ರಾಜ್ಯ, ದೇಶದಲ್ಲಿ ರಾಜಕೀಯ ವಿಪ್ಲವ: ಕೋಡಿಮಠದ ಶ್ರೀಗಳ ಭವಿಷ್ಯ ವಾಣಿ

Public TV
1 Min Read
Kodi mutt Sri 2

ದಾವಣಗೆರೆ: ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ವಿಪ್ಲವ ಆಗಲಿದೆ ಎಂದು ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Kodi mutt Sri 1

ರಾಜಕೀಯ ವಿಪ್ಲವಕ್ಕೆ ಜನವರಿಯವರೆಗೂ ಸಮಯವಿದೆ. ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ. ಅದೇ ರೀತಿ ನಮ್ಮಲ್ಲಿಯೂ ವಿಪ್ಲವ ಆಗಲಿದೆ ಎಂದು ಪರೋಕ್ಷವಾಗಿ ಹೇಳುವ ಮೂಲಕ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂಬುದರ ಬಗ್ಗೆ ಹೇಳಿದರು.

Kodi mutt Sri 3

ಕೆಲ ದಿನಗಳ ಹಿಂದೆ ಗ್ರಹಣ ಫಲ ರಾಜಕೀಯ ವರ್ಗದ ಬಗ್ಗೆ ವಿಪ್ಲವ ಅಂತ ಬಂದಿದೆ. ಇದೇ ವೇಳೆ ಸಿಎಂ ಬಿ.ಎಸ್.ಯಡಿಯೂರಪ್ಪನವರ ಕುರಿತು ಕೇಳಿದ ಪ್ರಶ್ನೆಗೆ, ಒಬ್ಬೊಬ್ಬರ ಬಗ್ಗೆ ಹೇಳಲ್ಲ ಎಂದು ಉತ್ತರಿಸಿದರು.

Share This Article
Leave a Comment

Leave a Reply

Your email address will not be published. Required fields are marked *