ರಮೇಶ್ ಜಾರಕಿಹೊಳಿ, ಎಸ್‍ಐಟಿಗೆ ಹೈಕೋರ್ಟ್ ತುರ್ತು ನೋಟಿಸ್

Public TV
3 Min Read
HIGHCOURT

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಎಸ್‍ಐಟಿಗೆ ಹೈಕೋರ್ಟ್ ತುರ್ತು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗಲು ಸೂಚಿಸಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಎಸ್‍ಐಟಿ ತನಿಖೆಯನ್ನು ರದ್ದು ಮಾಡುವಂತೆ ಕೋರಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇವತ್ತು ಉಚ್ಛ ನ್ಯಾಯಾಲಯದಲ್ಲಿ ನಡೆಯಿತು.

ಎಸ್‍ಐಟಿಯ ಬದ್ಧತೆ ಮತ್ತು ತನಿಖೆಯ ವೈಖರಿಯನ್ನು ಪ್ರಶ್ನಿಸಿ ಸಂತ್ರಸ್ತ ಯುವತಿ ಅರ್ಜಿ ಸಲ್ಲಿಸಿದ್ದರು. ಎಸ್‍ಐಟಿ ಅತ್ಯಾಚಾರ ಕೇಸ್ ಮರೆಮಾಚಿ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡೋಕೆ ಹೊರಟಿದೆ. ಹೀಗಾಗಿಯೇ ಸದಾಶಿವನಗರದ ಕ್ರೈಂ ನಂ. 21 /2021 ನಮೂದಿಸಲಾಗಿದೆ ಎಂದು ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದರು. ಎಸ್‍ಐಟಿ ತನಿಖೆಯ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಎಸ್‍ಐಟಿ ತನಿಖೆ ರದ್ದು ಮಾಡಬೇಕು ಎಂದು ಯುವತಿ ಅರ್ಜಿ ಸಲ್ಲಿಸಿದ್ದರು. ಇಂದು ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಘನ ಉಚ್ಚ ನ್ಯಾಯಾಲಯ, ಎಸ್‍ಐಟಿಗೆ ಹಾಗೂ ರಮೇಶ್ ಜಾರಕಿಹೊಳಿಗೆ ತುರ್ತು ಹಾಜರಾಗಲು ನೋಟಿಸ್ ಗೆ ಆದೇಶಿಸಿದೆ.

ramesh jarkiholi 2 3

ಸಂತ್ರಸ್ತೆಯ ಅರ್ಜಿಯ ಮುಂದಿನ ವಿಚಾರಣೆ ಜೂನ್ 21ಕ್ಕೆ ನ್ಯಾಯಾಲಯ ಮುಂದೂಡಿದೆ. ಸಂತ್ರಸ್ತೆಯ ಪರ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ಸಂಕೇತ್ ಏಣಗಿ ವಾದ ಮಂಡಿಸಿದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಕೇಸ್‍ಗೆ ಟ್ವಿಸ್ಟ್ – ಸಮ್ಮತಿಯಿಂದಲೇ ನಡೆದಿತ್ತಾ ಇಬ್ಬರ ನಡುವೆ ಸೆಕ್ಸ್?

ಎಸ್‍ಐಟಿ ಮುಂದೆ ಹಾಜರಾದ ನರೇಶ್, ಶ್ರವಣ್: ಸಿಡಿ ಪ್ರಕರಣದಲ್ಲಿ ಶಂಕಿತ ಯುವಕರ ವಿಚಾರಣೆ ನಡೆಯುತ್ತಿದೆ. ಪೊಲೀಸರ ವಿಚಾರಣೆ ವೇಳೆ ಕೆಲ ಮಾಹಿತಿ ನೀಡಿರುವ ನರೇಶ್ ಮತ್ತು ಶ್ರವಣ್ ಎಸ್‍ಐಟಿಯ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಿಚಾರಣೆ ವೇಳೆ ಯುವತಿ ಮತ್ತು ಜಾರಕಿಹೊಳಿ ಬಗೆಗಿನ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಗೆ ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ನಾವೇ ಎಂದು ಶ್ರವಣ್ ಒಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

Naresh 1 medium

ವೀಡಿಯೋ ಜಾರಕಿಹೊಳಿ ಮೊಬೈಲ್ ನಲ್ಲಿ ಇದೆಯಾ?
ಸ್ಟಿಂಗ್ ಆದ ನಂತರ ಯುವತಿ ನನಗೆ ಕಾಲ್ ಮಾಡಿದ್ದು ನಿಜ. ಸ್ಟಿಂಗ್ ಕ್ಯಾಮೆರಾದಲ್ಲಿ ವೀಡಿಯೋ ಆಗುವ ಮೊದಲೆ ರಾಸಲೀಲೆ ವಿಡಿಯೋ ಆಗಿತ್ತಂತೆ. ಸದ್ಯ ವೈರಲ್ ವೀಡಿಯೋದಲ್ಲೂ ಜಾರಕಿಹೊಳಿ ಯುವತಿಗೆ ವಿಡಿಯೋ ಮಾಡುವಂತೆ ಹೇಳ್ತಾರೆ ಕೇಳಿ ಎಂದು ಎಸ್‍ಐಟಿಗೆ ಹೇಳಿದ್ದಾನೆ. ಆ ವೀಡಿಯೋ ಜಾರಕಿಹೊಳಿ ಮೊಬೈಲ್ ನಲ್ಲಿದೆ, ಬೇಕಿದ್ರೆ ಚೆಕ್ ಮಾಡಿ. ಯುವತಿಗೆ ಬಲವಂತವಾಗಿ ಮತ್ತು ಬೆದರಸಿ ಲೈಂಗಿಕ ಸಂಪರ್ಕ ಬೆಳಸಿದ್ದಾರೆ. ವೈರಲ್ ಆಗಿರೋ ವೀಡಿಯೋ ಬಿಟ್ಟು ಬೇರೆ ಯುವತಿಯರ ಜೊತೆಗಿರೋ ವಿಡಿಯೋ ಸಹ ಸಾಹುಕಾರ್ ಮೊಬೈಲ್ ನಲ್ಲಿದೆ. ಈ ವಿಚಾರವನ್ನು ಯುವತಿಯೇ ನಮಗೆ ಹೇಳಿದ್ದಾಳೆ. ಆಕೆಗೆ ಅವಾಚ್ಯವಾಗಿ ಬೈದು ಕಿರುಕುಳ ಕೊಡ್ತಿದ್ದಾಗಿ ಯುವತಿ ಹೇಳಿದ್ರಿಂದ ಸ್ಟಿಂಗ್ ಮಾಡೋಕೆ ಹೇಳಿದ್ದೀವಿ. ಆದ್ರೆ ವೀಡಿಯೋ ಆದ್ಮೇಲೆ ನಾವು ನೋಡಿಲ್ಲ. ಇದರ ರಾ ಫುಟೇಜ್ ಎಲ್ಲವೂ ಯುವತಿ ಮನೆಯಲ್ಲಿತ್ತು. ಯುವತಿ ಮನೆಗೂ ಜಾರಕಿಹೊಳಿ ಕಡೆಯವರು ಬಂದು ಹೋಗಿದ್ದಾರೆ ಎಂದು ಶ್ರವಣ್ ವಿಚಾರಣೆಯಲ್ಲಿ ಹೇಳಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಕೇಸಲ್ಲಿ ಕೋರ್ಟಿಗೆ 3 ಪ್ರತ್ಯೇಕ ವರದಿ 

Naresh medium

ಕೊಲೆ ಬೆದರಿಕೆ:
ವೀಡಿಯೋ ನಂತರ ಯುವತಿಗೆ ಅವರ ಮನೆಯವರಿಗೆ ತಿಳಿಸುವುದಾಗಿ ಹೇಳಲಾಗಿತ್ತು. ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿ ಎಂದು ತಿಳಿಸಲಾಗಿತ್ತು. ಆದ್ರೆ ಯುವತಿ ಹೆದರಿ ದೂರು ನೀಡಲು ಹಿಂದೇಟು ಹಾಕಿದರು. ಸಿಡಿ ವೈರಲ್ ಆದ ದಿನ ಕೂಡ ಯುವತಿಗೆ ಜಾರಕಿಹೊಳಿ ಕಡೆಯವರು ಕರೆ ಮಾಡಿ ಧಮ್ಕಿ ಹಾಕಿದ್ರು. ನಿನ್ನ ಹಾಗೂ ನಿನಗೆ ಸಪೋರ್ಟ್ ಮಾಡಿದವರನ್ನು ಕೊಲೆ ಮಾಡುವ ಬೆದರಿಕೆ ಹಾಕಿದ್ದರು ಎಂದು ಶ್ರವಣ್ ಹೇಳಿರುವ ಮಾಹಿತಿ ತಿಳಿದು ಬಂದಿದೆ. ಇದನ್ನೂ ಓದಿ: ಅತ್ಯಾಚಾರ ಪ್ರಕರಣದಿಂದ ಸಾಹುಕಾರ್ ಬಚಾವ್ ಆಗ್ತಾರಾ? ಒಪ್ಪಿತ ಸೆಕ್ಸ್ ಅಂತ ಬಿ ರಿಪೋರ್ಟ್ ಹಾಕ್ತಾರಾ?

Naresh Shravan Car 2 medium

ಜೀವ ಭಯದಿಂದ ನಾವೂ ಊರು ಬಿಡಬೇಕಾಯ್ತು. ಹೆಚ್ಚಾಗಿ ರೈಲು, ಬಸ್ ಪ್ರಯಾಣ ಮಾಡಿದ್ದೀವಿ. ಜಾರಕಿಹೊಳಿ ಪಿಎ ನಾಗರಾಜ್ ಅವರ ಬಿಎಸ್‍ಎನ್‍ಎಲ್ ನಂಬರ್ ನಿಂದ ಯುವತಿಗೆ ಕರೆ ಬರುತ್ತಿತ್ತು. ಇದೇ ನಾಗರಾಜ್ ಮೊದಲು ಜಾರಕಿಹೊಳಿ ಅಪಾರ್ಟ್ ರ್ಮೆಂಟ್ ಗೆ ಕರೆದೊಕೊಂಡು ಹೋಗಿದ್ದರು ಎಂದು ಶ್ರವಣ್ ಎಸಿಪಿ ಧರ್ಮೇಂದ್ರ ಮುಂದೆ ಹೇಳಿಕೆ ನೀಡಿದ್ದಾನೆ. ಇದನ್ನೂ ಓದಿ:ಸಿಡಿ ಕೇಸ್ – ಮಗಳನ್ನು ಹುಡುಕಿ ಕೊಡಿ ಎಂದು ತಂದೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥ

Share This Article
Leave a Comment

Leave a Reply

Your email address will not be published. Required fields are marked *