Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯ ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಬಣ ರಾಜಕೀಯ

Public TV
Last updated: November 26, 2020 10:22 pm
Public TV
Share
3 Min Read
cabinet fight
SHARE

– ವರಿಷ್ಠರ ಭೇಟಿಗೆ ಮೂಲ, ವಲಸಿಗರಿಂದ ಸರ್ಕಸ್
– ಆಪ್ತೇಷ್ಠರ ಸಭೆ ರದ್ದುಗೊಳಿಸಿದ ಸಿಎಂ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಪಕ್ಕಾ ಆಗುತ್ತಿದ್ದಂತೆ, ಮೂಲ ಬಿಜೆಪಿಗರು ತಕರಾರು ಎತ್ತಿದ್ದಂತೆ ಕಾಣುತ್ತಿದೆ. ನಿನ್ನೆಯಷ್ಟೆ 17 ಮಂದಿಯಿಂದ ಸರ್ಕಾರ ಅಸ್ತಿತ್ವಕ್ಕೆ ಬಂದಿಲ್ಲ. 105 ಶಾಸಕರಿಂದ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದ ಬೆನ್ನಲ್ಲೇ, ಇದೀಗ ಗುಂಪು ರಾಜಕೀಯ ಶುರುವಾಗಿದೆ.

ಶಾಸಕರಾದ ಮುನಿರತ್ನ, ಉಮೇಶ್ ಕತ್ತಿ, ಮೇಲ್ಮನೆ ಸದಸ್ಯರಾದ ಆರ್. ಶಂಕರ್, ಸಿ.ಪಿ. ಯೋಗೇಶ್ವರ್, ಎಂಟಿಬಿ ನಾಗರಾಜ್ ಸಚಿವರಾಗುವುದು ಪಕ್ಕಾ ಆಗುತ್ತಿದ್ದಂತೆ, ದೆಹಲಿಯಲ್ಲಿ ಲಾಬಿ ಶುರುವಾಗಿದೆ.

ಶುಕ್ರವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಚೇರಿ ಪೂಜೆ ನೆಪದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಆರ್. ಅಶೋಕ್ ದೆಹಲಿಗೆ ಹಾರಿದ್ದಾರೆ. ಬಿಜೆಪಿ ವರಿಷ್ಠ ಜೆ.ಪಿ. ನಡ್ಡಾ ಕೂಡ ನಾಳಿನ ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆ ಇದ್ದು, ಅಲ್ಲಿ ಭೇಟಿ ಮಾಡುವ ಉದ್ದೇಶ ಹೊಂದಿದ್ದಾರೆ.

ct ravi 1

ಇನ್ನೊಂದೆಡೆ, ವಲಸಿಗ ತಂಡದ ಅಧಿನಾಯಕರಂತೆ ಬಿಂಬಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರ ರಚನೆಗೆ ಕಾರಣರಾದವರ ಪರ ನಿಂತಿದ್ದಾರೆ. ಜೆ.ಪಿ. ನಡ್ಡಾ ಭೇಟಿಗೆ ದಿನವಿಡಿ ಕಾದಿರುವ ಜಾರಕಿಹೊಳಿಗೆ ಇನ್ನೂ ಬುಲಾವ್ ಸಿಕ್ಕಿಲ್ಲ. ಒಂದು ವೇಳೆ ಶ್ರೀಮಂತ ಪಾಟೀಲ್‍ರನ್ನು ಸಂಪುಟದಿಂದ ಕೈಬಿಟ್ಟರೆ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಮುಂದೆ ಪ್ರಸ್ತಾಪ ಮುಂದಿಡಲು ಬಯಸಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ, ಸಿ.ಪಿ. ಯೋಗೇಶ್ವರ್ ಅವರನ್ನು ದಿಢೀರನೆ ದೆಹಲಿಗೂ ಕರೆಸಿಕೊಂಡಿರುವುದು ಕುತೂಹಲ ಮೂಡಿಸಿದೆ. ಇವತ್ತು ಆಪ್ತೇಷ್ಠ ಸಚಿವರ ಸಭೆ ಕರೆದಿದ್ದ ಸಿಎಂ ಯಡಿಯೂರಪ್ಪ, ಚಾಮರಾಜನಗರದಿಂದ ಬರೋದು ತಡವಾಗಿದ್ದರಿಂದ ಕೊನೆ ಕ್ಷಣದಲ್ಲಿ ಸಭೆ ರದ್ದುಗೊಳಿಸಿದ್ದಾರೆ. ಆದರೆ ಸಚಿವರಾದ ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ,ಜೆ.ಸಿ. ಮಾಧುಸ್ವಾಮಿ, ಬಿ.ಸಿ.ಪಾಟೀಲ್ ಸೇರಿ ಹಲವರು ಸಂಜೆ ಸಿಎಂ ಭೇಟಿ ಮಾಡಿದರು.

yediyurappa corona 1 1

ಕ್ಯಾಬಿನೆಟ್‌ ಸಭೆ:
ಸಂಪುಟ ವಿಸ್ತರಣೆಯ ಗೊಂದಲದ ಮಧ್ಯೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಸಂಪುಟ ಸಭೆ ಕರೆದಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಆರ್. ಅಶೋಕ್ ಹಾಗೂ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಇರುವ ಕಾರಣ ನಾಳಿನ ಸಭೆಯಲ್ಲಿ ಭಾಗಿಯಾಗೋದು ಅನುಮಾನವಾಗಿದೆ. ನಾಳೆ ಸಂಪುಟ ಸಭೆ ಬಳಿಕ ಸಿಎಂ ಯಡಿಯೂರಪ್ಪ ಖುದ್ದಾಗಿ ಸುದ್ದಿ ನಡೆಸಲಿದ್ದು, ಏನ್ ಹೇಳ್ತಾರೋ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮನೆ ಮಾಡಿದೆ.

ಈ ಬೆಳವಣಿಗೆಗಳ ಮಧ್ಯೆ, ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಸಚಿವೆ ಶಶಿಕಲಾ ಜೊಲ್ಲೆ, ನಾನ್ಯಾಕೆ ಸಚಿವೆ ಸ್ಥಾನ ತ್ಯಾಗ ಮಾಡಲಿ. ಸಂಪುಟದಲ್ಲಿ ಇರೋದು ನಾನೊಬ್ಬಳೇ ಸಚಿವೆ ಅಂತ ಸೆಡ್ಡು ಹೊಡೆದಿದ್ದಾರೆ. ನಿನ್ನೆಯಷ್ಟೇ ಸುತ್ತೂರು ಶ್ರೀಗಳ ಎದುರು ಸಿಎಂ ಯಡಿಯೂರಪ್ಪ ವಿರುದ್ಧ ಸಂಸದ ಶ್ರೀನಿವಾಸ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಶ್ರೀನಿವಾಸ್ ಪ್ರಸಾದ್ ಅಳಿಯ ಹಾಗೂ ನಂಜನಗೂಡು ಶಾಸಕ ಹರ್ಷವರ್ಧನ್, ಮೈಸೂರು ಭಾಗದ ದಲಿತ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು ಅಂತಾ ಆಗ್ರಹಿಸಿದ್ದಾರೆ. ಇವೆಲ್ಲದರ ಮಧ್ಯೆ, ನಾಳೆ ಸಂಸದರ ಅನೌಪಚಾರಿಕ ಸಭೆಯನ್ನು ಸಿಎಂ ಕರೆದಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ರೇಣುಕಾಚಾರ್ಯ ಯೂಟರ್ನ್‌:
ಬಿಜೆಪಿಯಲ್ಲಿ ಮೂಲ-ವಲಸಿಗ ಫೈಟ್‍ಗೆ ತೇಪೆ ಹಚ್ಚುವ ಕೆಲಸ ನಡೆದಿದೆ. ನಿನ್ನೆ ಮಿತ್ರಮಂಡಳಿ ವಿರುದ್ಧ ಹೇಳಿಕೆ ನೀಡಿದ್ದ ಮಾಜಿ ಮಂತ್ರಿ ರೇಣುಕಾಚಾರ್ಯ ಇವತ್ತು ಉಲ್ಟಾ ಹೊಡೆದಿದ್ದಾರೆ. 17 ಜನರ ಬಗ್ಗೆ ನಾನು ಎಲ್ಲೂ ಮಾತಾಡಿಲ್ಲ. ಅವರಿಗೆ ಅಧಿಕಾರ ಕೊಟ್ಟಿದ್ದನ್ನು ಪ್ರಶ್ನೆ ಮಾಡಿಲ್ಲ. ಈ ಬಗ್ಗೆ ಗೊಂದಲ ಬೇಡ ಎಂದಿದ್ದಾರೆ. ಹಾಸನದಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ, ಬಿಜೆಪಿಯಲ್ಲಿ ಮೂಲ ವಲಸಿಗ ಅಂತಾ ಏನಿಲ್ಲ. ಬಿಜೆಪಿಯವರು ನಾವೆಲ್ಲಾ ಒಂದೇ ಎಂದಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತ್ರ, ರಮೇಶ್ ಜಾರಕಿಹೊಳಿ ಮನೆಯಲ್ಲಿ ಒಂದು ಕಡೆ, ಇನ್ನೊಬ್ಬರ ಮನೆಯಲ್ಲಿ ಮತ್ತೊಂದು ಮೀಟಂಗ್ ನಡೆಯುತ್ತಲ್ಲಾ ಇದಕ್ಕೆ ಏನಂತಾರೆ ಅಂತಾ ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಬಿಜೆಪಿಯಲ್ಲಿ ಮೂಲ ವಲಸಿಗ ಎಂಬ ಹೊಗೆ ಆಡ್ತಿದೆ. ಇದು ಹೀಗೆ ಮುಂದುವರಿದರೆ ಯಡಿಯೂರಪ್ಪ ಖಂಡಿತ ಇನ್ನೊಂದು ಉಪ ಚುನಾವಣೆಯವರೆಗೆ ಸಿಎಂ ಕುರ್ಚಿಯಲಿ ಉಳಿಯಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

TAGGED:bjpcabinetdelhikannada newskarnatakapoliticsಕರ್ನಾಟಕಕ್ಯಾಬಿನೆಟ್ಬಿಜೆಪಿರಾಜಕೀಯ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
5 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
5 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
6 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
7 hours ago

You Might Also Like

Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
13 minutes ago
Plane Crash Modi tweet
Latest

ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ: ಮೋದಿ

Public TV
By Public TV
22 minutes ago
Bengaluru Chinnaswamy Stadium Stampede Case RCBs Marketing Head Nikhil Sosale Arrested in Airport
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

Public TV
By Public TV
47 minutes ago
Ahmedabad Air India Plane Crash
Crime

ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

Public TV
By Public TV
51 minutes ago
Air India Bird Hit Ahmedabad Plane Crash
Latest

ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

Public TV
By Public TV
1 hour ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?