Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‍ಗಳನ್ನು ಘೋಷಿಸುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ: ಜಗದೀಶ್ ಶೆಟ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‍ಗಳನ್ನು ಘೋಷಿಸುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ: ಜಗದೀಶ್ ಶೆಟ್ಟರ್

Bengaluru City

ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‍ಗಳನ್ನು ಘೋಷಿಸುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ: ಜಗದೀಶ್ ಶೆಟ್ಟರ್

Public TV
Last updated: June 17, 2021 4:50 pm
Public TV
Share
3 Min Read
shettar 2
SHARE

ಬೆಂಗಳೂರು: ದೇಶದ ಏರೋಸ್ಪೇಸ್ ಹಾಗೂ ರಕ್ಷಣಾ ಉತ್ಪನ್ನಗಳ ಕ್ಷೇತ್ರದಲ್ಲಿ ಮೂಂಚೂಣಿ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್ ಗಳನ್ನು ಘೋಷಿಸುವ ಮೂಲಕ ರಾಜ್ಯದ ಏರೋಸ್ಪೇಸ್ ಹಾಗೂ ರಕ್ಷಣಾ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡುವಂತೆ ಕೇಂದ್ರ ರಕ್ಷಣಾ ಖಾತೆ ಸಚಿವರಾದ ರಾಜನಾಥ್ ಸಿಂಗ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್ ರೌಂಡ್ ಟೇಬಲ್ ವೆಬಿನಾರ್ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶದಲ್ಲಿ ರಕ್ಷಣಾ ಹಾಗೂ ಏರೋಸ್ಪೇಸ್ ಗೆ ಸಂಬಂಧಿಸಿದಂತಹ ಕ್ಷೇತ್ರಗಳಿಗೆ ಹಲವಾರು ಯೋಜನೆಗಳ ಮೂಲಕ ಪ್ರೋತ್ಸಾಹ ನೀಡುತ್ತಿದೆ. ರಕ್ಷಣಾ ಉತ್ಪಾದನಾ ಕಾರಿಡಾರ್ ಯೋಜನೆಯ ಮೂಲಕ ಉತ್ತರ ಪ್ರದೇಶ ಹಾಗೂ ತಮಿಳುನಾಡುಗಳಲ್ಲಿ ಕ್ರಮವಾಗಿ 6 ಮತ್ತು 5 ನೋಡ್ ಗಳನ್ನು ಉತ್ತೇಜಿಸುವ ಕಾರ್ಯಕ್ಕೆ ಮುಂದಾಗಿದೆ. ಹೊಸ ರಕ್ಷಣಾ ಕಾರಿಡಾರ್ ಗಳನ್ನು ನಿರ್ಮಿಸುವುದರ ಜೊತೆಯಲ್ಲೇ, ಈಗಾಗಲೇ ಅಸ್ತಿತ್ವದಲ್ಲಿರುವ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಪರಿಸರವನ್ನು ಹೊಂದಿರುವ ಪ್ರದೇಶಗಳಿಗೂ ಉತ್ತೇಜನ ನೀಡಬೇಕು ಎಂಬುದು ನಮ್ಮ ಮನವಿಯಾಗಿದೆ.

ಕರ್ನಾಟಕ ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್ ನಿರ್ಮಾಣಕ್ಕೆ ಎಲ್ಲಾ ರೀತಿಯ ಅನುಕೂಲವಿದ್ದು ಉತ್ತಮ ಪರಿಸರವಿದೆ. ರಾಜ್ಯದಲ್ಲಿ ಅತ್ಯುತ್ತಮ ಸಂಶೋಧನೆ ಮತ್ತು ಅಭಿವೃದ್ದಿಯ ಕೇಂದ್ರಗಳು ಇವೆ. ಅಲ್ಲದೆ, ಹೆಚ್‍ಎಎಲ್, ಬಿಇಎಲ್ ನಂತಹ ಸಾರ್ವಜನಿಕ ಸ್ವಾಮ್ಯದ ಕಂಪನಿಗಳು ಮತ್ತು ಡಿಆರ್‍ಡಿಓದ ಪ್ರಯೋಗಾಲಯಗಳಾದ ಡಿಏಆರ್‍ಇ ಮತ್ತು ಎಡಿಇ ಗಳಿವೆ. ಏರ್ ಬಸ್, ಬೋಯಿಂಗ್, ಜಿಈ ಏವಿಯೇಷನ್ ನಂತಹ ಪ್ರಮುಖ ಕಂಪನಿಗಳು ರಾಜ್ಯದಲ್ಲಿವೆ. ಇದು ನಮ್ಮ ರಾಜ್ಯವನ್ನು ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವಂತೆ ಮಾಡಿದೆ ಎಂದು ಹೇಳಿದರು.

shettar 1 medium

ದೇಶದ ಶೇಕಡಾ 25 ಕ್ಕೂ ಹೆಚ್ಚು ಏರ್ ಕ್ರಾಫ್ಟ್ ಮತ್ತು ಸ್ಪೇಸ್ ಕ್ರಾಫ್ಟ್ ಕೈಗಾರಿಕೆಗಳು ರಾಜ್ಯದಲ್ಲಿವೆ. ರಕ್ಷಣಾ ಕ್ಷೇತ್ರಕ್ಕೆ ಅಗತ್ಯವಿರುವ ಶೇಕಡಾ 67 ರಷ್ಟು ಏರ್ ಕ್ರಾಫ್ಟ್ ಮತ್ತು ಹೆಲಿಕ್ಯಾಪ್ಟರ್ ಉತ್ಪಾದನೆ ರಾಜ್ಯದಲ್ಲಿ ನಡೆಯುತ್ತದೆ. ಅಲ್ಲದೆ, ಎಫ್‍ಡಿಐ ಇಂಟಲಿಜೆನ್ಸ್ ನ ವಿಶ್ವ ಏರೋಸ್ಪೇಸ್ ನಗರಗಳ ಸೂಚ್ಯಾಂಕದ ಮೊದಲ 10 ನೇ ಸ್ಥಾನದಲ್ಲಿ ಬೆಂಗಳೂರು ನಗರ ಸ್ಥಾನ ಪಡೆದುಕೊಂಡಿದೆ. ಹಾಗೆಯೇ, ಈ ಕ್ಷೇತ್ರಕ್ಕೆ ಬಿಡಿಭಾಗಗಳನ್ನು ಪೂರೈಸುವ 2000 ಕ್ಕೂ ಹೆಚ್ಚು ಎಂಎಸ್‍ಎಂಇ ಗಳಿವೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ದೇಶದಲ್ಲೇ ಮೊದಲು ಏರೋಸ್ಪೇಸ್ ಹಾಗೂ ಡಿಫೆನ್ಸ್ ಪಾಲಿಸಿಯನ್ನು ಜಾರಿಗೊಳಿಸಿದ ರಾಜ್ಯ ನಮ್ಮದಾಗಿದೆ ಎಂದರು. ಬೆಂಗಳೂರು, ಮೈಸೂರು, ತುಮಕೂರು ಮತ್ತು ಚಾಮರಾಜನಗರ ಈ ನಾಲ್ಕೂ ನೋಡ್/ಹಬ್ ಗಳು ಏರೋಸ್ಪೇಸ್ ಮತ್ತು ಡಿಫೆನ್ಸ್ ಎಕೋಸಿಸ್ಟಮ್ ಗೆ ಈಗಾಗಲೇ ಸಿದ್ಧವಿರುವ ಮೂಲಭೂತ ಸೌಕರ್ಯಗಳನ್ನು ಹೊಂದಿವೆ. ಮುಂದಿನ ದಿನಗಳಲ್ಲೂ ಕರ್ನಾಟಕ ರಾಜ್ಯ ದೇಶದ ಏರೋಸ್ಪೇಸ್ ಮತ್ತು ಡೀಫೆನ್ಸ್ ಉತ್ಪಾದನಾ ಕ್ಷೇತ್ರದಲ್ಲಿ ಸ್ಥಳೀಯವಾಗಿ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಲಿದೆ ಎಂದರು.

ರಾಜ್ಯದಲ್ಲಿ ಘೋಷಣೆ ಆಗುವ ರಕ್ಷಣಾ ತಂತ್ರಜ್ಞಾನ ಹಬ್, ದೇಶದ ಡಿಫೆನ್ಸ್ ಆಫ್‍ಸೆಟ್ ಪಾಲಿಸಿ ಅಡಿಯಲ್ಲಿ ಡಿಫೆನ್ಸ್ ಕಾರಿಡಾರ್ ನ ವರ್ಧಿತ ಗುಣಕಗಳು (enhanced multipliers) ಹಾಗೂ ರಕ್ಷಣಾ ವೇದಿಕೆ ಮತ್ತು ಉತ್ಪನ್ನಗಳ ಪರೀಕ್ಷೆ ಮತ್ತು ಪ್ರಮಾಣ ಪತ್ರ ಮತ್ತಿತರ ವಿಶೇಷ ಸೌಲಭ್ಯಗಳಿಂದ ರಾಜ್ಯದಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದ ಬೆಳವಣಿಗೆಗೆ ಮತ್ತಷ್ಟು ಪುಷ್ಟಿ ನೀಡುತ್ತದೆ. ಅಲ್ಲದೆ, ಆತ್ಮನಿರ್ಭರ ಭಾರತ ಗುರಿಗೆ ಮತ್ತಷ್ಟು ಬಲ ತುಂಬಲಿದೆ. ಈ ಹೊಸ ಉಪಕ್ರಮಗಳಿಂದ ನಮ್ಮ ರಾಜ್ಯದ ವೈಜ್ಞಾನಿಕ ನಾಯಕತ್ವ ಹಾಗೂ ಈ ಕ್ಷೇತ್ರಕ್ಕೆ ನಮ್ಮ ರಾಜ್ಯದಿಂದ ನೀಡಿರುವ ಸಂಶೋಧನೆ ಮತ್ತು ಅಭಿವೃದ್ದಿಯ ಕೊಡುಗೆಗೆ ಸ್ವೀಕೃತಿ ನೀಡಿದಂತಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದೇವೆ ಎಂದು ಹೇಳಿದರು.

ಕೈಗಾರಿಕಾ ಅಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ ಮಾತನಾಡಿ, ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2021-2026 ರ ಕರಡು ಅಂಶಗಳನ್ನು ವಿವರಿಸಿದರು. ರಾಜ್ಯವನ್ನು ಏರೋಸ್ಪೇಸ್ ಮತ್ತು ಡಿಫೆನ್ಸ್ ಕೈಗಾರಿಕಾ ಕ್ಷೇತ್ರದ ಪ್ರಮುಖ ಬಂಡವಾಳ ಹೂಡಿಕೆಯ ರಾಜ್ಯವನ್ನಾಗಿಸುವುದು ಪ್ರಮುಖ ಗುರಿಯಾಗಿದೆ. ರಾಜ್ಯದಲ್ಲಿ ರಕ್ಷಣಾ ಹಬ್ ಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಲ್ಲದೆ, ಬಂಡವಾಳ ಹೂಡಿಕೆಗೆ ಆಕರ್ಷಕವಾದ ಸೌಲಭ್ಯಗಳನ್ನು ಈ ನೀತಿ ಒಳಗೊಂಡಿರಲಿದೆ ಎಂದು ಹೇಳಿದರು. ಇದನ್ನೂ ಓದಿ: ತುರ್ತು ಅಂಬುಲೆನ್ಸ್ ಸೇವೆಗೆ ಸಚಿವ ಜಗದೀಶ್ ಶೆಟ್ಟರ್ ಚಾಲನೆ

ವೆಬಿನಾರ್ ನಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜಕುಮಾರ್ ಖತ್ರಿ, ಕೈಗಾರಿಕಾ ಇಲಾಖೆಯ ತಾಂತ್ರಿಕ ನಿರ್ದೇಶಕರಾದ ರಮೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕರಾದ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಕೈಗಾರಿಕೋದ್ಯಮಿಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: ರಾಯಚೂರಿನಲ್ಲಿ ಬೃಹತ್ ಔಷಧ ಉತ್ಪಾದನ ಪಾರ್ಕ್: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್

TAGGED:AerospaceDefense Round Table WebinarJagadish ShetterPublic TVrajnath singhಏರೋಸ್ಪೇಸ್ಜಗದೀಶ್ ಶೆಟ್ಟರ್ಡಿಫೆನ್ಸ್ ರೌಂಡ್ ಟೇಬಲ್ ವೆಬಿನಾರ್ಪಬ್ಲಿಕ್ ಟಿವಿರಾಜನಾಥ್ ಸಿಂಗ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
2 minutes ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
2 minutes ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?