ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ರಾಜ್ಯದ ಐದು ಜಿಲ್ಲೆಗಳಲ್ಲಿ ಜುಲೈ 10ರ ವರೆಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 28-21
ಮಂಗಳೂರು: 29-25
ಶಿವಮೊಗ್ಗ: 27-22
ಬೆಳಗಾವಿ: 26-22
ಮೈಸೂರು: 28-22
ಮಂಡ್ಯ: 29-22
ರಾಮನಗರ: 29-22
ಮಡಿಕೇರಿ: 22-18
ಹಾಸನ: 26-20
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 27-20
ಕೋಲಾರ: 29-22
ತುಮಕೂರು: 28-21
ಉಡುಪಿ: 28-25
ಕಾರವಾರ: 28-26
ಚಿಕ್ಕಮಗಳೂರು: 24-19
ದಾವಣಗೆರೆ: 29-23
ಚಿತ್ರದುರ್ಗ: 29-22
ಹಾವೇರಿ: 28-23
ಬಳ್ಳಾರಿ: 32-24
ಧಾರವಾಡ: 26-22
ಗದಗ: 28-23
ಕೊಪ್ಪಳ: 29-23
ರಾಯಚೂರು: 32-25
ಯಾದಗಿರಿ: 32-24
ವಿಜಯಪುರ: 28-21
ಬೀದರ್: 30-23
ಕಲಬುರಗಿ: 32-24
ಬಾಗಲಕೋಟೆ: 30-23