ವಿಜಯಪುರ: ರಾಜ್ಯದಲ್ಲಿ ದಲಿತ ಸಿಎಂ ಆಗಲೇ ಬೇಕು. ನಾನೇ ಸಿಎಂ ಆಗಬೇಕೆಂದೇನಿಲ್ಲ. ಯಾರಾದರೂ ಒಬ್ಬರು ದಲಿತ ಸಿಎಂ ಆಗಲೇಬೇಕು ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಬ್ಬ ಶೇ.2-3ರಷ್ಟು ಇರೋರು ಸಿಎಂ ಆಗಿದ್ದಾರೆ. ಶೇ.23ರಷ್ಟು ಇರೋ ದಲಿತರು ಸಿಎಂ ಯಾಕೆ ಆಗಬಾರದು ಎಂದು ಪ್ರಶ್ನಿಸಿದರು.
- Advertisement 2
- Advertisement 3
ದಲಿತರು ಸಿಎಂ ಆಗಬೇಕು ಅನ್ನೋ ಆಸೆ ನನ್ನದು. ಒಂದಿಲ್ಲ ಒಂದು ದಿನ ದೇವರೇ ದಲಿತರನ್ನ ಸಿಎಂ ಮಾಡ್ತಾನೆ. ನೀವೆಲ್ಲ ಬೇಡ ಅಂದರೂ ದೇವರೇ ದಲಿತರನ್ನ ಸಿಎಂ ಮಾಡ್ತಾನೆ ಅಂತ ವಿಶ್ವಾಸ ವ್ಯಕ್ತಪಡಿಸಿದರು.
- Advertisement 4
ಇಧೆ ವೇಳೆ ಸಿಡಿ ಪ್ರಕರಣ ಸಂಬಂಧ ಮಾತನಾಡಿದ ಸಂಸದ, ನಾನು ಸಿಡಿ ನೋಡಿಲ್ಲ, ಸಿಡಿದು ಏನಿದೆ ಗೊತ್ತಿಲ್ಲ. ರಾಜ್ಯದಲ್ಲಿ ಸಿಡಿ ಬೆಳವಣಿಗೆ ತಪ್ಪು. ನಾನು ಮಾಡಿದರೂ ಅದು ತಪ್ಪು. ಯಾರು ಮಾಡಿದರೂ ಅದು ತಪ್ಪೇ ಎಂದು ಅವರು ತಿಳಿಸಿದರು.