ಬೆಂಗಳೂರು: ಕಪ್ಪು ಶಿಲೀಂದ್ರ (Black Fungus) ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಬೇರೆ ಬೇರೆ ರಾಜ್ಯಗಳಿಗೆ ಇಂದು ಒಟ್ಟು 1.21 ಲಕ್ಷ ವಯಲ್ಸ್ ಎಂಫೊಟೆರಿಸಿನ್-ಬಿ (Amphotericin-B) ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ 9750 ವಯಲ್ಸ್ ಒದಗಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಅವರು ತಿಳಿಸಿದ್ದಾರೆ.
ಸ್ವದೇಶಿಯವಾಗಿಯೂ ಈ ಚುಚ್ಚುಮದ್ದಿನ ಉತ್ಪಾದನೆ ಹೆಚ್ಚಾಗುತ್ತಿದೆ, ಅದೇ ರೀತಿ ಆಮದಿನ ಪ್ರಮಾಣವನ್ನು ಕೂಡಾ ಹೆಚ್ಚಿಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಇದರ ಬೇಡಿಕೆ ಮತ್ತು ಪೂರೈಕೆ ಮಧ್ಯೆ ಸಮತೋಲನ ಉಂಟಾಗಲಿದೆ. ಸದ್ಯಕ್ಕಂತೂ ಇದರ ಹಂಚಿಕೆ ನಿರಂತರವಾಗಿ ನಡೆಯಲಿದೆ ಎಂದರು.
- Advertisement 2
ಕಪ್ಪುಶಿಲೀಂದ್ರ ರೋಗದ ಚಿಕಿತ್ಸೆಗಾಗಿ ಕೇಂದ್ರವು ಇಂದು ವಿವಿಧ ರಾಜ್ಯಗಳಿಗೆ ಹೆಚ್ಚುವರಿಯಾಗಿ 1,21,000 ವಯಲ್ಸ್ #Amphotericin_B ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ 9750 ವಯಲ್ಸ್ ಒದಗಿಸಲಾಗಿದೆ.
ರಾಜ್ಯಕ್ಕೆ ಇದುವರೆಗೆ 22,460 ವಯಲ್ಸ್ #Amphotericin_B ಚುಚ್ಚುಮದ್ದು ದೊರೆತಂತಾಗಿದ್ದು ಇದರ ಹಂಚಿಕೆ ಪ್ರಕ್ರಿಯೆ ಮುಂದುವರಿಯಲಿದೆ https://t.co/HfiBTage7m
— Sadananda Gowda (@DVSadanandGowda) June 4, 2021
- Advertisement 3
ಸದ್ಯ ತೀವ್ರ ಬೇಡಿಕೆಯಲ್ಲಿರುವ ಆಮ್ಲಜನಕ ಸಾಂದ್ರಕವನ್ನು (ಆಕ್ಸಿಜನ್ ಕಾನ್ಸಂಟ್ರೇಟರ್ಸ್) ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ವರದಿಗಳು ಬರುತ್ತಿರುವ ಹಿನ್ನಲೆಯಲ್ಲಿ ನಾವು ಮಧ್ಯಪ್ರವೇಶ ಮಾಡಿದ್ದೇವೆ. ವಿತರಕರಿಗೆ ನೀಡುವ ಬೆಲೆಯ ಟ್ರೇಡ್ ಮಾರ್ಜಿನ್’ನಲ್ಲಿ ಪ್ರತಿಶತ 198 ರವರೆಗೂ ಏರಿಕೆಯಾದ ಬಗ್ಗೆ ವರದಿಯಾಗಿತ್ತು. ಅದನ್ನು ಈಗ ಶೇಕಡಾ 70ಕ್ಕೆ ಮಿತಿಗೊಳಿಸಲಾಗಿದೆ. ಮೂರು ದಿನದೊಳಗೆ ಗರಿಷ್ಠ ಮಾರಾಟ ಬೆಲೆ ಸೂಚಿಯನ್ನು ನೀಡುವಂತೆ ಆಮ್ಲಜನಕ ಸಾಂದ್ರಕ ಉತ್ಪಾದಕರು ಹಾಗೂ ಆಮದುದಾರರಿಗೆ ಸೂಚಿಸಲಾಗಿದೆ. ನಮ್ಮ ಇಲಾಖಾ ಅಧೀನದ ಎನ್.ಪಿ.ಪಿ.ಎ. (National Pharmaceuticals Pricing Authority) ವಾರದೊಳಗೆ ವಿವಿಧ ಬ್ರಾಂಡಿನ ಆಮ್ಲಜನಕ ಸಾಂದ್ರಕಗಳ ಪರಿಷ್ಕೃತ ಗರಿಷ್ಠ ಮಾರಾಟ ಬೆಲೆಗಳ ಅಧಿಸೂಚನೆ ಹೊರಡಿಸಲಿದೆ. ಇದುವರೆಗೆ ಆಮ್ಲಜನಕ ಸಾಂದ್ರಕ ಅತ್ಯವಶ್ಯಕ ವಸ್ತುಗಳ ಪಟ್ಟಿಯಲ್ಲಿ ಇರಲಿಲ್ಲ. ಹಾಗಾಗಿ ಅದರ ಬೆಲೆ ನಿಯಂತ್ರಣ ಸಾಧ್ಯವಿರಲಿಲ್ಲ. ಆದರೆ ಜನರ ಅನುಕೂಲಕ್ಕಾಗಿ ಡಿಪಿಸಿಒ-2013 ಕಾಯ್ದೆ ಅನುಚ್ಛೇಧ 19ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿ ಇದರ ಬೆಲೆ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸದ್ಯದ ಬೆಲೆ ನಿಯಂತ್ರಣ ಆದೇಶ 2021 ನವೆಂಬರ್ 30ರವರೆಗೆ ಜಾರಿಯಲ್ಲಿರಲಿದೆ. ಇದನ್ನೂ ಓದಿ: ವ್ಯಾಕ್ಸಿನ್ ಕೇಳಿದ್ದೇ ತಪ್ಪಾ, ಪೊಲೀಸರು ನೋಟೀಸ್ ಕೊಟ್ಟು ಕಿರುಕುಳ ನೀಡ್ತಿದ್ದಾರೆ: ವೆಂಕಟೇಶ್
- Advertisement 4
ಭವಿಷ್ಯದಲ್ಲಿ ಪರಿಸ್ಥಿಯನ್ನು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಒಂದೊಮ್ಮೆ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಯಾರಾದರೂ ಇದನ್ನು ಮಾರಾಟ ಮಾಡಲು ಯತ್ನಿಸಿದರೆ ಅಂತವರಿಗೆ ಶೇಕಡಾ 100ರಷ್ಟು ದಂಡ ವಿಧಿಸಲು ಅವಕಾಶವಿದೆ ಎಂದು ಅವರು ವಿವರಿಸಿದರು.