Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಇನ್ಮುಂದೆ ಬ್ಯಾಗ್‍ನಲ್ಲೇ ಸಿಗಲಿದೆ ಮರಳು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಇನ್ಮುಂದೆ ಬ್ಯಾಗ್‍ನಲ್ಲೇ ಸಿಗಲಿದೆ ಮರಳು!

Bengaluru City

ರಾಜ್ಯದಲ್ಲಿ ಇನ್ಮುಂದೆ ಬ್ಯಾಗ್‍ನಲ್ಲೇ ಸಿಗಲಿದೆ ಮರಳು!

Public TV
Last updated: June 30, 2021 10:53 pm
Public TV
Share
4 Min Read
murugesh nirani 3
SHARE

– 50 ಕೆ.ಜಿ.ಮರಳು ಬ್ಯಾಗ್ ಗಳಲ್ಲಿ ಲಭ್ಯ
– ಪ್ರಾಯೋಗಿಕವಾಗಿ 5 ಕಡೆ ಘಟಕ ಆರಂಭ

ಬೆಂಗಳೂರು: ದೇಶದಲ್ಲೇ ಪ್ರಥಮ ಬಾರಿಗೆ ಗ್ರಾಹಕರಿಗೆ ಸುಲಭವಾಗಿ ಸಿಗುವಂತೆ, ಬ್ಯಾಗ್ ಗಳಲ್ಲಿ ಮರಳು ಮಾರಾಟ ಮಾಡುವ ವಿನೂತನ ಯೋಜನೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆರಂಭಿಸಲಿದೆ. ಸರ್ಕಾರದ ವತಿಯಿಂದಲೇ ಕೈಗೆಟುಕುವ ದರದಲ್ಲಿ ಜನಸಾಮಾನ್ಯರಿಗೆ ಮರಳು ಸಿಗಲಿದ್ದು, ಇದರ ಪ್ರಸ್ತಾವನೆಯೂ ಸಿದ್ಧವಾಗಿದೆ.

SAND 3

ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಬುಧವಾರ ವಿಕಾಸಸೌಧದಲ್ಲಿ ಕಲ್ಲು ಗಣಿಗಾರಿಕೆ ಮರಳು ಕುರಿತು ಜಿಲ್ಲಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮದ್ಯವನ್ನು ಯಾವ ರೀತಿ ಕರ್ನಾಟಕ ರಾಜ್ಯ ಪಾನೀಯ ನಿಗಮದ ಮೂಲಕ ಮಾರಾಟ ಮಾಡುತ್ತಿದೆಯೋ, ಅದೇ ಮಾದರಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ತನ್ನದೇ ಸಂಸ್ಥೆಯ ಮೂಲಕ ಬ್ಯಾಗ್ ಗಳಲ್ಲಿ ಮರಳು ಮಾರಾಟ ಮಾಡಲು ಉದ್ದೇಶಿಸಿದೆ ಎಂದು ಪ್ರಕಟಿಸಿದರು.

ಮರಳು ಸಾಗಾಣಿಕೆ ಮಾಡುವ ವೇಳೆ ಕನಿಷ್ಠ ಶೇ.25ರಿಂದ 30ರಷ್ಟು ಮರಳು ಅನುಪಯುಕ್ತವಾಗುತ್ತಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ 50 ಕೆ.ಜಿ.ಯ ಬ್ಯಾಗ್, 1 ಟನ್ ಹಾಗೂ ಅದಕ್ಕಿಂತ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕರು ಮರಳನ್ನು ಖರೀದಿಸಬಹುದು. ಪ್ರಾಯೋಗಿಕವಾಗಿ ರಾಜ್ಯದ ಐದು ಕಡೆ ಈ ಘಟಕಗಳನ್ನು ಪ್ರಾರಂಭ ಮಾಡಲಾಗುವುದು. ಮರಳು ಮಾರಾಟ ಮಾಡಲು ಬ್ಯಾಗ್‍ಗಳನ್ನು ಸಿದ್ಧಪಡಿಸುವುದು, ಸಾಗಾಣಿಕೆ ಸೇರಿದಂತೆ ಎಲ್ಲ ರೀತಿಯ ತರಬೇತಿಯನ್ನು ಸಂಬಂಧಪಟ್ಟವರಿಗೆ ನೀಡಲಿದ್ದೇವೆ ಎಂದು ತಿಳಿಸಿದರು.

RCR SAND 8 768x422 copy

ಬ್ಯಾಗ್ ಮೂಲಕ ಮಾರಾಟ ಮಾಡುವಾಗ ಎ,ಬಿ ಮತ್ತು ಸಿ ಶ್ರೇಣಿ ಎಂದು ವರ್ಗೀಕರಣ ಮಾಡುತ್ತೇವೆ. ಮೊದಲು ಸ್ಟಾಕ್ ಯಾರ್ಡ್‍ಗಳಲ್ಲಿ ಪ್ರತ್ಯೇಕಗೊಳಿಸಿ ನಂತರ ಅದನ್ನು ಕೈಗೆಟಕುವ ದರದಲ್ಲಿ ವಿತರಣೆ ಮಾಡಲಿದ್ದೇವೆ ಎಂದು ತಿಳಿಸಿದರು.

ಮರಳುಗಾರಿಕೆಯನ್ನು ಕೇವಲ ಆರು ತಿಂಗಳು ಮಾತ್ರ ನಡೆಸಬಹುದು. ನದಿಗಳಲ್ಲಿ ನೀರು ಸಂಗ್ರಹಣೆಯಾದರೆ ಮರಳು ತೆಗೆಯಲು ಅವಕಾಶವಿರುವುದಿಲ್ಲ. ಬ್ಯಾಗ್‍ಗಳಲ್ಲಿ ಮರಳು ಸಂಗ್ರಹಿಸಿಟ್ಟುಕೊಂಡರೆ ವರ್ಷ ಪೂರ್ತಿ ಬಳಕೆ ಮಾಡಬಹುದು ಎಂದು ಸಲಹೆ ನೀಡಿದರು.

rcr sand mafia 2

ಬ್ಯಾಗ್‍ಗಳಲ್ಲಿ ಮರಳು ಸಂಗ್ರಹಣೆಯಾದರೆ ಸಾರ್ವಜನಿಕರಿಗೆ ಗುಣಮಟ್ಟದ ಮರಳು ಸಿಗಲಿದೆ. ತಮ್ಮ ವಾಹನಗಳಲ್ಲಿ ಎಲ್ಲಿಗೆ ಬೇಕಾದರೂ ಸುಲಭವಾಗಿ ಸಾಗಿಸಬಹುದು. ಇದರಿಂದ ಸಾಗಾಣಿಕೆ ವೆಚ್ಚವು ಕಡಿಮೆಯಾಗಲಿದೆ ಎಂದರು.

ವರ್ಷಪೂರ್ತಿ ಮರಳು ಸಿಗದ ಕಾರಣ ಮಾರುಕಟ್ಟೆಯಲ್ಲಿ ಮರಳಿನ ದರವು ದುಪ್ಪಟ್ಟಾಗುತ್ತಿತ್ತು. ಇದನ್ನು ತಪ್ಪಿಸಲು ಈ ಮಾರ್ಗೋಪಾಯ ಕಂಡುಕೊಳ್ಳಲಾಗಿದೆ. ಬ್ಯಾಗ್‍ಗಳಲ್ಲಿ ಮರಳನ್ನು ಸಂಗ್ರಹಿಸಿಟ್ಟರೆ ಯಾವಾಗ ಬೇಕಾದರೂ ವಿತರಣೆ ಮಾಡಬಹುದು. ಇದಕ್ಕೆ ದರ ಕಡಿಮೆ ಇರುತ್ತದೆ. ಕೇವಲ 50 ರೂ. ಖರ್ಚಾಗಬಹುದು. 5 ಲಕ್ಷಕ್ಕಿಂತ ಕಡಿಮೆ ದರದಲ್ಲಿ ಮನೆ ಕಟ್ಟಿಸಿಕೊಳ್ಳುವವರಿಗೆ ಯಾವುದೇ ರೀತಿಯ ರಾಜಧನ ಕಟ್ಟಿಸಿಕೊಳ್ಳುವುದಿಲ್ಲ. ಬಡವರು, ಬಡತನ ರೇಖೆಗಿಂತ ಕೆಳಗಿನವರು ಗ್ರಾಮ ಪಂಚಾಯತ್ ಮಟ್ಟದಲ್ಲಿ ಆಶ್ರಯ ಮನೆ ಕಲ್ಪಿಸಿಕೊಳ್ಳುವವರಿಗೆ ಉಚಿತ ಮರಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.

NML sand

ಬ್ಲಾಕ್‍ಗಳನ್ನು ಗುರುತಿಸಿ: ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಮತ್ತು ಅರಣ್ಯ ಉಪಸಂರಕ್ಷಣಾಧಿಕಾರಿಗಳ ಜತೆ ವೀಡಿಯೋ ಸಂವಾದ ನಡೆಸಿದ ಸಚಿವ ಮುರುಗೇಶ್ ನಿರಾಣಿ ಅವರು ತಕ್ಷಣವೇ ನದಿ ಪಾತ್ರಗಳಲ್ಲಿ ಒಂದು, ಎರಡು, ಮೂರನೆ ಶ್ರೇಣಿಯ ಮರಳು ಬ್ಲಾಕ್‍ಗಳನ್ನು ಗುರುತಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ಕೊಟ್ಟರು. ಕೆಎಸ್‍ಎಂಸಿಎಲ್, ಹೆಚ್‍ಜಿಎಂಎಲ್ ವತಿಯಿಂದ ನಾಲ್ಕು, ಐದು ಮತ್ತು ಆರನೆ ಶ್ರೇಣಿಯ ನದಿ ಪಾತ್ರಗಳಲ್ಲಿ ಮರಳು ಗಣಿಗಾರಿಕೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮರಳು ಬ್ಲಾಕ್‍ಗಳನ್ನು ಗುರುತಿಸಿ, ಅಧಿಸೂಚನೆ ಹೊರಡಿಸಿ, ಕಾರ್ಯಾದೇಶ ನೀಡಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಇದು ಏಕೆ ಸಾಧ್ಯವಾಗಿಲ್ಲ. ಕೂಡಲೇ ಬ್ಲಾಕ್ ಗುರುತಿಸುವ ಕಾರ್ಯ ಮಾಡಿ ಎಂದು ಸೂಚಿಸಿದರು.

ಡ್ರೋನ್ ಮೂಲಕ ಸಮೀಕ್ಷೆ ನಡೆಸಬೇಕು. ಹೊಸದಾಗಿ ಟೆಂಡರ್ ಕರೆಯುವುದು ಅಥವಾ ಮರು ಟೆಂಡರ್ ಕರೆದಾದರೂ ಬ್ಲಾಕ್‍ಗಳನ್ನು ಗುರುತಿಸಬೇಕು. ಸಬೂಬು ಹೇಳಬೇಡಿ ಎಂದು ನಿರಾಣಿ ತಾಕೀತು ಮಾಡಿದರು. ಈಗಾಗಲೇ ನೂತನ ಮರಳು ನೀತಿ ಸಿದ್ಧವಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿ ಅದಷ್ಟು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದೇವೆ. ಇದು ದೇಶಕ್ಕೆ ಮಾದರಿಯಾದ ನೀತಿ ಆಗಲಿದೆ ಎಂದು ಅಭಿಪ್ರಾಯಪಟ್ಟರು.

smg sand mafia 1

ಗಣಿಬಾಧಿತ ಜಿಲ್ಲೆಗಳಾದ ತುಮಕೂರು, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಜಿಲ್ಲಾ ಅದಿರು ನಿಧಿಯಿಂದ ದೊಡ್ಡ ಯೋಜನೆಗಳನ್ನು ರೂಪಿಸಲು ವಿಸ್ತೃತ ಯೋಜನ ವರದಿ(ಡಿಪಿಆರ್) ಸಿದ್ಧಪಡಿಸಲು ಸಚಿವ ನಿರಾಣಿ ಸೂಚಿಸಿದರು. ಈ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೇರಿದಂತೆ ಮತ್ತಿತರರ ಜೊತೆ ಪ್ರತ್ಯೇಕವಾಗಿ ವೀಡಿಯೋ ಸಂವಾದ ನಡೆಸಿದ ಅವರು, ಕೂಡಲೇ ಡಿಪಿಆರ್ ಸಿದ್ಧಪಡಿಸಲು ನಿದೇರ್ಶನ ನೀಡಿದರು. ಈ ಮೂರು ಜಿಲ್ಲೆಗಳಲ್ಲಿ ಡಿಎಂಎಫ್ ನಿಧಿಯಿಂದ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೈರ್ಮಲೀಕರಣ, ಸಮುದಾಯ ಭವನ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅವಕಾಶ ಇದೆ. ಡಿಎಂಎಫ್ ನಿಧಿ ಬಳಕೆ ಮಾಡಿಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಿಕೊಡಲಾಗುವುದು. ವಿಶೇಷವಾಗಿ ಚಿತ್ರದುರ್ಗ, ಬಳ್ಳಾರಿ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಜಾರಿ ಮಾಡುವ ಕುರಿತಾಗಿ ಡಿಪಿಆರ್ ಸಿದ್ಧಪಡಿಸಬೇಕೆಂದು ಹೇಳಿದರು. ಇದಕ್ಕೆ ಸಮ್ಮತಿಸಿದ ಮೂರು ಜಿಲ್ಲೆಗಳ ಅಧಿಕಾರಿಗಳು ಆದಷ್ಟು ಶೀಘ್ರ ಇಲಾಖೆಗೆ ವಿಸ್ತøತ ಯೋಜನಾ ವರದಿ ಸಿದ್ಧಪಡಿಸುವುದಾಗಿ ತಿಳಿಸಿದರು.

TAGGED:bengaluruMurugesh niraniPublic TVSandSand miningಪಬ್ಲಿಕ್ ಟಿವಿಬೆಂಗಳೂರುಮರಳುಮರಳುಗಾರಿಕೆಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
17 minutes ago
Horse Rider
Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
By Public TV
23 minutes ago
Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
1 hour ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
2 hours ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
2 hours ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?