Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲೇ ಪ್ರಥಮ ಮಾಗಡಿ ಆಸ್ಪತ್ರೆಯಲ್ಲಿ ಮಾಡ್ಯೂಲರ್ ಐಸಿಯು ಲೋಕಾರ್ಪಣೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದಲ್ಲೇ ಪ್ರಥಮ ಮಾಗಡಿ ಆಸ್ಪತ್ರೆಯಲ್ಲಿ ಮಾಡ್ಯೂಲರ್ ಐಸಿಯು ಲೋಕಾರ್ಪಣೆ

Public TV
Last updated: May 27, 2021 7:53 pm
Public TV
Share
3 Min Read
FotoJet 2 51
SHARE

– ತಾಲೂಕಿನ ಎಲ್ಲ ಆರೋಗ್ಯ ಕೇಂದ್ರಗಳಲ್ಲೂ ಆಕ್ಸಿಜನ್ ಘಟಕ
– ಕೊರತೆ ಸಿಬ್ಬಂದಿ ತಕ್ಕಣವೇ ನೇಮಕ
– ಎರಡು ತಿಂಗಳಲ್ಲೇ ಮಾಗಡಿ ಆಸ್ಪತ್ರೆಗೆ ಆಕ್ಸಿಜನ್ ಘಟಕ

ಬೆಂಗಳೂರು: ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ತಾಲೂಕು ಆಸ್ಪತ್ರೆಯೊಂದರ ಆವರಣದಲ್ಲಿ ಸ್ಥಾಪನೆ ಮಾಡಲಾಗಿರುವ ಅತ್ಯಾಧುನಿಕ ಮಾಡ್ಯೂಲರ್ ಐಸಿಯು ಅನ್ನು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಗುರುವಾರ ಲೋಕಾರ್ಪಣೆ ಮಾಡಿದರು.

ಕೋವಿಡ್ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಅನುಕೂಲವಾಗುವ ಈ ಮಾಡ್ಯೂಲರ್ ಐಸಿಯು ಅನ್ನು ಆ್ಯಕ್ಟ್ ಗ್ರಾಂಟ್ ಮತ್ತು ರೆನಾಕ್ ಸಂಸ್ಥೆ ಅಭಿವೃದ್ಧಿಪಡಿಸಿದ್ದು, ಈ ರೀತಿಯ ಐಸಿಯುಗಳನ್ನು ಈಗಾಗಲೇ ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಬಳಕೆ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಅಶ್ವತ್ಥನಾರಾಯಣ ಅವರು, “ಎಸಿಟಿ (ಆಕ್ಷನ್ ಕೋವಿಡ್ ಟೀಂ) ಗ್ರಾಂಟ್ಸ್ ಈ ಮಾಡ್ಯೂಲರ್ ಐಸಿಯು ಅನ್ನು ಮಾಗಡಿ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದೆ. ಅದಕ್ಕೆ ಅಗತ್ಯವಾದ ಮಾನಿಟರ್‍ಗಳನ್ನು ಬಿಡದಿಯ ಟೊಯೊಟ ಕಿರ್ಲೋಸ್ಕರ್ ಕಂಪನಿ ನೀಡಿದ್ದು, ವೆಂಟಿಲೇಟರ್‍ಗಳು ಪಿ.ಎಂ ಕೇರ್‍ನಿಂದ ಬಂದಿವೆ. ಈ ಐಸಿಯುನಿಂದ ಹೊರಗಿನಿಂದ ಒಳ ಬರುವ ಅಥವಾ ಒಳಗಿನಿಂದ ಹೊರ ಬರುವ ಗಾಳಿಯು ಸಂಪೂರ್ಣವಾಗಿ ಶುದ್ಧೀಕರಣಗೊಳ್ಳುತ್ತದೆ. ಜೊತೆಗೆ, ಪ್ರತ್ಯೇಕ ಆಕ್ಸಿಜನ್ ಸಂಪರ್ಕದ ಜತೆಗೆ, ನೀರು ಹಾಗೂ ಒಳಚರಂಡಿ ಪ್ರತ್ಯೇಕ ಸಂಪರ್ಕ ಇರುತ್ತದೆ. ಇಡೀ ರಾಜ್ಯದಲ್ಲೇ ಇಂಥ ಆಧುನಿಕ ಐಸಿಯು ಅನ್ನು ಮಾಗಡಿ ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ” ಎಂದರು.

FotoJet 1 54

ಇಲ್ಲಿಗೆ ಅಗತ್ಯವಾದ ಎಲ್ಲ ಔಷಧಿ, ಆಮ್ಲಜನಕ, ವೈದ್ಯಕೀಯ ಸರಂಜಾಮುಗಳು, ಸಿಬ್ಬಂದಿ ಕೊರತೆ ಇಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ. ನಾಲ್ವರಿಗೆ ಈ ಐಸಿಯುವಿನಲ್ಲಿ ಅತ್ಯುತ್ತಮ ಚಿಕಿತ್ಸೆ ಸಿಗುತ್ತದೆ ಎಂದು ಹೇಳಿದರು.

ಎರಡು ತಿಂಗಳಲ್ಲಿ ಆಕ್ಸಿಜನ್ ಘಟಕ: ಮಾಗಡಿ ಆಸ್ಪತ್ರೆಯಲ್ಲಿ ಈಗಾಗಲೇ 100 ಹಾಸಿಗೆಗಳಿದ್ದು, ಈ ಪೈಕಿ 50 ಬೆಡ್‍ಗಳಿಗೆ ಆಕ್ಸಿಜನ್ ಸೌಲಭ್ಯವಿದೆ. ಇನ್ನು ಕೆಲ ದಿನಗಳಲ್ಲಿಯೇ ಉಳಿದ 50 ಹಾಸಿಗೆಗಳನ್ನೂ ಆಕ್ಸಿಜನ್ ಬೆಡ್‍ಗಳನ್ನಾಗಿ ಪರಿವರ್ತನೆ ಮಾಡಲಾಗುವುದು. ಅಲ್ಲದೆ, ನಿಮಿಷಕ್ಕೆ 600 ಕೆಎಲ್ ಪೂರೈಕೆ ಸಾಮಥ್ರ್ಯದ ಆಮ್ಲಜನಕ ಉತ್ಪಾದಕ ಘಟಕವನ್ನೂ ಎರಡು ತಿಂಗಳಲ್ಲಿ ಸ್ಥಾಪನೆ ಮಾಡಲಾಗುವುದು. ಜೊತೆಗೆ, ಒಟ್ಟು ಬೆಡ್‍ಗಳಲ್ಲಿ 25% ಐಸಿಯು ಬೆಡ್‍ಗಳ ವ್ಯವಸ್ಥೆ ಮಾಡುವ ಉದ್ದೇಶವೂ ಇದೆ. ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಆಕ್ಸಿಜನ್ ಘಟಕಗಳನ್ನು ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಇದಲ್ಲದೆ, ಪ್ರಾಥಮಿಕ & ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸುಸಜ್ಜಿತ ಲ್ಯಾಬ್ ಹಾಗೂ ತುರ್ತು ಸಂದರ್ಭವನ್ನು ದೃಷ್ಟಿಯಲ್ಲಿಟ್ಟುಕೊಂಡು ಆಮ್ಲಜನಕ ಸಾಂದ್ರಕಗಳನ್ನೂ ಒದಗಿಸಲಾಗುವುದು ಎಂದರು.

ತಕ್ಷಣವೇ ಸಿಬ್ಬಂದಿ ನೇಮಕ: ಎಲ್ಲ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೂಡಲೇ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲಾಗುವುದು. ಮುಖ್ಯವಾಗಿ ಸೋಲೂರು ಮತ್ತು ತಿಪ್ಪಸಂದ್ರ ಸಮುದಾಯ ಆರೋಗ್ಯ ಕೇಂದ್ರಗಳಿಗೆ ತಕ್ಷಣವೇ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ASHWATH NARAYAN

ಇದಾದ ಮೇಲೆ ಉಪ ಮುಖ್ಯಮಂತ್ರಿಗಳು ಸಿದ್ಧಾರೂಢ ಮಠದ ಆಶ್ರಮದಲ್ಲಿ ಮುಂಚೂಣಿ ವಾರಿಯರ್ಸ್ ಹಾಗೂ ಆದ್ಯತಾ ಗುಂಪಿಗೆ ಲಸಿಕೆ ನೀಡುತ್ತಿರುವುದನ್ನು ವೀಕ್ಷಿಸಿದರು. ಬಳಿಕ ಹುಲಿಕೋಟೆಯ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿ ಅಲ್ಲಿ ನೇರವಾಗಿ ಸೋಂಕಿತರ ಯೋಗ ಕ್ಷೇಮ ವಿಚಾರಿಸಿದರು. ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಔಷಧಿ, ಆಹಾರದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು.

ಅಂತಿಮವಾಗಿ ವಿಜಿ ದೊಡ್ಡಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಟಿ ಪರಿಶೀಲನೆ ನಡೆಸಿದರಲ್ಲದೆ, ಕೊರತೆ ಇರುವ ಸಿಬ್ಬಂದಿ ನೇಮಕಕ್ಕೆ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಹಾಗೂ ಕೆಲ ದಿನಗಳಲ್ಲಿಯೇ ಇಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಅಳವಡಿಸಲಾಗುವುದು ಎಂದರು.

ಮಾಗಡಿ ಶಾಸಕ ಮಂಜುನಾಥ್, ಜಿಲ್ಲಾಧಿಕಾರಿ ರಾಕೇಶ ಕುಮಾರ, ಸಿಇಒ ಇಕ್ರಂ,ಡಿಎಚ್ ಒ ಡಾ.ನಿರಂಜನ್, ರೆನಾಕ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಸಾಜಿ ಅಬ್ರಹಾಂ, ಹಿರಿಯ ಪ್ರಧಾನ ವ್ಯವಸ್ಥಾಪಕ ಸುಧೀರ್ ಮೆನನ್, ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜ್, ಬಿಜೆಪಿ ಮುಖಂಡ ಕೃಷ್ಣಮೂರ್ತಿ, ಮಂಡಲಾಧ್ಯಕ್ಷ ಧನಂಜಯ, ತಾಲೂಕು ವೈದ್ಯಾಧಿಕಾರಿ ಮತ್ತಿತರರು ಡಿಸಿಎಂ ಜೊತೆಯಲ್ಲಿ ಉಪಸ್ಥಿತಿಯಲ್ಲಿದ್ದರು.

Share This Article
Facebook Whatsapp Whatsapp Telegram
Previous Article FotoJet 76 ಬಿಎಸ್‍ವೈ ಬಿಟ್ಟರೆ ಬಿಜೆಪಿಯಲ್ಲಿ ಸ್ಟಾರ್ ಲೀಡರ್ ಯಾರಿದ್ದಾರೆ : ಎಂ.ಪಿ. ಕುಮಾರಸ್ವಾಮಿ
Next Article Railway Station 3 ರೈಲುಗಳ ವೇಗಕ್ಕೆ ಕುಸಿದ ನಿಲ್ದಾಣದ ಕಟ್ಟಡ – ಫೋಟೋಗಳಲ್ಲಿ ನೋಡಿ

Latest Cinema News

Disha Patani 1
ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್‌ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್‌
Bollywood Cinema Latest Main Post National
diljit dosanjh kantara chapter 1 song rishab shetty
ಕಾಂತಾರಕ್ಕೆ ಕೈಜೋಡಿಸಿದ ಗಾಯಕ ದಿಲ್ಜಿತ್ ಸಿಂಗ್
Cinema Latest Main Post Sandalwood
marali manasagide song prema
ಮರಳಿ ಮನಸಾಗಿದೆ ಸಾಂಗ್ ರಿಲೀಸ್ ಮಾಡಿದ ನಟಿ ಪ್ರೇಮಾ
Cinema Latest Sandalwood Top Stories
Anushka Shetty
ಪತ್ರ ಬರೆದು ಅಭಿಮಾನಿಗಳಿಗೆ ಶಾಕ್ ಕೊಟ್ಟ ಅನುಷ್ಕಾ ಶೆಟ್ಟಿ!
Cinema Latest South cinema Top Stories
ranbir kapoor ramayana
ರಾಮನ ಪಾತ್ರಕ್ಕಾಗಿ ಮಾಂಸಾಹಾರ, ಮದ್ಯ ಸೇವನೆ ಬಿಟ್ಟಿದ್ದರಂತೆ ರಣ್‌ಬೀರ್ ಕಪೂರ್
Cinema Latest Sandalwood Top Stories

You Might Also Like

bengaluru truck accident young woman and her father died
Bengaluru City

ಬೆಂಗಳೂರು ಟ್ರಕ್‌ ಅಪಘಾತ – ಮದುವೆ ನಿಶ್ಚಯವಾಗಿದ್ದ ಯುವತಿಯ ದುರಂತ ಅಂತ್ಯ

2 minutes ago
Sushila Karki nepal
Latest

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ – ಪ್ರಮಾಣವಚನ ಸ್ವೀಕರಿಸಿದ ಸುಶೀಲಾ ಕರ್ಕಿ

24 minutes ago
R Ashok 1
Districts

Hassan Tragedy | ಮೃತರೆಲ್ಲ ಹಳ್ಳಿಯವ್ರು, 10 ಲಕ್ಷ ಪರಿಹಾರ ಕೊಟ್ರೆ ಒಳ್ಳೆಯದು – ಸರ್ಕಾರಕ್ಕೆ ಆರ್.ಅಶೋಕ್ ಮನವಿ

29 minutes ago
Ballary Praveen
Bellary

ಮನೆಗೆಲಸ ಮಾಡಿ ಪ್ರವೀಣ್‌ನನ್ನ ಎಂಜಿನಿಯರಿಂಗ್ ಓದಿಸ್ತಿದ್ದ ತಾಯಿ

32 minutes ago
Mohan Yadav Hot Air Balloon
Latest

ಹಾಟ್ ಏರ್ ಬಲೂನ್ ಹಾರುವ ಮುನ್ನವೇ ಬೆಂಕಿ – ಮಧ್ಯಪ್ರದೇಶ ಸಿಎಂ ಬಚಾವ್!

38 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?