‘ರಾಖಿ ಕಟ್ಟಿಸ್ಕೊಂಡು ರಕ್ಷಣೆ ಮಾಡೋದಾಗಿ ಮಾತು ಕೊಟ್ಟು ಬಾ’ – ಆರೋಪಿಗೆ 7 ಷರತ್ತು ವಿಧಿಸಿ ಜಾಮೀನು ಮಂಜೂರು

Public TV
2 Min Read
court

– ಲೈಂಗಿಕ ಹಲ್ಲೆಗೆ ಯತ್ನಿಸಿ ಜೈಲು ಸೇರಿದ್ದ ಆರೋಪಿ
– ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು

ಭೋಪಾಲ್: ದೂರು ಕೊಟ್ಟ ಮಹಿಳೆಯ ಮನೆಗೆ ಹೋಗಿ ರಾಖಿ ಕಟ್ಟಿಸಿಕೊಂಡು ಇನ್ನು ಮುಂದೆ ಸೋದರನಂತೆ ನೋಡಿಕೊಳ್ಳುವುದಾಗಿ ಮಾತುಕೊಟ್ಟು ಬರುವಂತೆ ಸೂಚಿಸಿ ಮಧ್ಯಪ್ರದೇಶ ಹೈಕೋರ್ಟ್ ಆರೋಪಿಗೆ ಷರತ್ತು ಬದ್ಧ ಜಾಮೀನು ನೀಡಿದೆ.

ಮಹಿಳೆ ಮೇಲೆ ಲೈಂಗಿಕ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಾಧೀಶ ರೋಹಿತ್ ಆರ್ಯ ಅವರಿದ್ದ ಏಕ ಸದಸ್ಯ ಪೀಠದಲ್ಲಿ ನಡೆದಿತ್ತು. ವಿಚಾರಣೆ ಪೂರ್ಣಗೊಳಿಸಿದ್ದ ಜಡ್ಜ್ 50 ಸಾವಿರ ರೂ. ವೈಯಕ್ತಿಕ ಬಾಂಡ್ ಮತ್ತು 7 ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ.

h4726ats raksha

ಷರತ್ತು ಏನು?
ಜಾಮೀನು ಪಡೆದ ಆರೋಪಿ ಪತ್ನಿಯೊಂದಿಗೆ ರಕ್ಷಾ ಬಂಧನದ ದಿನದಂದು ರಾಖಿ ಬ್ಯಾಂಡ್ ಜೊತೆಗೆ ಸ್ವೀಟ್ ತೆಗೆದುಕೊಂಡು ದೂರು ಕೊಟ್ಟ ಮಹಿಳೆಯ ಮನೆಗೆ ಭೇಟಿ ನೀಡಬೇಕು. ನಂತರ ಮಹಿಳೆಯ ಕೈಯಲ್ಲಿ ರಾಖಿ ಬ್ಯಾಂಡ್ ಕಟ್ಟಿಸಿಕೊಳ್ಳಬೇಕು. ಇನ್ಮುಂದೆ ಜೀವನ ಪೂರ್ತಿ ಮಹಿಳೆಯನ್ನು ಸಹೋದರನಂತೆ ರಕ್ಷಣೆಯಿಂದ ನೋಡಿಕೊಳ್ಳವುದಾಗಿ ಮಾತುಕೊಡಬೇಕು.

Madhya Pradesh High Court min

ಸಾಮಾನ್ಯವಾಗಿ ರಾಖಿ ಕಟ್ಟಿದ ಸಂದರ್ಭದಲ್ಲಿ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡಬೇಕು. ಹೀಗಾಗಿ ಮಹಿಳೆಗೆ 11 ಸಾವಿರ ಕೊಟ್ಟು ಆಶೀರ್ವಾದ ಕೇಳಬೇಕು. ಜೊತೆಗೆ ಬಟ್ಟೆ ಮತ್ತು ಸಿಹಿತಿಂಡಿಗಳನ್ನು ಖರೀದಿಸಲು 5,000 ರೂಪಾಯಿಯನ್ನು ಮಹಿಳೆಯ ಮಗನಿಗೆ ನೀಡಬೇಕು.

ಅಷ್ಟೇ ಅಲ್ಲದೇ ಆರೋಪಿ ಮಹಿಳೆಗೆ ಹೋಗಿ ರಾಖಿ ಕಟ್ಟಿದ್ದು, ಮಗನಿಗೆ ಹಣ ಕೊಟ್ಟಿರುವುದು ಮತ್ತು ರಶೀದಿಗಳ ಫೋಟೋವನ್ನು ಇಟ್ಟುಕೊಳ್ಳಬೇಕು. ಅದನ್ನು ವಕೀಲರ ಮೂಲಕ ಹೈ ಕೋರ್ಟ್ ಗೆ ಸಲ್ಲಿಸಬೇಕು. ಆರೋಪಿ ಆದೇಶಗಳ ನಿಯಮಗಳು ಮತ್ತು ಷರತ್ತುಗಳಿಗೆ ಬದ್ಧರಾಗಿರಬೇಕು. ಅಲ್ಲದೇ ಜಾಮೀನು ಪಡೆದವ ತನ್ನ ಸಂಪೂರ್ಣ ವಸತಿ ವಿವರಗಳನ್ನು ಲಿಖಿತ ರೂಪದಲ್ಲಿ ನೀಡಬೇಕು.

raksha bandhan

ಏನಿದು ಪ್ರಕರಣ?
ಆರೋಪಿ ಪಕ್ಕದ ಮನೆಯ ಮಹಿಳೆಯ ಮನೆಗೆ ನುಗ್ಗಿ ಆಕೆಯ ಮೇಲೆ ಲೈಂಗಿಕ ಹಲ್ಲೆಗೆ ಯತ್ನಿಸಿದ್ದ. ಉಜ್ಜೈನ್ ಜಿಲ್ಲೆಯ ಬತ್ಪಚಲನ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಆದ್ದರಿಂದ ಐಪಿಸಿ ಸೆಕ್ಷನ್ ಕಾಯ್ದೆಯ ಅಡಿಯಲ್ಲಿ ಆರೋಪಿಯನ್ನು ಜೂನ್‍ನಲ್ಲಿ ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿ ಬಳಿಕ ಆತ ಜೈಲು ಸೇರಿದ್ದ.

Share This Article
Leave a Comment

Leave a Reply

Your email address will not be published. Required fields are marked *