Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಹಲವೆಡೆ ಧಾರಾಕಾರ ಮಳೆ- ಡ್ಯಾಂ ಭರ್ತಿಯಾಗಿ ರಸ್ತೆಯ ಮೇಲೆ ನೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಹಲವೆಡೆ ಧಾರಾಕಾರ ಮಳೆ- ಡ್ಯಾಂ ಭರ್ತಿಯಾಗಿ ರಸ್ತೆಯ ಮೇಲೆ ನೀರು

Bengaluru City

ರಾಜ್ಯದ ಹಲವೆಡೆ ಧಾರಾಕಾರ ಮಳೆ- ಡ್ಯಾಂ ಭರ್ತಿಯಾಗಿ ರಸ್ತೆಯ ಮೇಲೆ ನೀರು

Public TV
Last updated: June 26, 2020 11:29 am
Public TV
Share
2 Min Read
RAIN 10
SHARE

– ರೈತರ ಮೊಗದಲ್ಲಿ ಸಂತಸ
– ಆನೇಕಲ್‍ನಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು: ರಾಜ್ಯದ ಹಲವೆಡೆ ಅನೇಕ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಸಂತಸ ಮೂಡುತ್ತಿದೆ. ಮತ್ತೊಂದೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರ ಜೀವನ ಅಸ್ತವ್ಯಸ್ತವಾಗಿದೆ.

ಹಾವೇರಿ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಧಾರಾಕಾರವಾಗಿ ಮಳೆಯಾಗಿದೆ. ಜಿಲ್ಲೆಯ ರಾಣೇಬೆನ್ನೂರಿನ ಮೃತ್ಯುಂಜಯ ನಗರ ಸೇರಿದಂತೆ ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಮನೆಗೆ ನುಗ್ಗಿದ ನೀರು ಹೊರಹಾಕಲು ಜನರು ಹರಸಾಹಸಪಟ್ಟಿದ್ದಾರೆ. ಒಂದು ಗಂಟೆ ಕಾಲ ಸುರಿದ ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತವಾಗಿತ್ತು. ಅಲ್ಲದೆ ಹಾವೇರಿ ತಾಲೂಕು ಸೇರಿದಂತೆ ಬ್ಯಾಡಗಿ ವಿವಿಧ ಗ್ರಾಮದಲ್ಲಿ ಉತ್ತಮ ಮಳೆ ಆಗಿದೆ. ಕಳೆದ ಒಂದು ವಾರದಿಂದ ಮಳೆ ಇಲ್ಲದೆ ಜಿಲ್ಲೆಯ ಜನರು ಆತಂಕಗೊಂಡಿದ್ದರು. ಇದೀಗ ಮಳೆಯಿಂದ ಜಿಲ್ಲೆಯ ಜನರು ಸಂತಸಗೊಂಡಿದ್ದಾರೆ.

GLB RAIN EFFCT AV 1

ಚಿತ್ರದುರ್ಗ ಜಿಲ್ಲೆಯಾದ್ಯಂತ ತಡರಾತ್ರಿ ಸುರಿದ ಮಳೆಯಿಂದಾಗಿ ಹಿರೇಹಳ್ಳ ಮೈದುಂಬಿ ಹರಿಯುತ್ತಿದೆ. ಹೊಸದುರ್ಗ ತಾಲೂಕಿನ ಗೂಳಿಹಟ್ಟಿ ಸಮೀಪದಲ್ಲಿರುವ ಹಿರೇಹಳ್ಳ ಚೆಕ್ ಡ್ಯಾಂ ಭರ್ತಿಯಾಗಿ ರಸ್ತೆಯ ಮೇಲೆ ನೀರು ಹರಿಯುತ್ತಿದೆ.

ಗಡಿ ಜಿಲ್ಲೆ ಚಾಮರಾಜನಗರದ ಹಲವೆಡೆ ಕಳೆದ ರಾತ್ರಿಯಿಡಿ ಸೋನೆ ಮಳೆಯಾಗಿದೆ. ಗುರುವಾರ ಸಂಜೆ ಆರಂಭವಾದ ತುಂತುರು ಮಳೆ ರಾತ್ರಿಯಿಡಿ ಬಿದ್ದಿದೆ. ಜಿಲ್ಲೆಯ ಗುಂಡ್ಲುಪೇಟೆ, ಕೊಳ್ಳೇಗಾಲ, ಹನೂರು ಸೇರಿದಂತೆ ಹಲವೆಡೆ ಮಳೆಯಾಗಿದ್ದು, ರೈತರು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ಇಂದು ಕೂಡ ಚಾಮರಾಜನಗರದಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರಿದಿದ್ದು, ಮಳೆ ಬೀಳುವ ಸಾಧ್ಯತೆಯಿದೆ.

R

ಕಲಬುರಗಿ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಎರಡು ಗಂಟೆಗಳ ಕಾಲ ಸತತ ಮಳೆಯಾಗಿದ್ದು, ಈ ಮೂಲಕ ಬಿಸಿಲಿನಿಂದ ಕಂಗೆಟ್ಟ ಜನರಿಗೆ ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ವಾಡಿಕೆ ಪ್ರಕಾರ ಜೂನ್ ಎರಡನೇ ವಾರದಲ್ಲಿ ಜಿಲ್ಲೆಯಲ್ಲಿ ಮಳೆಯಾಗುತ್ತಿತ್ತು. ಆದರೆ ಈ ಬಾರಿ ವಾಡಿಕೆಯಂತೆ ಜಿಲ್ಲೆಯಲ್ಲಿ ಮಳೆಯಾಗಿಲ್ಲ. ಮುಂದಿನ ವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನೂ ಗದಗ ಜಿಲ್ಲೆಯಲ್ಲೂ ವರುಣನ ಸಿಂಚನ ಶುರುವಾಗಿದೆ. ತಡರಾತ್ರಿಯಿಂದ ತುಂತುರು ಮಳೆ ಆರಂಭವಾಗಿದ್ದು, ಬಿಸಿಲು, ಧೂಳುನಿಂದ ಕಂಗೆಟ್ಟ ಜನ್ರಿಗೆ ತುಂತುರು ಮಳೆ ಸ್ವಲ್ಪ ತಂಪೆರೆದಂತಾಗಿದೆ. ರೈತರು ಮುಂಗಾರು ಬಿತ್ತನೆಗೆ ಮುಗಿಲಾಚೆ ನೋಡುವಂತಾಗಿತ್ತು. ಸದ್ಯ ಮಳೆ ಆರಂಭವಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಧಾರವಾಡದಲ್ಲಿ ಕೂಡ ಧಾರಾಕಾರ ಮಳೆ ಸುರಿದಿದೆ. ಗುಡುಗು ಸಿಡಲು ಸಹಿತ ಸುರಿದ ಮಳೆಯಿಂದ ರೈತರು ಕೊಂಚ ನೆಮ್ಮದಿಯ ನಿಟ್ಡುಸಿರು ಬಿಟ್ಟಿದ್ದಾರೆ. ಹೊಲಗಳಲ್ಲಿ ಬಿತ್ತನೆ ಮಾಡಿದ್ದ ರೈತರಿಗೆ ಮಳೆ ಇಲ್ಲದ ಕಾರಣ ಕಂಗಾಲಾಗಿದ್ದರು. ಈ ಮಳೆಯಿಂದ ರೈತರು ಕೊಂಚ ಸಮಾಧಾನವಾಗುವಂತೆ ಆಗಿದೆ.

ANE 2

ಟ್ರಾಫಿಕ್ ಜಾಮ್:
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಕೊಪ್ಪಗೇಟ್ ಬಳಿ ರಾತ್ರಿ ಸುರಿದ ಧಾರಾಕಾರ ಮಳೆಗೆ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದವು. ರಸ್ತೆಗೆ ಅಡ್ಡಲಾಗಿ ವಿದ್ಯುತ್ ತಂತಿಗಳು ಬಿದ್ದಿದ್ದರಿಂದ ಕಿ.ಮೀವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು. ಗಂಟೆಗಟ್ಟಲೇ ಟ್ರಾಫಿಕ್ ಜಾಮ್‍ನಲ್ಲಿ ವಾಹನ ಸವಾರರು ಪರದಾಡುವಂತಾಗಿತ್ತು. ಅಲ್ಲದೇ ಟ್ರಾಫಿಕ್ ಜಾಮ್‍ನಿಂದ ಕೊಪ್ಪ ಗೇಟ್ ಗ್ರಾಮದ ಪುಟ್ಟ ರಸ್ತೆಗಳಲ್ಲಿ ಬೈಕ್ ಮತ್ತು ಕಾರುಗಳ ಓಡಾಟಕ್ಕೆ ಸ್ಥಳೀಯರ ವಿರೋಧ ವ್ಯಕ್ತಪಡಿಸಿದ್ದಾರೆ. ಕೊನೆಗೆ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಬಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಕಂಬ ಮತ್ತು ತಂತಿಗಳನ್ನು ತೆರವು ಮಾಡಿದರು.

TAGGED:farmershomepower polesPublic TVrainriverroadwaterನದಿನೀರುಪಬ್ಲಿಕ್ ಟಿವಿಮನೆಮಳೆರಸ್ತೆರೈತರುವಿದ್ಯುತ್ ಕಂಬಗಳು
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

DK Suresh
Bengaluru City

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಸರಿ ಇಲ್ಲ, ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ: ಡಿಕೆಸು

Public TV
By Public TV
12 minutes ago
DK Shivakumar and delegation
Bengaluru City

ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ

Public TV
By Public TV
26 minutes ago
Suryakumar Yadav
Cricket

ಭಾರತ – ಪಾಕಿಸ್ತಾನ ಮಧ್ಯೆ ಮತ್ತೆ ಅಮೆರಿಕ!

Public TV
By Public TV
46 minutes ago
PHAKEERA ARREST
Crime

ದಾವಣಗೆರೆ | 28 ವರ್ಷದ ಹಿಂದೆ ಟಿವಿ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌!

Public TV
By Public TV
50 minutes ago
Prahlad Joshi
Latest

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

Public TV
By Public TV
1 hour ago
Catherine Vautrin
Bengaluru City

ಬೆಂಗಳೂರಿಗೆ ಆಗಮಿಸಿದ ಫ್ರಾನ್ಸ್‌ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?