ರಾಜ್ಯದ ಕರಾವಳಿ ಭಾಗದಲ್ಲಿ ಇಂದು ಗುಡುಗು ಸಿಡಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ಕರಾವಳೆಯ ಕೆಲ ಜಿಲ್ಲಗಳಲ್ಲಿ ಮಳೆಯ ಅಬ್ಬರ ಶುರುವಾಗಿದೆ. ಜೂನ್ 17ರ ವರೆಗೆ ಗುಡುಗುಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೆ ಇಂದಿನಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಕಡೆ ಮೋಡ ಕವಿದ ವಾತಾವರಣವಿರುತ್ತದೆ. ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ 16ರ ವರೆಗೆ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.ರಾಯಚೂರು, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-25
ಶಿವಮೊಗ್ಗ: 25-21
ಬೆಳಗಾವಿ: 24-21
ಮೈಸೂರು: 26-20
ಮಂಡ್ಯ: 27-22
ರಾಮನಗರ: 31-23
ಮಡಿಕೇರಿ: 20-17
ಹಾಸನ: 23-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 26-19
ಕೋಲಾರ: 28-21
ತುಮಕೂರು: 27-21
ಉಡುಪಿ: 28-25
ಕಾರವಾರ: 27-26
ಚಿಕ್ಕಮಗಳೂರು: 22-19
ದಾವಣಗೆರೆ: 26-22
ಚಿತ್ರದುರ್ಗ: 27-21
ಹಾವೇರಿ: 26-22
ಗದಗ: 26-21
ಕೊಪ್ಪಳ: 28-22
ರಾಯಚೂರು: 32-24
ಯಾದಗಿರಿ: 32-24
ವಿಜಯಪುರ: 27-21
ಬೀದರ್: 31-22
ಕಲಬುರಗಿ: 32-23
ಬಾಗಲಕೋಟೆ: 29-23