ಇಂದಿನಿಂದ ಜುಲೈ 13 ರವರೆಗೆ ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಜುಲೈ 13ರವರೆಗೆ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ರಾಜ್ಯ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.
ಇಂದು ಸಹ ದಕ್ಷಿಣ ಕನ್ನಡ, ಕೋಲಾರ, ಕೊಪ್ಪಳದಲ್ಲಿ ಮಳೆಯಾಗಿದೆ. ಕರಾವಳಿ, ದಕ್ಷಿಣ, ಉತ್ತರ ಒಳನಾಡಿನಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 24-20
ಮಂಗಳೂರು: 27-24
ಶಿವಮೊಗ್ಗ: 26-21
ಬೆಳಗಾವಿ: 25-21
ಮೈಸೂರು: 24-20
ಮಂಡ್ಯ: 26-21
ರಾಮನಗರ: 31-26
ಮಡಿಕೇರಿ: 20-17
ಹಾಸನ: 23-19
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 26-20
ಕೋಲಾರ: 27-21
ತುಮಕೂರು: 26-21
ಉಡುಪಿ: 27-24
ಕಾರವಾರ: 28-25
ಚಿಕ್ಕಮಗಳೂರು:22-18
ದಾವಣಗೆರೆ: 27-22
ಚಿತ್ರದುರ್ಗ: 27-21
ಹಾವೇರಿ: 27-22
ಗದಗ: 27-21
ಕೊಪ್ಪಳ: 29-22
ರಾಯಚೂರು: 31-23
ಯಾದಗಿರಿ: 31-23
ವಿಜಯಪುರ: 29-22
ಬೀದರ್: 28-22
ಕಲಬುರಗಿ: 31-22
ಬಾಗಲಕೋಟೆ: 30-23