Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ರಾಜಕೀಯಕ್ಕೆ ನಾನು ಬರಲ್ಲ – ಸಂಘವನ್ನು ವಿಸರ್ಜಿಸಿದ ರಜನಿಕಾಂತ್

Public TV
Last updated: July 12, 2021 12:00 pm
Public TV
Share
1 Min Read
rajinikanth d
SHARE

ಚೆನ್ನೈ: ನಟ ರಜನಿಕಾಂತ್ ಚುನಾವಣೆಯಲ್ಲಿ ಸ್ಪರ್ಧಿಸಿ ರಾಜಕೀಯ ಬರುವ ಆಸೆಯನ್ನು ಕೈ ಬಿಟ್ಟಿದ್ದಾರೆ.

ರಾಜಕೀಯಕ್ಕೆ ಬರುವ ಆಸೆ ಇಲ್ಲ. ಭವಿಷ್ಯದಲ್ಲಿ ರಾಜಕೀಯ ಪ್ರವೇಶಿಸುವ ಯೋಜನೆ ನನ್ನಲ್ಲಿಲ್ಲ ಎಂದು ಹೇಳಿದ ಅವರು, ರಜನಿ ಮಕ್ಕಳ್ ಮಂದ್ರಂ(ಆರ್‌ಎಂಎಂ) ಸಂಘಟನೆಯನ್ನು ವಿಸರ್ಜಿಸುವುದಾಗಿ ಹೇಳಿದ್ದಾರೆ. ಈ ಸಂಘಟನೆಯನ್ನು ದತ್ತಿ ನಿಧಿ ಸಂಸ್ಥೆಯನ್ನಾಗಿ ಬಳಸಿಕೊಳ್ಳುವುದಾಗಿ ತಿಳಿಸಿದ್ದಾರೆ.

"I don't have plans to enter politics in future," says actor Rajinikanth, dissolves Rajini Makkal Mandram pic.twitter.com/updoKb5HnY

— ANI (@ANI) July 12, 2021

ರಜನಿಕಾಂತ್ ಈ ಹಿಂದೆ ರಾಜಕೀಯಕ್ಕೆ ಬರುವ ಹಿನ್ನೆಲೆಯಲ್ಲಿ ಆರ್‌ಎಂಎಂ ಸ್ಥಾಪಿಸಿದ್ದರು. ಆದರೆ ಈಗ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಬರುವ ಯೋಚನೆಯಿಂದ ಹಿಂದೆ ಸರಿದಿದ್ದಾರೆ.  ಇದನ್ನೂ ಓದಿ : ಬೆಂಗಳೂರಿಗೆ ಬಂದು ಅಣ್ಣನ ಆಶೀರ್ವಾದ ಪಡೆದ ರಜನಿಕಾಂತ್

2017ರಲ್ಲಿ ಸ್ವಂತ ಪಕ್ಷ ಕಟ್ಟಿ ರಾಜಕೀಯದಲ್ಲಿ ಬದಲಾವಣೆ ತರುವುದಾಗಿ ರಜನಿಕಾಂತ್ ತಿಳಿಸಿದ್ದರು. ಆದರೆ ನಂತರ ಈ ಬಗ್ಗೆ ಹೆಚ್ಚಿನ ವಿವರ ಸಿಕ್ಕಿರಲಿಲ್ಲ.

rajinikanth

ಲೋಕಸಭಾ ಚುನಾವಣೆ ವೇಳೆ ಸಹ ರಾಜಕೀಯದ ಕುರಿತು ತಮ್ಮ ನಿರ್ಧಾರ ಘೋಷಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ರಜನಿಕಾಂತ್ ಇನ್ನೂ ಸಮಯ ಬೇಕು ಎಂದಿದ್ದರು. ಇದೆಲ್ಲದರ ಮಧ್ಯೆ ಬಿಜೆಪಿ ಸೇರಲಿದ್ದಾರೆ ಎಂಬ ಅಂಶ ಸಹ ಚರ್ಚೆಗೆ ಬಂದಿತ್ತು. ಕಳೆದ ತಮಿಳುನಾಡುವ ಚುನಾವಣೆಯಲ್ಲಿ ರಜನಿಕಾಂತ್ ಪಕ್ಷದ ಮೂಲಕ ಸ್ಪರ್ಧಿಸಲಿದ್ದಾರೆ ಎಂದು ವರದಿಯೂ ಪ್ರಕಟವಾಗಿತ್ತು. ಈ ನಡುವೆ ಆರ್‌ಎಂಎಂ ಪಕ್ಷದ ಸದಸ್ಯರು ಬೇರೆ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಅಭಿಮಾನಿಗಳು ಸೇರ್ಪಡೆಯಾಗಿದ್ದಕ್ಕೆ ಬೇರೆ ಪಕ್ಷಕ್ಕೆ ಸೇರಿದ್ದರೂ ಅವರು ನಮ್ಮವರೇ ಎಂದು ರಜನಿಕಾಂತ್ ಹೇಳಿದ್ದರು.

TAGGED:kannada newsKollywoodpoliticsrajinikanthRMMಆರ್‌ಎಂಎಂಚುನಾವಣೆತಮಿಳುನಾಡುರಜನಿ ಮಕ್ಕಳ್ ಮಂದ್ರಂರಜನಿಕಾಂತ್
Share This Article
Facebook Whatsapp Whatsapp Telegram

You Might Also Like

Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
14 minutes ago
Cricket

`ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

Public TV
By Public TV
15 minutes ago
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
16 minutes ago
Samir Kumar Sinha plane crash
Latest

ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

Public TV
By Public TV
57 minutes ago
Crime

ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಮಂಗಳೂರಿಗೆ ಆಗಮಿಸಿದ ಎನ್‍ಐಎ ತಂಡ

Public TV
By Public TV
1 hour ago
Latest

NEET-UG 2025 ಫಲಿತಾಂಶ ಪ್ರಕಟ; ರಾಜಸ್ಥಾನದ ಅಭ್ಯರ್ಥಿ ಟಾಪರ್‌, ಕರ್ನಾಟಕದ ನಿಖಿಲ್‌ಗೆ 17ನೇ ರ‍್ಯಾಂಕ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?