Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಮೇಶ್ ಜಾರಕಿಹೊಳಿ ‘ಸಿಹಿ ಸುದ್ದಿ’ ಬಗ್ಗೆ ರೇಣುಕಾಚಾರ್ಯ ಮಾತು

Public TV
Last updated: November 21, 2020 6:31 pm
Public TV
Share
3 Min Read
renukacharya 3
SHARE

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಿಂದ ವಾಪಾಸಾಗುತ್ತಿದ್ದಂತೆ ಶಾಸಕರಾದ ರೇಣುಕಾಚಾರ್ಯ ಹಾಗೂ ಮಹೇಶ್ ಕುಮಟಳ್ಳಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಭೇಟಿ ಬಳಿಕ ಮಾತನಾಡಿದ ಶಾಸಕ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಈಗಾಗಲೇ ದೆಹಲಿಯಲ್ಲಿ ಚರ್ಚೆ ಮಾಡಿ ಬಂದಿದ್ದಾರೆ. ಯಾಕೆ ವಿಳಂಬವಾಗುತ್ತಿದೆ ಎಂದು ಸಿಎಂ ಪ್ರಶ್ನಿಸುವಷ್ಟು ನಾನು ದೊಡ್ಡವನಲ್ಲ. ತಾಳ್ಮೆಯಿಂದ ಕಾಯುತ್ತೇನೆ, ಮನುಷ್ಯನಿಗೆ ತಾಳ್ಮೆ, ಸಂಯಮ ಬಹಳ ಮುಖ್ಯ. ಸಿಎಂ, ರಾಜ್ಯಾಧ್ಯಕ್ಷರ ನಿರ್ಧಾರಕ್ಕೆ ನಾನು ಬದ್ಧ ಎಂದು ತಿಳಿಸಿದರು.

ramesh jarkiholi

ರಮೇಶ್ ಜಾರಕಿಹೊಳಿಯವರನ್ನು ನೀರಾವರಿ ವಿಚಾರವಾಗಿ ಭೇಟಿ ಮಾಡಿದ್ದೆ. ಅವರು ನಮ್ಮ ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ. ರಮೇಶ್ ಜಾರಕಿಹೊಳಿ ಸಂತೋಷ್ ಅವರನ್ನ ಭೇಟಿ ಮಾಡಿದ್ದರಲ್ಲಿ ತಪ್ಪಿಲ್ಲ. ನಾನೂ ದೆಹಲಿಗೆ ಹೋದರೆ ಭೇಟಿ ಮಾಡಿ ಬರುತ್ತೇನೆ ಎಂದರು.

ಕೆಲವು ಸಚಿವರನ್ನು ಕೈ ಬಿಡಬೇಕೆಂಬ ವಿಚಾರದ ಕುರಿತು ಮಾತನಾಡಿದ ಅವರು, ಸಿಎಂ ಮತ್ತು ಅಧ್ಯಕ್ಷರಿಗೆ ಈ ಬಗ್ಗೆ ಹೇಳಿದ್ದೇನೆ. ಅಲ್ಲದೆ ನಾವು ಶಾಸಕರು ರೆಸಾರ್ಟ್ ನಲ್ಲಿ ಸಭೆ ಮಾಡಿಲ್ಲ. ಸಿಎಂ ಮತ್ತು ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ್ದೇವೆ. ನಮ್ಮ ಅಭಿಪ್ರಾಯಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿದ್ದೇವೆ ಎಂದರು.

nalin

ರಮೇಶ್ ಜಾರಕಿಹೊಳಿ ಮತ್ತೊಂದು ಪವರ್ ಸೆಂಟರ್ ಅಲ್ಲ. ಯಾಕೆ ಮಾಧ್ಯಮಗಳು ಅವರನ್ನು ಮತ್ತೊಂದು ಪವರ್ ಸೆಂಟರ್ ಎನ್ನುತ್ತೀರಿ. ವಿನಾಕಾರಣ ಪವರ್ ಸೆಂಟರ್ ಎನ್ನುವುದು ಸರಿಯಲ್ಲ. ಶಾಸಕರ್ಯಾರೂ ಸಚಿವಗಿರಿಗಾಗಿ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಪ್ರತ್ಯೇಕ ಸಭೆ ನಡೆಸಿಲ್ಲ. ರೆಸಾರ್ಟ್ ಗೆ ಹೋಗಿ ಸಭೆ ನಡೆಸಿಲ್ಲ, ಪಕ್ಷದ ಚೌಕಟ್ಟು ಮೀರಿ ವರ್ತಿಸಿಲ್ಲ. ನಾನು ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸೇರಿದ್ದಕ್ಕೆ ಸಚಿವರು ಬಹಿರಂಗ ವಾಗಿ ಆಕ್ಷೇಪ ವ್ಯಕ್ತಪಡಿಸಲಿ. ಆಗ ನಾನು ಸಹ ನನ್ನ ಸ್ಟೈಲ್ ನಲ್ಲೇ ಉತ್ತರ ಕೊಡುತ್ತೇನೆ ಎಂದು ಹೇಳಿದರು.

BJP SULLAI

ಸಚಿವ ಸ್ಥಾನ ಉಳಿಸಿಕೊಳ್ಳಲು ಕೆಲ ಸಚಿವರು ಪ್ರತ್ಯೇಕ ಸಭೆ ನಡೆಸಿರುವ ವಿಚಾರದ ಕುರಿತು ಮಾತನಾಡಿದ ಅವರು, ಪಕ್ಷದಲ್ಲಿ ಇರುವ ಎಲ್ಲ ಸಚಿವರು ನನ್ನ ಸ್ನೇಹಿತರು. ನಾನು ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಯಾರ ಬಗ್ಗೆಯೂ ನನಗೆ ದ್ವೇಷ ಇಲ್ಲ ಆದರೆ ಅಧ್ಯಕ್ಷರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಹೌದು ಎಂದಿದ್ದಾರೆ. ಈ ಮೂಲಕ ಪ್ರತ್ಯೇಕ ಸಭೆ ನಡೆಸಿದ್ದ ಸಚಿವರ ವಿರುದ್ಧ ರಾಜ್ಯಾಧ್ಯಕ್ಷರಿಗೆ ದೂರು ನೀಡಿದ್ದನ್ನು ಪರೋಕ್ಷವಾಗಿ ರೇಣುಕಾಚಾರ್ಯ ಸಮರ್ಥಿಸಿಕೊಂಡಿದ್ದಾರೆ.

ನಾನು ಯಾರ ಹೆಸರನ್ನೂ ಹೇಳಲ್ಲ, ಹೆಸರು ಹೇಳಿದರೆ ಅವರು ದೊಡ್ಡವರಾಗುತ್ತಾರೆ. ಅವರ ಹೆಸರು ಹೇಳಿ ನನ್ನ ವರ್ಚಸ್ಸು ಯಾಕೆ ಕಳೆದುಕೊಳ್ಳಲಿ ಎಂದು ಪ್ರತ್ಯೇಕ ಸಭೆ ನಡೆಸಿದ ಸಚಿವರ ಹೆಸರು ಹೇಳದೇ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.

jarkiholi meeting

ಶಾಸಕ ಮಹೇಶ್ ಕುಮಟಳ್ಳಿ ಮಾತನಾಡಿ, ನಾನು ಪ್ರತಿ ದಿನ ಊಟ, ತಿಂಡಿ ಜಾರಕಿಹೊಳಿಯವರ ಮನೆಯಲ್ಲೇ ಮಾಡುತ್ತೇನೆ. ಇಂದಿನ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ಅಥಣಿ ಕ್ಷೇತ್ರದ ನೀರಾವರಿ ವಿಚಾರಕ್ಕೆ ಇಂದು ಬಂದಿದ್ದೆ. ಸಚಿವ ಸ್ಥಾನಕ್ಕೆ ಯಾವುದೇ ಲಾಬಿ ಇಲ್ಲ. ಅವರ ಇಲಾಖೆಯ ಕೆಲಸಕ್ಕೆ ದೆಹಲಿಗೆ ಹೋಗಿದ್ದರು ಅಷ್ಟೇ. ನನಗೆ ಪಕ್ಷದವರು ಕೊಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಹುದ್ದೆಗಿಂತಲೂ ಪಕ್ಷ ಸಂಘಟನೆ ಮಹತ್ವವಾದದ್ದು. ಈಗ ನನಗೆ ಸ್ಲಂ ಬೋರ್ಡ್ ಕೊಟ್ಟಿದ್ದಾರೆ, ನಾನು ಸಂತೋಷವಾಗಿದ್ದೇನೆ ಎಂದರು.

ಆಸೆ, ಆಕಾಂಕ್ಷೆಗಳು ಬೇರೆ, ಜಾರಕಿಹೊಳಿಯವರು ಅವರ ಜೊತೆಗಿದ್ದವರಿಗೆ ನ್ಯಾಯ ಸಿಗಬೇಕು ಎಂದು ಮನವಿ ಮಾಡಿದ್ದಾರೆ. ನಮಗೆ ಅನ್ಯಾಯ ಎನ್ನುವಂತದಕ್ಕಿಂತ ಬಿಜೆಪಿ ವರಿಷ್ಠರು ಕೊಡುವ ಜವಾಬ್ದಾರಿಯನ್ನು ಹುಮ್ಮಸ್ಸಿನಿಂದ ನಿರ್ವಹಿಸುತ್ತೇನೆ. ಪಕ್ಷ ಸಂಘಟನೆಯಿಂದ ಹಿಡಿದು ಯಾವುದೇ ಕೆಲಸ ಕೊಟ್ಟರೂ ಮಾಡುತ್ತೇನೆ ಎಂದು ತಿಳಿಸಿದರು.

Mahesh Kumatalli 2

ಮೂರು ದಿನಗಳ ಕಾಲ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದ ಜಾರಕಿಹೊಳಿ ಇಂದು ಬೆಂಗಳೂರಿಗೆ ಮರಳಿದ್ದು, ಬೆಂಗಳೂರಿನ ನಿವಾಸಕ್ಕೆ ಆಗಮಿಸಿದ್ದಾರೆ.

TAGGED:bengaluruCabinet ExtensiondelhiMahesh KumatalliPublic TVRamesh jarakiholiRenukacharyaದೆಹಲಿಪಬ್ಲಿಕ್ ಟಿವಿಮಹೇಶ್ ಕುಮಟಳ್ಳಿರಮೇಶ್ ಜಾರಕಿಹೊಳಿರೇಣುಕಾಚಾರ್ಯಸಚಿವ ಸಂಪುಟ ವಿಸ್ತರಣೆ
Share This Article
Facebook Whatsapp Whatsapp Telegram

You Might Also Like

Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
13 minutes ago
Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
13 minutes ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
37 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
48 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
54 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?