Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಜಿಎಫ್‍ನ 120 ವರ್ಷದ ಹಳೆಯ ಆಸ್ಪತ್ರೆ ಜೀರ್ಣೋದ್ಧಾರ, ಲೋಕಾರ್ಪಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಜಿಎಫ್‍ನ 120 ವರ್ಷದ ಹಳೆಯ ಆಸ್ಪತ್ರೆ ಜೀರ್ಣೋದ್ಧಾರ, ಲೋಕಾರ್ಪಣೆ

Bengaluru City

ಕೆಜಿಎಫ್‍ನ 120 ವರ್ಷದ ಹಳೆಯ ಆಸ್ಪತ್ರೆ ಜೀರ್ಣೋದ್ಧಾರ, ಲೋಕಾರ್ಪಣೆ

Public TV
Last updated: May 19, 2021 8:47 pm
Public TV
Share
2 Min Read
dcm joshi
SHARE

ಬೆಂಗಳೂರು: ಕೆಜಿಎಫ್‍ನ 120 ವರ್ಷದ ಹಳೆಯ ಬಿಜಿಎಂಎಲ್ ಆಸ್ಪತ್ರೆಯನ್ನು ಜೀರ್ಣೋದ್ಧಾರ ಮಾಡಲಾಗಿದ್ದು, ಇಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ಬಿಜೆಪಿ ಮತ್ತು ಆರ್‍ಎಸ್‍ಎಸ್ ಕಾರ್ಯಕರ್ತರ ಪರಿಶ್ರಮದಿಂದ ಕೆಜಿಎಫ್‍ನಲ್ಲಿ 120 ವರ್ಷಗಳ ಹಳೆಯ ಬಿಜಿಎಂಎಲ್ ಆಸ್ಪತ್ರೆಯನ್ನು ಜೀರ್ಣೋದ್ಧಾರ ಮಾಡಲಾಗಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೋಕಾರ್ಪಣೆ ಮಾಡಿದರು. ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

FotoJet 9 2

ಲಸಿಕೆ ಅಗತ್ಯವಿದೆ
ಕೇಂದ್ರ ಸರ್ಕಾರದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಕೊಡಿಸಬೇಕು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಮಾಡಿದರು.

ಒಂದೆಡೆ ಕೋವಿಡ್ ಸೋಂಕಿತರನ್ನು ಪತ್ತೆ ಮಾಡುತ್ತ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ವ್ಯಾಕ್ಸಿನೇಷನ್ ಕೂಡ ಸಾಗುತ್ತಿದೆ. ಎರಡನೇ ಅಲೆ ತೀವ್ರವಾಗಿರುವ ಈ ಸಂದರ್ಭದಲ್ಲಿ ಲಸಿಕೆ ಬಹಳ ಅಗತ್ಯವಾಗಿದೆ. ಲಸಿಕೆಯು ಜನರನ್ನು ಉಳಿಸಲಿದೆ ಮಾತ್ರವಲ್ಲದೆ, ಅವರ ಮನೋಸ್ಥೈರ್ಯವನ್ನೂ ಹೆಚ್ಚಿಸುತ್ತಿದೆ ಎಂದರು. ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಕೂಡಲೇ ಈ ಬಗ್ಗೆ ಸಂಬಂಧಟ್ಟ ಸಚಿವರು, ಅಧಿಕಾರಿಗಳ ಜೊತೆ ಮಾತನಾಡುವುದಾಗಿ ಭರವಸೆ ನೀಡಿದರು.

corona vaccine 1 medium

ಹೊಸದಾಗಿ 30 ಸಾವಿರ ಆಕ್ಸಿಜನ್ ಬೆಡ್
ಎರಡನೇ ಅಲೆ ತೀವ್ರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸದಾಗಿ 30 ಸಾವಿರ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿದೆ. ಈಗ ರಾಜ್ಯಾದ್ಯಂತ ಒಟ್ಟು 60 ಸಾವಿರ ಆಕ್ಸಿಜನ್ ಬೆಡ್‍ಗಳಿವೆ. ಗ್ರಾಮೀಣ ಮಟ್ಟದಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ ಸೇರಿ ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿರುವ ಆರೋಗ್ಯ ವ್ಯವಸ್ಥೆಯನ್ನು ಅತ್ಯುತ್ತಮಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಾ.ಅಶ್ವಥ್ ನಾರಾಯಣ್ ತಿಳಿಸಿದರು.

ಹಳ್ಳಿ ಪ್ರದೇಶದಲ್ಲಿ ಮೂಲಸೌಕರ್ಯ ಹೆಚ್ಚಿಸುವುದು ಹಾಗೂ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಇಡೀ ದೇಶದಲ್ಲೇ ಕರ್ನಾಟಕ ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವಂತೆ ಮಾಡುವ ಪ್ರಯತ್ನ ನಡೆದಿದೆ ಎಂದರು.

corona virus 1 1

ರೆಡ್ ಝೋನ್‍ನಲ್ಲಿ ಕೋಲಾರ
ಕೋವಿಡ್ ವಿಷಯದಲ್ಲಿ ಕೋಲಾರ ಜಿಲ್ಲೆ ಈಗ ರೆಡ್ ಝೋನ್‍ನಲ್ಲಿದೆ. ಸೋಂಕು ತಡೆಗೆ ಇನ್ನೂ ಹೆಚ್ಚಿನ ಕ್ರಮ ವಹಿಸಬೇಕಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕಿದೆ. ಸ್ಥಳೀಯ ಮಟ್ಟದಲ್ಲೇ ಟಾಸ್ಕ್‍ಪೋರ್ಸ್‍ಗಳನ್ನು ರಚನೆ ಮಾಡಿ ಮನೆಮನೆಗೂ ಹೋಗಿ ಸೋಂಕಿತರನ್ನು ಪತ್ತೆ ಮಾಡಬೇಕು. ಟೆಲಿ ಟ್ರಾಯಾಜಿಂಗ್ ಹಾಗೂ ಭೌತಿಕ ಟ್ರಾಯಾಜಿಂಗ್ ಹೆಚ್ಚಿಸಬೇಕು. ಮನೆ ಮನೆಯನ್ನೂ ಸಮೀಕ್ಷೆ ಮಾಡಬೇಕು ಎಂದು ಸಭೆಯಲ್ಲಿ ಹಾಜರಿದ್ದ ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಸೂಚಿಸಿದರು.

ಸೋಂಕಿತರ ಸಂಪರ್ಕಿತರನ್ನು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಪತ್ತೆ ಹಚ್ಚಲಾಗುತ್ತಿದೆ. ಆದರೆ ಕೋವಿಡ್ ಪರೀಕ್ಷೆ ರಿಸಲ್ಟ್ ಕೊಡಲು ಎರಡು ದಿನಕ್ಕೂ ಹೆಚ್ಚಿನ ಸಮಯ ಆಗುತ್ತಿದೆ. 24 ಗಂಟೆಯೊಳಗೆ ಅಥವಾ ಅದಕ್ಕೂ ಮುನ್ನವೇ ರಿಸಲ್ಟ್ ಕೊಡುವ ವ್ಯವಸ್ಥೆ ಮಾಡಿ. ಇನ್ನು ಮುಂದೆ ಗ್ರಾಮೀಣ ಪ್ರದೇಶದಲ್ಲಿ ಯಾರನ್ನೂ ಹೋಮ್ ಐಸೋಲೇಶನ್ ಮಾಡಬೇಡಿ. ಎಲ್ಲರನ್ನೂ ಕಡ್ಡಾಯವಾಗಿ ಕೋವಿಡ್ ಕೇರ್ ಗೆ ಶಿಫ್ಟ್ ಮಾಡಿ ಚಿಕಿತ್ಸೆ ಕೊಡಿ ಎಂದು ಜಿಲ್ಲಾಧಿಕಾರಿಗೆ ಡಿಸಿಎಂ ಸೂಚಿಸಿದರು.

WhatsApp Image 2021 05 19 at 8.05.27 PM e1621436444374

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೋಲಾರ ಸಂಸದ ಎಸ್.ಮುನಿಸ್ವಾಮಿ, ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಸೇರಿದಂತೆ ಮುಂತಾದವರು ಭಾಗಿಯಾಗಿದ್ದರು.

TAGGED:Ashwath NarayanCorona VaccineCorona Virusprahlad joshiPublic TVಅಶ್ವಥ್ ನಾರಾಯಣ್ಕೊರೊನಾ ವೈರಸ್ಕೊರೊನಾ ವ್ಯಾಕ್ಸಿನ್ಪಬ್ಲಿಕ್ ಟಿವಿಪ್ರಹ್ಲಾದ್ ಜೋಶಿ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Bus carrying Vinay Kulkarni to jail catches fire bengaluru CBI
Bengaluru City

ಜೈಲಿಗೆ ವಿನಯ್‌ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ

Public TV
By Public TV
2 hours ago
Bus carrying Vinay Kulkarni to jail catches fire bengaluru CBI
Bengaluru City

ಜೈಲಿಗೆ ವಿನಯ್‌ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ

Public TV
By Public TV
2 hours ago
big bulletin 15 april 2026 part 1
Big Bulletin

ಬಿಗ್‌ ಬುಲೆಟಿನ್‌ 15 April 2026 ಭಾಗ-1

Public TV
By Public TV
2 hours ago
big bulletin 15 april 2026 part 2
Big Bulletin

ಬಿಗ್‌ ಬುಲೆಟಿನ್‌ 15 April 2026 ಭಾಗ-2

Public TV
By Public TV
2 hours ago
Rasikh Salam Dar and Virat Kohli
Bengaluru City

75 ರನ್‌ಗಳಿಗೆ 8 ವಿಕೆಟ್‌ ಪತನ| ಆರ್‌ಸಿಬಿ ಬೌಲರ್‌ಗಳ ಮುಂದೆ ಲಕ್ನೋ ಪಲ್ಟಿ – ಮೊದಲ ಸ್ಥಾನಕ್ಕೆ ಜಿಗಿದ ಬೆಂಗಳೂರು

Public TV
By Public TV
2 hours ago
big bulletin 15 april 2026 part 3
Big Bulletin

ಬಿಗ್‌ ಬುಲೆಟಿನ್‌ 15 April 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?