Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಕೋವಿಡ್ ವಾರ್ ರೂಂಗೆ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯ ಕೋವಿಡ್ ವಾರ್ ರೂಂಗೆ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಭೇಟಿ

Bengaluru City

ರಾಜ್ಯ ಕೋವಿಡ್ ವಾರ್ ರೂಂಗೆ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಭೇಟಿ

Public TV
Last updated: May 10, 2021 6:41 pm
Public TV
Share
4 Min Read
Ashwath Narayan
SHARE

– ಸಾಸ್ಟ್ ಪೋರ್ಟಲ್ ನಲ್ಲಿ ಆಮ್ಲಜನಕ, ರೆಮ್‍ಡೆಸಿವರ್, ಬೆಡ್ ಮಾಹಿತಿ
– ಟೆಸ್ಟ್ ವರದಿ ತಡವಾದರೆ ಲ್ಯಾಬ್‍ಗಳಿಗೆ ದಂಡ

ಬೆಂಗಳೂರು: ಆಮ್ಲಜನಕ, ರೆಮಿಡಿಸಿವಿರ್ ಜತೆಗೆ ಖಾಸಗಿ ಆಸ್ಪತ್ರೆಗಳಲ್ಲಿರುವ ಸರ್ಕಾರಿ ಬೆಡ್‍ಗಳ ಮಾಹಿತಿಯನ್ನು ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್ ಪೋರ್ಟಲ್ ನಲ್ಲಿ ಸಿಗುವ ಹಾಗೆ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ರಾಜ್ಯ ಕೋವಿಡ್ ವಾರ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು. ಆಮ್ಲಜನಕ & ರೆಮಿಡಿಸಿವಿರ್ ಬೇಡಿಕೆ- ಪೂರೈಕೆಯಲ್ಲಿ ಪಾರದರ್ಶಕತೆ ಬಹಳ ಮುಖ್ಯ. ಎಷ್ಟು ಪೂರೈಕೆ ಆಗುತ್ತಿದೆ? ಎಷ್ಟು ಬಳಕೆಯಾಗುತ್ತಿದೆ? ಯಾರಿಗೆ ಕೊಡಲಾಗಿದೆ? ಎಂಬ ಸಮಗ್ರ ಮಾಹಿತಿಯನ್ನು ಇದೇ ಪೋರ್ಟಲ್ ನಲ್ಲಿ ಅಪ್‍ಲೋಡ್ ಮಾಡಲಾಗುವುದು. ಈಗ ಪ್ರತಿ ದಿನ 35,000 ರೆಮಿಡಿಸಿವಿರ್ ಡೋಸ್ ಬೇಕಿದೆ ಎಂದರು.

Ashwath Narayan 4g

ಇದರ ಜತೆಗೆ, ರಾಜ್ಯಾದ್ಯಂತ ಆಕ್ಸಿಜನ್ ಬೆಡ್‍ಗಳಿಗೆ ಭಾರೀ ಬೇಡಿಕೆ ಇದೆ. ಸರ್ಕಾರಿ ಆಸ್ಪತ್ರೆಗಳ ಜತೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಇರುವ ಸರ್ಕಾರದ ಬೆಡ್‍ಗಳ ಮಾಹಿತಿಯನ್ನು ಕೂಡ ಈ ಪೋರ್ಟಲ್ ನಲ್ಲಿ ಹಾಕಲಾಗುವುದು. ಇದರಿಂದ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಬರುತ್ತದೆ. ಜತೆಗೆ ಸಾರ್ವಜನಿಕರಿಗೂ ವಾಸ್ತವ ಚಿತ್ರಣ ಸಿಗುವಂತಾಗಲಿದೆ ಎಂದರು.

ಇನ್ನು ಎರಡು-ಮೂರು ದಿನಗಳಲ್ಲೇ ಸಾಸ್ಟ್ ಪೋರ್ಟಲ್ ಗೆ (http://arogya.karnataka.gov.in/) ಮೇಲೆ ತಿಳಿಸಿದ ಎಲ್ಲವನ್ನೂ ಲಿಂಕ್ ಮಾಡಲಾಗುವುದು. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ತಿಳಿಸಿದರು.

COVID War Room

24 ಗಂಟೆ ಒಳಗೇ ರಿಸಲ್ಟ್ & ಬಿಯು ನಂಬರ್:
ಬೆಂಗಳೂರಿನಲ್ಲಿ ಈಗ ಪರೀಕ್ಷೆಯಾದ 24 ಗಂಟೆ ಒಳಗೇ ಫಲಿತಾಂಶ ಬಂದು ಬಿಯು ನಂಬರ್ ಜನರೇಟ್ ಆಗುತ್ತದೆ. ರಾಜ್ಯದ ಉದ್ದಗಲಕ್ಕೂ ಹೀಗೆಯೇ ಆಗಬೇಕು. ರಾಜ್ಯದ ಸರಾಸರಿ ಪರಿಸ್ಥಿತಿ ನೋಡಿದರೆ ರಿಸಲ್ಟ್ ಬರಲು ನಾಲ್ಕೂವರೆ ದಿನದಿಂದ ಎರಡು ದಿನವಾಗುತ್ತಿದೆ. ಫಲಿತಾಂಶ ವಿಳಂಬದಿಂದ ಸೋಂಕು ಉಲ್ಬಣಿಸಿ ಹೆಚ್ಚು ಪ್ರಾಣನಷ್ಟ ಆಗುತ್ತಿದೆ ಎಂದು ಡಿಸಿಎಂ ಕಳವಳ ವ್ಯಕ್ತಪಡಿಸಿದರು.

ಸ್ಯಾಂಪಲ್ ಕಲೆಕ್ಟ್ ಮಾಡಿದ ಒಂದು ದಿನದೊಳಗೆ ವರದಿ ಕೊಡುವುದಕ್ಕೆ ಇರುವ ಅಡ್ಡಿಗಳನ್ನು ನಿವಾರಿಸಲು ಎಲ್ಲ ಕ್ರಮ ಕೈಗೊಳ್ಳಲಾಗುತ್ತದೆ. ತಡವಾಗಿ ರಿಸಲ್ಟ್ ಕೊಡುವ ಲ್ಯಾಬ್‍ಗಳಿಗೆ ಪ್ರತಿ ಟೆಸ್ಟ್‍ಗೆ 150 ರೂ. ದಂಡ ವಿಧಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಕರ್ನಾಟಕ ಕೋವಿಡ್ ನಿರ್ವಹಣೆ ವಾರ್‌ ರೂಮ್‌ಗೆ ಭೇಟಿ ನೀಡಿ ಅದರ ಕಾರ್ಯ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ ಕ್ಷಿಪ್ರಗತಿಯಲ್ಲಿ ಕೆಲಸ ನಿರ್ವಹಿಸುವಂತೆ ಸೂಚಿಸಿದೆ.

24ಗಂಟೆ ಒಳಗಡೆ BU ನಂಬರ್‌ ನೀಡುವಂತೆ ಸೂಚಿಸಲಾಗಿದೆ. ತಡವಾಗಿ ಟೆಸ್ಟ್‌ ರಿಸಲ್ಟ್‌ ಕೊಡುವ ಲ್ಯಾಬ್‌ಗಳಿಗೆ ಪ್ರತಿ ಟೆಸ್ಟ್‌ಗೆ 150 ರೂ.ವರೆಗೆ ದಂಡ ವಿಧಿಸಲಾಗುವುದು.

1/3 pic.twitter.com/nUJzT5NqCi

— Dr. C.N. Ashwath Narayan (@drashwathcn) May 10, 2021

ಬೆಡ್‍ಗೆ ಬೇಡಿಕೆ ಹೆಚ್ಚಾಗಿದೆ:
ಬೆಂಗಳೂರಿನಲ್ಲಿ ಈಗ ಬೆಡ್ ಖಾಲಿ ಆಗುತ್ತಿರುವುದು ದಿನಕ್ಕೆ 950 ಮಾತ್ರ. ಆದರೆ 7,000 ದಿಂದ 8,000 ಬೆಡ್‍ಗಳಿಗೆ ಡಿಮಾಂಡ್ ಬರುತ್ತಿದೆ. ಇಷ್ಟು ಸೋಂಕಿತರಲ್ಲಿ ಟ್ರಾಯಾಜ್ (ವೈದ್ಯರ ಪರಿಶೀಲನೆ) ಆದ ಮೇಲೆ ಆಸ್ಪತ್ರೆಗೆ ಸೇರಬೇಕಾದವರೇ 2,000ಕ್ಕೂ ಹೆಚ್ಚು ಜನ ಇದ್ದಾರೆಂದು ಡಿಸಿಎಂ ಮಾಹಿತಿ ನೀಡಿದರು.

ಬೆಡ್ ಬೇಡಿಕೆ ನಿಭಾಯಿಸಲು ಸಮರ್ಪಕ ಟ್ರಾಯಾಜಿಂಗ್ ಮಾಡಬೇಕು. ಬೆಂಗಳೂರಿನಲ್ಲಿ ಎಲ್ಲ ವಾರ್ಡ್ ಮಟ್ಟದಲ್ಲಿಯೂ ಟ್ರಾಯಾಜಿಂಗ್ ಮಾಡಿ ಅರ್ಹರಿಗಷ್ಟೇ ಆಸ್ಪತ್ರೆಗೆ ಸೇರಿಸುವ ಅವಕಾಶ ಕಲ್ಪಿಸುವ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಕೆಲ ಕಡೆ ವೈಯಕ್ತಿಕ ಟ್ರಾಯಾಜಿಂಗ್ ಆರಂಭವಾಗಿದೆ. ಒಂದೊಂದು ಕಡೆಯೂ ಐವರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು ಡಾ.ಅಶ್ವತ್ಥನಾರಾಯಣ.

ICU & Oxygen ಹಾಸಿಗೆಗಳನ್ನು ಹೆಚ್ಚಿಸಲು ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದ್ದು ಈ ಮೂಲಕ ಬೆಂಗಳೂರು ನಗರದಲ್ಲಿ 10,000 ಮತ್ತು ಇನ್ನುಳಿದ ಭಾಗಗಳಿಗೆ 10,000 ಹಾಸಿಗೆಗಳನ್ನು ಹೆಚ್ಚಿಸಲಾಗುವುದು.

ಯಾವುದೇ ವೈದ್ಯಕೀಯ ಸೌಲಭ್ಯಗಳಿಗೆ ಅಧಿಕ ಬೆಲೆ ವಿಧಿಸುವುದು ಮತ್ತು ಕಾಳಸಂತೆಯಲ್ಲಿ ಮಾರಾಟ ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

3/3

— Dr. C.N. Ashwath Narayan (@drashwathcn) May 10, 2021

ಗಂಭೀರ ಸೋಂಕಿತರಿಗೆ ಬೆಡ್ ಒದಗಿಸುವ ಉದ್ದೇಶದಿಂದ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದ ಅವರು, ಈ ಸ್ಟೆಪ್ ಡೌನ್ ಆಸ್ಪತ್ರೆ & ಕೋವಿಡ್ ಕೇರ್ ಕೇಂದ್ರಗಳಲ್ಲಿ ಟ್ರಾಯಾಜಿಂಗ್, ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಗಂಭೀರವಲ್ಲದ ಸೋಂಕಿತರಿಗೆ ಇಲ್ಲಿಯೇ ಚಿಕಿತ್ಸೆ ಕೋಡಲಾಗುವುದು ಎಂದು ಡಿಸಿಎಂ ತಿಳಿಸಿದರು.

20,000 ಬೆಡ್ ಹೆಚ್ಚಳ:
ರಾಜ್ಯಾದ್ಯಂತ ಐಸಿಯು & ಆಕ್ಸಿಜನ್ ಬೆಡ್‍ಗಳನ್ನು ಹೆಚ್ಚಿಸಲಾಗುತ್ತಿದೆ. ಬೆಂಗಳೂರಿನಲ್ಲಿ 4,000 ಬೆಡ್‍ಗಳೂ ಸೇರಿದಂತೆ ರಾಜ್ಯದ ಉದ್ದಗಲಕ್ಕೂ 20,000 ಬೆಡ್‍ಗಳನ್ನು ಹೆಚ್ಚಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಿಂದ ರಾಜ್ಯಕ್ಕೆ 1200 ಮೆ.ಟನ್ ಆಮ್ಲಜನಕ ಹಂಚಿಕೆಯಾದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಡಾ.ಅಶ್ವತ್ಥನಾರಾಯಣ ವಿವರಿಸಿದರು.

DSC 0839

ಹೆಚ್ಚು ದರ ಸುಲಿಗೆ ಮಾಡಿದರೆ ಕ್ರಮ:
ಹೋಮ್ ಐಸೋಲೇಷನ್ ಪ್ರಮಾಣ ಹೆಚ್ಚುತ್ತಿರುವುದರಿಂದ ಪಲ್ಸಾಸ್ಕೋಮೀಟರ್‍ಗಳಿಗೆ ಡಿಮಾಂಡ್ ಜಾಸ್ತಿಯಾಗಿದೆ. ಮಾರುಕಟ್ಟೆಯಲ್ಲಿ ದುಬಾರಿ ಬೆಲೆಗೆ ಮಾರಲಾಗುತ್ತಿದೆ ಎಂಬ ಸರಕಾರಕ್ಕೆ ಬಂದಿದೆ. ಮೆಡಿಕಲ್ ಸ್ಟೋರ್‍ಗಳು ಆಗಿರಲಿ ಅಥವಾ ಇನ್ನಾರೇ ಆಗಿರಲಿ ಎಂಆರ್‍ಪಿಗಿಂತ ಹೆಚ್ಚು ಬೆಲೆಗೆ ಮಾರಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದು ಪ್ರತಿ ರೆಮ್‍ಡೆಸಿವರ್ ಸೇರಿ ಪ್ರತಿಯೊಂದು ಔಷಧಕ್ಕೂ ಅನ್ವಯ ಆಗುತ್ತದೆ. ಜನರು 112 ಹೆಲ್ಪ್‍ಲೈನ್ ಕರೆ ಮಾಡಿದರೆ ಅಂಥ ತಪ್ಪಿತಸ್ಥರನ್ನೂ ಕೂಡಲೇ ಬಂಧಿಸಲಾಗುವುದು. ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಶಿಕ್ಷೆಗೊಳಪಡಿಸಲಾಗುವುದು ಎಂದು ಡಿಸಿಎಂ ಎಚ್ಚರಿಕೆ ನೀಡಿದರು.

ಸರ್ಕಾರವು ದೊಡ್ಡ ಪ್ರಮಾಣದಲ್ಲಿ ಪಲ್ಸಾಸ್ಕೋಮೀಟರ್‍ಗಳನ್ನು ಖರೀದಿ ಮಾಡುತ್ತಿದೆ. ಪ್ರತೀ ಒಂದರ 350 ರೂ.ನಂತೆ ಕೊಡಲಾಗುತ್ತಿದೆ. ಹೀಗಿದ್ದರೂ ಜನರ ಅಗತ್ಯಕ್ಕಾಗಿ ಸರ್ಕಾರ ಹೆಚ್ಚು ಪ್ರಮಾಣದಲ್ಲಿ ಕೊಳ್ಳುತ್ತಿದೆ ಎಂದರು.

ASHWATH NARAYAN

ಡಿಸಿಎಂ ವಾರ್ ರೂಂಗೆ ಭೇಟಿ ನೀಡಿದ ವೇಳೆ ಮುಖ್ಯಮಂತ್ರಿಗಳ ಕಾರ್ಯನೀತಿ ಸಲಹೆಗಾರ ಪ್ರಶಾಂತ್ ಪ್ರಕಾಶ್ ಇದ್ದರು.

ಹಿರಿಯ ಐಎಎಸ್ ಅಧಿಕಾರಿಗಳಾದ ಪೊನ್ನುರಾಜ್, ಮೌನಿಷ್ ಮುದ್ಗಲ್, ಪ್ರದೀಪ್, ಅರುಂಧತಿ ಚಂದ್ರಶೇಖರ್, ಗಿರಿಗೌಡ, ಸಾಸ್ಟ್ ಪೋರ್ಟ್‍ಲ್ ಕಾರ್ಯನಿರ್ವಾಹಕ ನಿರ್ದೇಶಕಿ ಎನ್.ಟಿ. ಅಬ್ರು, ಕೆಎಎಸ್ ಅಧಿಕಾರಿ ರಾಜೇಂದ್ರ ಕುಮಾರ ಮತ್ತಿತರರು ಇದ್ದರು.

TAGGED:Ashwaththa NarayanCorona VirusCovid 19covid War RoomPublic TVಅಶ್ವತ್ಥ ನಾರಾಯಣ್ಕೊರೊನಾ ವೈರಸ್ಕೋವಿಡ್ 19ಕೋವಿಡ್ ವಾರ್ ರೂಂಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
27 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
48 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
49 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
54 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
59 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?