲ್ಲಿ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ

Public TV
By Public TV
7 minutes ago
big bulletin 07 July 2025 part 1
Big Bulletin

ಬಿಗ್‌ ಬುಲೆಟಿನ್‌ 07 July 2025 ಭಾಗ-1

Public TV
By Public TV
12 minutes ago
big bulletin 07 July 2025 part 2
Big Bulletin

ಬಿಗ್‌ ಬುಲೆಟಿನ್‌ 07 July 2025 ಭಾಗ-2

Public TV
By Public TV
17 minutes ago
big bulletin 07 July 2025 part 3
Big Bulletin

ಬಿಗ್‌ ಬುಲೆಟಿನ್‌ 07 July 2025 ಭಾಗ-3

Public TV
By Public TV
19 minutes ago
Raichuru Heart Attack Death
Crime

ಏಕಾಏಕಿ ಕಾಣಿಸಿಕೊಂಡ ಎದೆನೋವು – ಚಿಕಿತ್ಸೆ ಸಿಗದೆ ನರಳಾಡಿ ಪ್ರಾಣಬಿಟ್ಟ ವ್ಯಕ್ತಿ

Public TV
By Public TV
21 minutes ago
EGG
Bengaluru City

ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ ಆದೇಶ

Public TV
By Public TV
46 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?