Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕೀಯ ಉದ್ದೇಶಕ್ಕಾಗಿ ಸಿಬಿಐ ಬಳಸಿಕೊಂಡಿದ್ದನ್ನು ಕಾಂಗ್ರೆಸ್ ಒಪ್ಪಿಕೊಂಡಂತಾಗಿದೆ: ನಳಿನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಕೀಯ ಉದ್ದೇಶಕ್ಕಾಗಿ ಸಿಬಿಐ ಬಳಸಿಕೊಂಡಿದ್ದನ್ನು ಕಾಂಗ್ರೆಸ್ ಒಪ್ಪಿಕೊಂಡಂತಾಗಿದೆ: ನಳಿನ್

Bengaluru City

ರಾಜಕೀಯ ಉದ್ದೇಶಕ್ಕಾಗಿ ಸಿಬಿಐ ಬಳಸಿಕೊಂಡಿದ್ದನ್ನು ಕಾಂಗ್ರೆಸ್ ಒಪ್ಪಿಕೊಂಡಂತಾಗಿದೆ: ನಳಿನ್

Public TV
Last updated: October 5, 2020 2:37 pm
Public TV
Share
3 Min Read
nalin
SHARE

ಬೆಂಗಳೂರು: ಕಾಂಗ್ರೆಸ್ ಸಿಬಿಐ ಸಂಸ್ಥೆಯನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತಾಗಿದೆ ಎಂದು ಡಿಕೆಶಿ ವಿಚಾರವಾಗಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸಿಬಿಐ ಯಾವುದೇ ದಾಳಿ ಮಾಡುವ ಮೊದಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸುತ್ತದೆ. 70 ವರ್ಷ ಆಳಿದ ಕಾಂಗ್ರೆಸ್ಸಿಗೆ ಅದು ಗೊತ್ತಿಲ್ಲ ಎಂದರೆ ಇಷ್ಟು ವರ್ಷ ಸಿಬಿಐ ಅನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತೆ ಆಗಿದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಪ್ರತಿಭಟನೆಗೆ ಟಾಂಗ್ ನೀಡಿದ್ದಾರೆ.

ಸಿಬಿಐ ಯಾವುದೇ ದಾಳಿ ಮಾಡುವ ಮೊದಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸುತ್ತದೆ. 70 ವರ್ಷ ಆಳಿದ ಕಾಂಗ್ರೆಸ್ಸಿಗೆ ಅದು ಗೊತ್ತಿಲ್ಲ ಎಂದರೆ ಇಷ್ಟು ವರ್ಷ #CBI ಅನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತೆ ಆಗಿದೆ!!

— Nalinkumar Kateel (@nalinkateel) October 5, 2020

ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಮೇಲೆ ಈಡಿ, ಐಟಿ ಸ್ವಾಯತ್ತ ಸಂಸ್ಥೆಗಳು ಈಗಾಗಲೇ ತನಿಖೆ ಮಾಡುತ್ತಿದ್ದು, ಅದು ವಿವಿಧ ಹಂತಗಳಲ್ಲಿ ವಿಚಾರಣೆಯಲ್ಲಿದೆ. ಹೀಗಿರುವಾಗ ಸಿಬಿಐ ತನ್ನ ಕೆಲಸ ಮಾಡುತ್ತಿದ್ದು, ಅದಕ್ಕೆ ಸಹಕಾರ ನೀಡುವ ಬದಲು ಸಿಬಿಐ ಅಧಿಕಾರಿಗಳ ವಾಹನಗಳ ಮೇಲೆ ಬೆಂಬಲಿಗರನ್ನು ಬಿಟ್ಟು ದಾಳಿ ಮಾಡಿದ್ದು ಸರಿಯಾ ಎಂದು ಮತ್ತೊಂದು ಟ್ವೀಟ್‍ನಲ್ಲಿ ಅವರು ಪ್ರಶ್ನಿಸಿದ್ದಾರೆ.

ಡಿಕೆಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಮೇಲೆ ಈಡಿ, ಐಟಿ ಸ್ವಾಯತ್ತ ಸಂಸ್ಥೆಗಳು ಈಗಾಗಲೇ ತನಿಖೆ ಮಾಡುತ್ತಿದ್ದು, ಅದು ವಿವಿಧ ಹಂತಗಳಲ್ಲಿ ವಿಚಾರಣೆಯಲ್ಲಿದೆ.

ಹೀಗಿರುವಾಗ ಸಿಬಿಐ ತನ್ನ ಕೆಲಸ ಮಾಡುತ್ತಿದ್ದು, ಅದಕ್ಕೆ ಸಹಕಾರ ನೀಡುವ ಬದಲು ಸಿಬಿಐ ಅಧಿಕಾರಿಗಳ ವಾಹನಗಳ ಮೇಲೆ ಬೆಂಬಲಿಗರನ್ನು ಬಿಟ್ಟು ದಾಳಿ ಮಾಡಿದ್ದು ಸರಿಯಾ?

— Nalinkumar Kateel (@nalinkateel) October 5, 2020

ಮತ್ತೊಂದು ಟ್ವೀಟ್‍ನಲ್ಲಿ, ಇದಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿರುವುದು, ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆ ಎಂದು ಸಾಬೀತುಪಡಿಸಿದಂತೆ ಆಗಿದೆ. ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇದೆ ಎಂದು ತೋರಿಸಿದಂತೆ ಆಗಿದೆ ಎಂದು ಹರಿಹಾಯ್ದಿದ್ದಾರೆ.

ಇದಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿರುವುದು ಅವರು ಪರೋಕ್ಷವಾಗಿ @DKShivakumar ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆಯೆಂದು ಸಾಬೀತುಪಡಿಸಿದಂತೆ ಆಗಿದೆ.

ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇದೆಯೆಂದು ತೋರಿಸಿದಂತೆ ಆಗಿದೆ!

— Nalinkumar Kateel (@nalinkateel) October 5, 2020

ಇದಕ್ಕೂ ಮುಂಚೆ ಟ್ವೀಟ್ ಮೂಲಕವೇ ಟಾಂಗ್ ನೀಡಿದ್ದ ಪ್ರವಾಸೋದ್ಯಮ ಸಚಿವ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಭಂಡತನಕ್ಕೆ ಕೊನೆಯುಂಟೆ? ಮಾಡಿದ್ದುಣ್ಣೋ ಮಹಾರಾಯ. ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎಂದು ಹೇಳಿದ್ದರು.

ಭಂಡತನಕ್ಕೆ ಕೊನೆಯುಂಟೆ?
ಮಾಡಿದ್ದುಣ್ಣೋ ಮಹಾರಾಯ.

ವೇದ ಸುಳ್ಳಾದರೂ ಗಾದೆ ಸುಳ್ಳಾಗದು.

— C T Ravi ???????? ಸಿ ಟಿ ರವಿ (@CTRavi_BJP) October 5, 2020


ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಆಪ್ತರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ್ದು, ಶೋಧ ಕಾರ್ಯ ಚುರುಕುಗೊಳಿಸಿದೆ. ಇತ್ತ ಕಾಂಗ್ರೆಸ್ ಕಾರ್ಯಕರ್ತರು ರಾಜಕೀಯ ಪ್ರೇರಿತ ದಾಳಿಯಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೂ ಕೈ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಸಿಬಿಐ ದಾಳಿ ವೇಳೆ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಸಿಕ್ಕ 50 ಲಕ್ಷ ರೂ. ಹಣವನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಿ.ಟಿ ರವಿ ಅವರು ಹೆಸರು ಹೇಳದೇ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

vlcsnap 2020 10 05 12h50m16s163 e1601883018508

ಇಂಧನ ಇಲಾಖೆಯಲ್ಲಿರುವಾಗ ಡಿಕೆಶಿಯವರ ಒಟ್ಟು 60 ಕೋಟಿ ಅಕ್ರಮ ಹಣದ ವಹಿವಾಟಿನ ಬಗ್ಗೆ ಇಡಿ ಹಾಗೂ ಐಟಿ ಲೆಕ್ಕ ಹಾಕಿದೆ. ವಿದ್ಯುತ್ ಇಲಾಖೆಯಲ್ಲಿ ಏಜೆನ್ಸಿ ಮೂಲಕ ಭಾರೀ ಅಕ್ರಮ ಹಣ ವಹಿವಾಟಿನ ಆರೋಪ ಇದ್ದು, ಇದಕ್ಕೆ ಪೂರಕ ಸಾಕ್ಷಿಯನ್ನು ಇಡಿ ಹಾಗೂ ಐಟಿ ಇಲಾಖೆ ಕಲೆ ಹಾಕಿವೆ. ಅದರ ಆಧಾರದ ಮೇಲೆ ಇಂದು ಸಿಬಿಐ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.

TAGGED:bjpcbicongressCT RaviDK ShivakumarNalin Kumar KateelPublic TVಕಾಂಗ್ರೆಸ್ಡಿ.ಕೆ.ಶಿವಕುಮಾರ್ನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬಿಜೆಪಿಸಿ.ಟಿ ರವಿಸಿಬಿಐ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
13 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
14 minutes ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
15 minutes ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
16 minutes ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
36 minutes ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?