– 93 ಮಂದಿ ಕೊರೊನಾಗೆ ಬಲಿ
ಬೆಂಗಳೂರು: ರಾಜ್ಯದಲ್ಲಿ ಇಂದು 9,366 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 4,94,356ಕ್ಕೆ ಏರಿಕೆಯಾಗಿದೆ.
ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 93 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 7,629 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 7,268 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 4,94,356 ಸೋಂಕಿತರ ಪೈಕಿ 1,03,631 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 3,75,809 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 805 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ದೇಶದಲ್ಲೇ ಕೊರೊನಾ ಹಾಟ್ಸ್ಪಾಟ್ ಆಗ್ತಿದೆ ಬೆಂಗಳೂರು!
ಇಂದು 32,913 ಮಂದಿಯ ರ್ಯಾಪಿಡ್ ಟೆಸ್ಟ್ ನಲ್ಲಿ 39,117 ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು, ಒಟ್ಟು 72,030 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 14,04,764 ಮಂದಿಗೆ ರ್ಯಾಪಿಡ್ ಟೆಸ್ಟ್, 26,53,549 ಮಂದಿಗೆ ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 40,58,313 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು 3,799 ಮಂದಿಗೆ ಸೋಂಕು ದೃಢವಾಗಿದ್ದು, 34 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,84,082ಕ್ಕೆ ಏರಿಕೆ ಆಗಿದೆ. ಬಾಗಲಕೋಟೆ 234, ಬಳ್ಳಾರಿ 677, ಬೆಳಗಾವಿ 295, ದಕ್ಷಿಣ ಕನ್ನಡ 308, ದಾವಣಗೆರೆ 257, ಧಾರವಾಡ 247, ಹಾಸನ 206, ರಾಯಚೂರು 227, ಶಿವಮೊಗ್ಗ 218, ತುಮಕೂರು 381 ಮಂದಿಯಲ್ಲಿ ಇಂದು ಸೋಂಕು ಪತ್ತೆಯಾಗಿದೆ.
ಬಾಗಲಕೋಟೆ 671, ಬಳ್ಳಾರಿ 953, ಬೆಳಗಾವಿ 344, ಬೆಂಗಳೂರು ಗ್ರಾಮಾಂತರ 116, ಬೆಂಗಳೂರು ನಗರ 2,184, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 55, ಚಿಕ್ಕಮಗಳೂರು 0, ಚಿತ್ರದುರ್ಗ 0, ದಕ್ಷಿಣ ಕನ್ನಡ 398, ದಾವಣಗೆರೆ 0, ಧಾರವಾಡ 496, ಗದಗ 193, ಹಾಸನ 0, ಹಾವೇರಿ 0, ಕಲಬುರಗಿ 0, ಕೊಡಗು 0, ಕೋಲಾರ 54, ಕೊಪ್ಪಳ 0, ಮಂಡ್ಯ 0, ಮೈಸೂರು 667, ರಾಯಚೂರು 0, ರಾಮನಗರ 0, ಶಿವಮೊಗ್ಗ 0, ತುಮಕೂರು 0, ಉಡುಪಿ 864, ಉತ್ತರ ಕನ್ನಡ 51, ವಿಜಯಪುರ 74, ಯಾದಗಿರಿ 148 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಂದಿನ 17/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommaihttps://t.co/WM8rgzP5Zo pic.twitter.com/bgVOxZLsOj
— K'taka Health Dept (@DHFWKA) September 17, 2020