ರಾಜ್ಯ ಸರ್ಕಾರ ವಜಾಕ್ಕೆ ರಾಜ್ಯಪಾಲರು ಶಿಫಾರಸ್ಸು ಮಾಡಬೇಕು – ಸಿದ್ದರಾಮಯ್ಯ

Public TV
1 Min Read
SIDDARAMYA

ಬೆಂಗಳೂರು: ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ಬಗ್ಗೆ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿರುವುದರಿಂದ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ಪತ್ರ ಬರೆದು ರಾಜ್ಯ ಸರ್ಕಾರವನ್ನು ವಜಾ ಮಾಡಲು ಶಿಫಾರಸ್ಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Vajubhai Rudabha Vala

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು, ಸ್ವಾಮೀಜಿಗಳ ಬಗ್ಗೆ ನಾನು ಮಾತಾಡಲ್ಲ. ಆದರೆ ಬಿಜೆಪಿಯಲ್ಲಿ ಕುರ್ಚಿಗೆ ಕಚ್ಚಾಟ ನಡೀತಿದೆ, ಆಡಳಿತ ಕುಸಿದಿದೆ, ಲೀಡರ್ ಇಲ್ಲ, ಸರ್ಕಾರ ಇಲ್ಲ, ರಾಜ್ಯ ದಿವಾಳಿ ಆಗಿದೆ. ಭ್ರಷ್ಟಾಚಾರ ವ್ಯಾಪಕವಾಗಿದೆ ಎಂದು ಅವರ ಪಕ್ಷದವರೇ ಹೇಳಿಕೆ ನೀಡಿ ದಾಖಲೆ ಬಿಡುಗಡೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ – ವಿಶ್ವನಾಥ್ ಆರೋಪ

Aravind Bellad Letter 2 medium

ರಾಜ್ಯಾದ್ಯಂತ ಭ್ರಷ್ಟಾಚಾರದ ವಾಸನೆ ಹೊಡಿತೀದೆ ಎಂದು ಬಿಜೆಪಿ ಪಕ್ಷದವರೇ ಗಂಭೀರ ಆರೋಪ ಹೊರಿಸಿದ್ದಾರೆ. ಹಾಗಾಗಿ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ತಿಳಿಸಿ ಸರ್ಕಾರ ವಜಾ ಮಾಡಬೇಕು. ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ಆಗಲಿ, ಬೆಲ್ಲದ್ ಬಹಿರಂಗವಾಗಿ ಹೇಳಿದ್ದಾರೆ ಎಲ್ಲದರ ತನಿಖೆ ನಡೆಯಬೇಕು ಎಂದಿದ್ದಾರೆ. ಬಳಿಕ ತಮ್ಮ ಬಗ್ಗೆ ಆರೋಪ ಮಾಡಿರುವ ಹೆಚ್. ವಿಶ್ವನಾಥ್ ಕುರಿತು ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ಮೌನಕ್ಕೆ ಶರಣಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *