ಬೆಂಗಳೂರು: ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
During his two-day visit to New Delhi, Chief Minister @BSBommai met Union Health & Family Welfare and Chemicals & Fertilizers Minister Shri @mansukhmandviya today and discussed about various aspects of Covid management including supply of vaccines & essential drugs.@MoHFW_INDIA pic.twitter.com/05UbaKCoKu
— CM of Karnataka (@CMofKarnataka) July 31, 2021
ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯಕ್ಕೆ 1.5 ಕೋಟಿ ಲಸಿಕೆ ಪೂರೈಸಲು ಕೋರಿಕೆ ಸಲ್ಲಿಸಿದ್ದು, 1 ಕೋಟಿ ಲಸಿಕೆ ಪೂರೈಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು. ಇದರಿಂದ ರಾಜ್ಯದಲ್ಲಿ ಪ್ರತಿದಿನ 2 ರಿಂದ 3 ಲಕ್ಷ ಲಸಿಕೆ ಒದಗಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.
'ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಗಳ ಹಿನ್ನಲೆಯಲ್ಲಿ, ಬಾಧಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಆದ್ಯತೆ ಮೇರೆಗೆ ರಕ್ಷಣೆ, ಪರಿಹಾರ, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ಸಂತ್ರಸ್ತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು' : ಮುಖ್ಯಮಂತ್ರಿ @BSBommai. pic.twitter.com/o8TF96OLxf
— CM of Karnataka (@CMofKarnataka) July 31, 2021
ಕೋವಿಡ್ 3 ನೇ ಅಲೆ ನಿಯಂತ್ರಣ, ಲಸಿಕೆ ಅಭಿಯಾನ ಹಾಗೂ ನೆರೆರಾಜ್ಯವಾದ ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಂದಾಗಿ ರಾಜ್ಯದ ಸರಹದ್ದು ಪ್ರವೇಶ ನಿಯಂತ್ರಿಸುವ ಕುರಿತು ಮಾರ್ಗಸೂಚಿ ಸದ್ಯದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿರುವುದಾಗಿ ಮುಖ್ಯಮಂತ್ರಿಗಳು ವಿವರಿಸಿದರು.