ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟಿವಿಟಿ ರೇಟ್ ಶೇ.0.94ಕ್ಕೆ ಇಳಿಕೆ ಕಂಡಿದೆ. ಇಂದು 1291 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 3,015 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 40 ಮಂದಿ ಸಾವನ್ನಪ್ಪಿದ್ದಾರೆ. ಕೊಪ್ಪಳದಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಒಟ್ಟು 37,527 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 28,85,238 ಮಂದಿಗೆ ಕೊರೊನಾ ಬಂದಿದೆ. 28,21,491 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಕೋವಿಡ್-19 ಮರಣ ಪ್ರಮಾಣ ಶೇ.3.09ರಷ್ಟಿದೆ. ಇಂದಿನವರೆಗೆ ರಾಜ್ಯದಲ್ಲಿ ಒಟ್ಟು 36,197 ಮಂದಿ ಮರಣ ಹೊಂದಿದ್ದಾರೆ.
ಇಂದು ರಾಜ್ಯದಲ್ಲಿ ಒಟ್ಟು 1,35,974 ಸ್ಯಾಂಪಲ್ (ಆರ್ಟಿ ಪಿಸಿಆರ್ 17,839 + 1,18,135 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು ಸಹಿತ ರಾಜ್ಯದಲ್ಲಿ ಒಟ್ಟು 11,428 ಮಂದಿಹೋಂಐಸೋಲೇಷನ್ ಬಗ್ಗೆ ಸರ್ಕಾರ ನಿಗಾವಹಿಸಿದೆ. ಬೆಂಗಳೂರಿನಲ್ಲಿ ಇಂದು 266 ಮಂದಿಗೆ ಕೊರೊನಾ ಸೋಂಕು ತಗುಲಿದೆ. 1,202 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ. 6 ಮಂದಿ ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 38, ಬೆಂಗಳೂರು ಗ್ರಾಮಾಂತರ 38, ಬೆಂಗಳೂರು ನಗರ 266, ಬೀದರ್ 1, ಚಾಮರಾಜನಗರ 27, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 100, ಚಿತ್ರದುರ್ಗ 14, ದಕ್ಷಿಣ ಕನ್ನಡ 126, ದಾವಣಗೆರೆ 8, ಧಾರವಾಡ 13, ಗದಗ 1, ಹಾಸನ 125, ಹಾವೇರಿ 1, ಕಲಬುರಗಿ 8, ಕೊಡಗು 60, ಕೋಲಾರ 25, ಕೊಪ್ಪಳ 0, ಮಂಡ್ಯ 42, ಮೈಸೂರು 125, ರಾಯಚೂರು 6, ರಾಮನಗರ 5, ಶಿವಮೊಗ್ಗ 51, ತುಮಕೂರು 70, ಉಡುಪಿ 85, ಉತ್ತರ ಕನ್ನಡ 38, ವಿಜಯಪುರ 7 ಮತ್ತು ಯಾದಗಿರಿಯಲ್ಲಿ 2 ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜುಲೈ 23ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯ ಮುನ್ಸೂಚನೆ